ನಿರ್ಭೀತ ಚುನಾವಣೆ ನಡೆಸಲು ಸಿದ್ಧ
Team Udayavani, Apr 9, 2018, 6:15 AM IST
ಉಡುಪಿ: ಚುನಾವಣೆಗಿನ್ನು ತಿಂಗಳು ಬಾಕಿ ಇವೆ. ಪೊಲೀಸ್ ಇಲಾಖೆ ಮಾತ್ರ ಚುನಾವಣೆ ಘೋಷಣೆಯಾದ ದಿನದಿಂದಲೇ ಅಲರ್ಟ್ ಆಗಿದೆ. ನೀತಿ ಸಂಹಿತೆ ಜಾರಿಯಾದ ತತ್ಕ್ಷಣವೇ ತಪಾಸಣಾ ಕಾರ್ಯ ಪ್ರಾರಂಭಿಸಿ ಕಾನೂನು ಸುವ್ಯವಸ್ಥೆಯತ್ತ ಚಿತ್ತ ಹರಿಸಿದೆ.
ಚುನಾವಣಾ ಬಂದೋಬಸ್ತ್, ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಕಿರು ಮಾಹಿತಿಯನ್ನು ಎಸ್ಪಿ ಲಕ್ಷ್ಮಣ ಬ. ನಿಂಬರಗಿ ಅವರು “ಉದಯವಾಣಿ’ ಸಂವಾದದಲ್ಲಿ ವಿವರಿಸಿದ್ದಾರೆ.
ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ಕ್ಷೇತ್ರಗಳಲ್ಲಿನ ಸೂಕ್ಷ್ಮ, ಅತಿಸೂಕ್ಷ್ಮ, ನಕ್ಸಲ್ ಬಾಧಿತ ಗ್ರಾಮಗಳನ್ನು ಗುರುತಿಸಿ ಚುನಾವಣಾ ಕರ್ತವ್ಯಕ್ಕೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಧಿಕಾರಿಗಳು, ಬೀಟ್ ಪೊಲೀಸರ ಭೇಟಿ,ಇನ್ಸ್ಪೆಕ್ಟರ್, ಪಿಎಸ್ಐಗಳ ಸಭೆ ನಡೆಸಲಾಗುತ್ತಿದೆ. ಕೆಲ ಪ್ರದೇಶಗಳಲ್ಲಿ ನಾನು ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ ಎಂದಿದ್ದಾರೆ.
ಅಕ್ರಮ ಕಣ್ಗಾವಲಿಗೆ 24×7 ಚೆಕ್ಪೋಸ್ಟ್
ಜಿಲ್ಲೆಯಾದ್ಯಂತ ಕಣ್ಗಾವಲಿಗೆ ಪ್ರಸ್ತುತ 17 ಕಡೆಗಳಲ್ಲಿ ಪೊಲೀಸ್ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ. ರಾ.ಹೆ. 66ರಲ್ಲಿ ಹೆಜಮಾಡಿ, ಸಾಸ್ತಾನ (ತೆಕ್ಕಟ್ಟೆ) ಮತ್ತು ಶಿರೂರಿನಲ್ಲಿ ಹಾಗೂ ಉಳಿದಂತೆ ರಾಜ್ಯ, ಪಿಡಬ್ಲೂéಡಿ ರಸ್ತೆಗಳಲ್ಲಿ 14 ಕಡೆ ಚೆಕ್ಪೋಸ್ಟ್ ಹಾಕಲಾಗಿದೆ. ಚೆಕ್ಪೋಸ್ಟ್ ನಲ್ಲಿ ದಿನದ 24 ಗಂಟೆ 3 ಪಾಳಿಯಲ್ಲಿ ಪೊಲೀಸರ 51 ತಂಡಗಳು ಕಾರ್ಯì ನಿರ್ವಹಿಸಲಿದೆ. ಕೆಲ ಕಡೆಗಳಲ್ಲಿ ಸಿಸಿ ಟಿವಿ ಕೆಮರಾವನ್ನೂ ಅಳವಡಿಸಲಾಗಿದೆ. ಅಧಿಕಾರಿ/ಸಿಬಂದಿ ಕಾರ್ಯನಿರ್ವಹಿಸಲು ಪೆಂಡಾಲ್ ನಿರ್ಮಿಸಲಾಗಿದೆ. ತಂಡದಲ್ಲಿ ಪೊಲೀಸರ ಜತೆಗೆ ಕಂದಾಯ ಸಹಿತ ವಿವಿಧ ಇಲಾಖೆಗಳ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅಧಿಕಾರ ವಿರುವ ಅಧಿಕಾರಿಗಳನ್ನೂ ನಿಯೋಜಿಸಿಕೊಳ್ಳಲಾಗಿದೆ. ಪೊಲೀಸರ ತಪಾಸಣೆಯ ವೇಳೆ ವಾಹನದ ವಾರಸುದಾರರು ಸಹಕರಿಸಬೇಕು. ಯಾರೂ ಅಡ್ಡಿಪಡಿಸಬಾರದು ಎಂದರು.
ನೀತಿ ಸಂಹಿತೆ ಪ್ರಕರಣ; ನಗದು ವಶ
1 ವಿಧಾನಸಭಾ ಕ್ಷೇತ್ರದಲ್ಲಿ 9 ಫ್ಲೈಯಿಂಗ್ ಸ್ಕ್ವಾಡ್, ಹೀಗೆ ಒಟ್ಟು 5 ಕ್ಷೇತ್ರದಲ್ಲಿ 45 ಫ್ಲೆ „ಯಿಂಗ್ ಸ್ಕ್ವಾಡ್ಗಳು ಕಾರ್ಯಾಚರಿಸುತ್ತಲಿವೆ. ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಇಟ್ಟುಕೊಳ್ಳಲಾಗಿದೆ. ಫೋನ್,ವಾಟ್ಸ್ಆ್ಯಪ್ ಮೂಲಕ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಜಿಲ್ಲೆಯಾದ್ಯಂತ ಆಯಾ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ವಾಹನ ತಪಾಸಣೆಯ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 59,000 ರೂ. ನಗದನ್ನು ನೇಜಾರಿನ ಚೆಕ್ಪೋಸ್ಟ್ನಲ್ಲಿ ಹಾಗೂ 3,56,600 ರೂ. ನಗದನ್ನು ಸಾಸ್ತಾನದ ಚೆಕ್ಪೋಸ್ಟ್ನಲ್ಲಿ ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಇದನ್ನು ಜಿಲ್ಲಾ ಸಮಿತಿಗೆ ಹಸ್ತಾಂತರಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದವರು ಹೇಳಿದರು.
ಮುಚ್ಚಳಿಕೆ ಪ್ರಕ್ರಿಯೆ
ಕೋವಿಗಳನ್ನು ಸ್ಥಳೀಯ ಠಾಣೆಗಳಲ್ಲಿ ಜಮಾ ಮಾಡುವಂತೆ ಸೂಚಿಸಲಾಗಿದೆ. ಶೇ. 95ರಷ್ಟು ಮಂದಿ ಸೂಚನೆ ಪಾಲಿಸಿದ್ದಾರೆ. ಶೇ. 5 ಮಂದಿ ಇನ್ನೂ ಡಿಪಾಸಿಟ್ ಮಾಡಿಲ್ಲ. ಕಾನೂನು ಉಲ್ಲಂ ಸಿದರೆ ಕೋವಿ ಲೈಸನ್ಸ್ ರದ್ದತಿಗೆ ಕ್ರಮ ಕೈಗೊಳ್ಳ ಲಾಗುತ್ತದೆ. ರೌಡಿ, ಗೂಂಡಾ, ಕಮ್ಯೂನಲ್ ಗೂಂಡಾ, ಮತದಾರರ ಮೇಲೆ ಪ್ರಭಾವ ಬೀರುವವರು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಸೆಕ್ಯೂರಿಟಿಯಾಗಿ ಮುಚ್ಚಳಿಕೆ ಬರೆಯಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಲಿದೆ.
ಸಮಾಜಘಾತಕ ಶಕ್ತಿಗಳು ಜನರಲ್ಲಿ ಭಯ ಹುಟ್ಟಿಸಲು ಪ್ರಯತ್ನ ಪಡುತ್ತಲೇ ಇರುತ್ತಾರೆ. ಆ ಭಯವನ್ನು ಹೋಗಲಾಡಿಸಿ ಜನರು ವಿಶ್ವಾಸ ಮತ್ತು ನಂಬಿಕೆಯಿಂದ ಶಾಂತಿಯುತವಾಗಿ ಗರಿಷ್ಠ ಮತದಾನ ಮಾಡುವಂಥ ಸಮಾಜ ನಿರ್ಮಿಸಬೇಕಿದೆ. ಮುಕ್ತ, ನಿರ್ಭೀತ, ಸುಗಮ ಚುನಾವಣೆಯ ಉದ್ದೇಶ ಈಡೇರಬೇಕು. ಎಲ್ಲಿ ಯಾದರೂ ಚುನಾವಣಾ ನೀತಿ ಸಂಹಿತೆ ಉಲ್ಲಂ ಸುತ್ತಿರುವುದು ಕಂಡುಬಂದರೆ ಆ ಕೂಡಲೇ ಜಿಲ್ಲಾ ಚುನಾವಣಾಧಿಕಾರಿಗಳು ಬಿಡುಗಡೆಗೊಳಿಸಿರುವ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ಕೊಡಬೇಕು.
ಬರಲಿದೆ ಪ್ಯಾರಾ ಮಿಲಿಟರಿ ಪಡೆ
ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ 2 ತಂಡದ ಕಂಪೆನಿಯಂತೆ ಕೇಂದ್ರೀಯ ಪ್ಯಾರಾ ಮಿಲಿಟರಿ ಫೋರ್ಸ್ ಬರಬಹುದೆಂಬ ನೆಲೆಯಲ್ಲಿ ಯೋಜನೆ ಹಾಕಿಕೊಳ್ಳಲಾಗಿದೆ. ಲಭ್ಯವಿರುವಷ್ಟು ಫೋರ್ಸ್ ಹಂತ- ಹಂತವಾಗಿ ಜಿಲ್ಲೆಗೆ ಆಗಮಿಸಲಿದೆ. ಪ್ಯಾರಾ ಮಿಲಿಟರಿಯ 1 ಕಂಪೆನಿ ಬಂದಿದ್ದು, ಕುಂದಾಪುರ ಭಾಗದಲ್ಲಿ ನಿಯೋಜಿಸಲಾಗಿದೆ. ಚೆಕ್ಪೋಸ್ಟ್ಗಳಲ್ಲಿಯೂ ಶಸ್ತ್ರಸಜ್ಜಿತರಾಗಿ ಕಾರ್ಯನಿರ್ವಹಿಸಲಿದ್ದಾರೆ.
– ಚೇತನ್ ಪಡುಬಿದ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ