ಟೀಕೆ ನಿರ್ಲಕ್ಷಿಸಿ ಗುರಿ ಸಾಧನೆಯೆಡೆಗೆ ಮುನ್ನುಗ್ಗಿ


Team Udayavani, Aug 28, 2018, 6:00 AM IST

260818astro06.jpg

ಉಡುಪಿ: ಸಾಧಿಸಬೇಕೆಂಬ ಛಲ, ಗುರಿ, ಸದುದ್ದೇಶದೊಂದಿಗೆ ಮುನ್ನಡೆಯುವಾಗಲೂ ಹಲವು ಟೀಕೆ, ಸಂಕಷ್ಟ ಸಹಜ. ವಿದ್ಯಾರ್ಥಿಗಳು ಅಡೆತಡೆ ಗಳನ್ನೆಲ್ಲ ಎದುರಿಸಿ ಮುನ್ನುಗ್ಗಿದರೆ ಯಶಸ್ಸು ಸಾಧ್ಯ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್‌ ನಿಂಬರಗಿ ಹೇಳಿದರು.

ರವಿವಾರ ರಾಜಾಂಗಣದಲ್ಲಿ ನಡೆದ ವಿನಮ್ರ ಸಹಾಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ನಿಂಬರಗಿ ಅವರು, ತನ್ನ ವಿದ್ಯಾರ್ಥಿ ಜೀವನ, ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)ದ ಪರೀಕ್ಷೆ ಸಂದರ್ಭ ಎದುರಿಸಿದ ಸವಾಲುಗಳನ್ನು ವಿವರಿಸಿ ಅದನ್ನು ಎದುರಿಸಿದ ಬಗೆಯನ್ನು ವಿವರಿಸಿ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದರು.

ಮಾತೃಭಾಷೆಯಲ್ಲಿ ಯಶಸ್ಸು
ವಿಜಯಪುರದ ಇಂಡಿ ತಾಲೂಕಿನ ಕುಗ್ರಾಮದಲ್ಲಿ ಜನಿಸಿ ಎಸೆಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದೆ. ಅನಂತರ ಹಿರಿಯರೋರ್ವರ ಸೂಚನೆಯಂತೆ ಪಿಯುಸಿಗೆ ಸೇರ್ಪಡೆಯಾದೆ. ವಿಜ್ಞಾನ ವಿಷಯ ಭಾರೀ ಸವಾಲಾಯಿತು. ಆರಂಭ ದಲ್ಲಿ ಪೂರ್ಣ ವೈಫ‌ಲ್ಯ ಕಂಡೆ. ಆದರೆ ಎದೆಗುಂದದೆ ಪ್ರಯತ್ನ ಮುಂದುವರಿಸಿ ಸಫ‌ಲನಾದೆ. ಮುಂದೆ ಎಂಜಿನಿಯರಿಂಗ್‌ ಓದಿದೆ. ಬಳಿಕ ಉದ್ಯೋಗ ಮಾಡುವ ಬದಲು ಯುಪಿಎಸ್‌ಸಿ ಪರೀಕ್ಷೆ ಬರೆಯಲು ಮುಂದಾದೆ. ಎರಡು ಬಾರಿ ವಿಫ‌ಲನಾದೆ. ಆಗ ಹಲವೆಡೆಗಳಿಂದ ಟೀಕೆಗಳು ಬಂದವು. ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ನಾನು ಎಂಜಿನಿಯರಿಂಗ್‌ ಮುಗಿಸಿ ಉದ್ಯೋಗ ಪಡೆಯದೇ ಇದ್ದ ಬಗ್ಗೆಯೂ ಅನೇಕರು ಟೀಕಿಸಿದರು. ಆದಾಗ್ಯೂ ಪ್ರಯತ್ನ ನಿಲ್ಲಸಲಿಲ್ಲ. ಮಾತೃಭಾಷೆ ಕನ್ನಡದಲ್ಲಿದ್ದ ಹಿಡಿತ ಆಂಗ್ಲಭಾಷೆಯಲ್ಲಿ ಇಲ್ಲದ್ದರಿಂದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಗಳಿಕೆ ಸಾಧ್ಯವಾಗಲಿಲ್ಲ ಎಂಬುದು ಮನದಟ್ಟಾಯಿತು. ಮೂರನೇ ಬಾರಿ ಮತ್ತಷ್ಟು ಶ್ರಮ ಹಾಕಿ ಕನ್ನಡ ಮಾಧ್ಯಮದಲ್ಲಿ ಯುಪಿಎಸ್‌ಸಿ ಬರೆದೆ; ದೇಶಕ್ಕೆ 104ನೇ ರ್‍ಯಾಂಕ್‌ ಗಳಿಸಿದೆ. ನನ್ನ ಶ್ರಮಕ್ಕೆ ಪ್ರತಿಫ‌ಲ ಸಿಕ್ಕಿತು. ಟೀಕಿಸುವವರಿಗೆ ಉತ್ತರವೂ ಸಿಕ್ಕಿತು. ನನ್ನ ಉದ್ದೇಶ, ಗುರಿ ಸ್ಪಷ್ಟವಾಗಿದ್ದುದರಿಂದ ಇದು ಸಾಧ್ಯವಾಯಿತು.

ಕೆ. ಶಿವರಾಮ್‌ ಅವರನ್ನು ಹೊರತು ಪಡಿಸಿದರೆ ಕರ್ನಾಟಕದಿಂದ ಯಾರು ಕೂಡ ಕನ್ನಡದಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆಯುವ ಸಾಹಸಕ್ಕೆ ಹೋಗಿರಲಿಲ್ಲ. ನನ್ನ ಯಶಸ್ಸಿನ ಅನಂತರ ಈಗ ಪ್ರತಿವರ್ಷ ರಾಜ್ಯದ 3-4 ಮಂದಿ ಕನ್ನಡ
ದಲ್ಲಿಯೇ ಯುಪಿಎಸ್‌ಸಿ ಪರೀಕ್ಷೆ ತೇರ್ಗಡೆಯಾಗುತ್ತಿದ್ದಾರೆ. ಇದು ಕನ್ನಡ ಮಾಧ್ಯಮ ವಿದ್ಯಾಥಿಗಳಲ್ಲಿ ಹೊಸ ಆತ್ಮಸ್ಥೈರ್ಯ ಮೂಡುವಂತೆ ಮಾಡಿದೆ’ ಎಂದವರು ತಿಳಿಸಿದರು.

ವಿದ್ಯಾರ್ಥಿಗಳಿಗೆ ಎಸ್‌ಪಿ ಕಿವಿಮಾತು
-  ನಿಮ್ಮ ದೌರ್ಬಲ್ಯವೇ ನಿಮ್ಮ ಶಕ್ತಿ, ನಿಮ್ಮ ಶಕ್ತಿಯೇ ದೌರ್ಬಲ್ಯವಾಗಬಹುದು. ಹಟದಿಂದ ಒಳ್ಳೆಯ ಫ‌ಲಿತಾಂಶ ಕೂಡ ಸಿಗಬಹುದು. ಆದರೆ ಕೆಲವು ಬಾರಿ ಹಟದಿಂದ ಕೆಟ್ಟದು ಕೂಡ ಸಂಭವಿಸಬಹುದು. ಹಟ ಎಲ್ಲಿ ಹೇಗೆ ಇರಬೇಕೆಂಬ ವಿವೇಚನೆ ಬೇಕು.
–  ಟೀಕೆಗಳನ್ನು ಎದುರಿಸಲು ಮಾನಸಿಕವಾಗಿ ಸಿದ್ಧರಾಗಿರಿ.
–  ಸಾಮಾಜಿಕ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಬೇಡ, ಎದುರಿಸಿ.
–  ಜಗತ್ತಿನಲ್ಲಿ ಬದಲಾವಣೆ ಮೊದಲು ನಿಮ್ಮಿಂದಲೇ ಆರಂಭವಾಗಲಿ. 
-  ಕೆಟ್ಟದ್ದು ಮಾರ್ಕೆಟ್‌ನಲ್ಲಿ ಬೇಗ ಸೇಲ್‌ ಆಗುತ್ತದೆೆ. ಹಾಗೆಯೇ ಟೀಕೆಗಳು ಹೆಚ್ಚು ಪ್ರಚಾರ ಪಡೆಯುತ್ತವೆ.
-  ನಿಮ್ಮ ಬದುಕು ಹೇಗೆ ಆರಂಭವಾಯಿತು ಮುಖ್ಯವಲ್ಲ, ಹೇಗೆ ಬೆಳೆದಿರಿ .ಅಂತಿಮವಾಗಿ ಏನಾದಿರಿ ಎಂಬುದೇ ಮುಖ್ಯ.
-  ಜೀವನದಲ್ಲಿ ಕಷ್ಟ ಅನುಭವಿಸದಿದ್ದರೆ ಸುಖವೆಂದರೆ ಏನೆಂದೇ ಗೊತ್ತಾಗದು.
-  ಮಾದಕ ವ್ಯಸನ ಸೇರಿದಂತೆ ದುಶ್ಚಟಗಳ ಬಗ್ಗೆ ಸದಾ ಜಾಗರೂಕರಾಗಿರಿ.
-  ಕಾನೂನು ಪಾಲನೆಯಲ್ಲಿ ನೀವೇ ಮೊದಲಿಗರಾಗಿರಿ. ಸಹಾಯ ಮನೋಭಾವ ಇರಲಿ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.