ಆರು ತಿಂಗಳುಗಳಲ್ಲಿ 57 ಗೋವುಗಳ ರಕ್ಷಣೆ: ಎಸ್‌ಪಿ ನಿಶಾ ಜೇಮ್ಸ್‌

ದನ ಕಳ್ಳತನ ತಡೆಗೆ ಪೊಲೀಸ್‌ ವಿಶೇಷ ಗಸ್ತು

Team Udayavani, Jul 13, 2019, 5:30 AM IST

UD-SP

ಉಡುಪಿ: ಜಿಲ್ಲೆಯಲ್ಲಿ ಗೋ ಕಳ್ಳತನ, ಅಕ್ರಮ ಸಾಗಾಟ ತಡೆಗೆ ಪೊಲೀಸ್‌ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿಶೇಷ ಗಸ್ತು ಆರಂಭಿಸಲಾಗಿದೆ ಎಂದು ಎಸ್‌ಪಿ ನಿಶಾ ಜೇಮ್ಸ್‌ ತಿಳಿಸಿದ್ದಾರೆ.

ಜು. 12ರಂದು ತನ್ನ ಕಚೇರಿಯಲ್ಲಿ ಪೊಲೀಸ್‌ ಪೋನ್‌-ಇನ್‌ ನಡೆಸಿಕೊಟ್ಟ ಸಂದರ್ಭದಲ್ಲಿ ಅವರು ಪತ್ರಕರ್ತರಿಗೆ ಮಾಹಿತಿ ನೀಡಿದರು.

2017ರಲ್ಲಿ 7 ಪ್ರಕರಣಗಳಲ್ಲಿ 14 ದನಗಳ ಕಳ್ಳತನ, 2018ರಲ್ಲಿ 11 ಪ್ರಕರಣಗಳಲ್ಲಿ 20 ದನಗಳ ಕಳ್ಳತನ ಮತ್ತು 2019ರ ಜನವರಿಯಿಂದ ಜು. 11ರ ವರೆಗೆ 5 ಪ್ರಕರಣಗಳಲ್ಲಿ 11 ದನಗಳ ಕಳ್ಳತನ ನಡೆದಿದೆ. ಜೂನ್‌ ತಿಂಗಳಲ್ಲಿ ಮೂರು ಪ್ರಕರಣಗಳಲ್ಲಿ ಮೂವರ ಬಂಧನ ನಡೆದಿದೆ. ಇದು ಸಾರ್ವಜನಿಕರು ನೀಡಿರುವ ದೂರಿನಂತೆ ದಾಖಲಾದ ಪ್ರಕರಣಗಳು. ಇದಲ್ಲದೆ ಪೊಲೀಸರು ಕೂಡ ಅಕ್ರಮ ದನ ಸಾಗಾಟ ಕುರಿತು ಸ್ವಯಂಪ್ರೇರಿತರಾಗಿ 2017ರಲ್ಲಿ 26 ಪ್ರಕರಣಗಳನ್ನು ದಾಖಲಿಸಿ 68 ಮಂದಿಯನ್ನು ಬಂಧಿಸಿದ್ದಾರೆ. 2018ರಲ್ಲಿ 31 ಪ್ರಕರಣಗಳಲ್ಲಿ 47 ಮಂದಿಯನ್ನು 2019ರಲ್ಲಿ 14 ಪ್ರಕರಣಗಳಲ್ಲಿ 31 ಮಂದಿಯನ್ನು ಬಂಧಿಸಿದ್ದಾರೆ ಎಂದು ಎಸ್‌ಪಿ ತಿಳಿಸಿದರು.

ದನಗಳ ರಕ್ಷಣೆ
2017ರಲ್ಲಿ 41 ದನಗಳನ್ನು, 2018ರಲ್ಲಿ 73 ಹಾಗೂ 2019ರಲ್ಲಿ 57 ದನಗಳನ್ನು ರಕ್ಷಿಸಲಾಗಿದೆ. ಈ ರೀತಿ ದನಕಳ್ಳತನ, ಸಾಗಾಟದಲ್ಲಿ ಕಳೆದ 5 ವರ್ಷಗಳಿಂದ ತೊಡಗಿಸಿಕೊಂಡಿರುವವರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿಯಾಗಿ ಪ್ರಕರಣ ದಾಖಲಿಸಿಕೊಂಡು ಠಾಣಾ ಮಟ್ಟದಲ್ಲಿ ಹಾಗೂ ಉಪ ವಿಭಾಗ ಮಟ್ಟದಲ್ಲಿ ಪರೇಡ್‌ ನಡೆಸಿ ಎಚ್ಚರಿಕೆ ನೀಡಲಾಗುತ್ತಿದೆ. ಅವರಿಂದ ಬಾಂಡ್‌ ಪಡೆಯಲಾಗುತ್ತಿದೆ. ಚೆಕ್‌ಪೋಸ್ಟ್‌ಗಳನ್ನು ಕೂಡ ತೆರೆಯಲಾಗಿದೆ. ದನಗಳನ್ನು ಮೇಯಲು ಕಟ್ಟುವವರು ಕೂಡ ಹೆಚ್ಚು ಕಾಳಜಿ ವಹಿಸಬೇಕು. ಬೀದಿಗಳಲ್ಲಿ ದನಗಳನ್ನು ಬಿಡಬಾರದು. ಒಂದು ವೇಳೆ ದೇವರಿಗೆ ಅರ್ಪಣೆಯ ಹಿನ್ನೆಲೆಯಲ್ಲಿ ಬೀದಿಗೆ ಬಿಟ್ಟಿದ್ದರೆ ಅಂಥ ದನಗಳನ್ನು ಗೋ ಶಾಲೆಗೆ ಸಾಗಿಸುವುದಕ್ಕಾಗಿ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳುತ್ತಿದೆ ಎಂದು ಎಸ್‌ಪಿ ಹೇಳಿದರು.

40 ಚೆಕ್‌ಪೋಸ್ಟ್‌ಗಳು
ಜಿಲ್ಲೆಯ ಹೆದ್ದಾರಿ ಹಾಗೂ ಒಳರಸ್ತೆಗಳಲ್ಲಿ ದನ ಸಾಗಾಟ ಸೇರಿದಂತೆ ಇತರೆ ಅಕ್ರಮಗಳ ನಿಯಂತ್ರಣ ತಡೆಯುವ ಉದ್ದೇಶದಿಂದ ರಾತ್ರಿ ವೇಳೆಗೆ 30 ಹಾಗೂ ಹಗಲಿನ ವೇಳೆಗೆ 10 ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಅಧಿಕ ದಂಡ ಕಾರ್ಯಗತ
ಸಂಚಾರ ನಿಯಮ ಉಲ್ಲಂ ಸಿದರೆ ಹೊಸ ನಿಯಮಾವಳಿಯಂತೆ ಅಧಿಕ ದಂಡವನ್ನು ವಸೂಲಿ ಮಾಡುವ ಹಾಗೂ ಇತರೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಾಗಿದೆ ಎಂದು ಎಸ್‌ಪಿ ತಿಳಿಸಿದರು.

ಪೊಲೀಸರ ಬಗ್ಗೆ ಕಾಳಜಿ
ನಾಗರಿಕರೋರ್ವರು ಕರೆ ಮಾಡಿ “ಮಹಿಳಾ ಸಿಬಂದಿ ಸೇರಿದಂತೆ ಸಂಚಾರಿ ಪೊಲೀಸ್‌ ಸಿಬಂದಿ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಾರೆ. ಆದರೆ ಅವರಿಗೆ ಅಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದೆ ತೊಂದರೆಯಾಗಿದೆ. ಮೊಬೈಲ್‌ ಟಾಯ್ಲೆಟ್‌ಗಳ ನ್ನಾದರೂ ನಿರ್ಮಿಸಿಕೊಡಬೇಕು’ ಎಂದು ಮನವಿ ಮಾಡಿದರು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಭರವಸೆ ನೀಡಿದರು.

ಡಿವೈಎಸ್‌ಪಿ ಜೈ ಶಂಕರ್‌, ಸೆನ್‌ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಸೀತಾರಾಮ್‌, ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್‌., ಕಾರ್ಕಳ ವೃತ್ತ ನಿರೀಕ್ಷಕ ಹಾಲಾಮೂರ್ತಿ, ಸಂಚಾರ ಠಾಣೆಯ ಎಸ್‌ಐ ನಾರಾಯಣ, ಡಿಸಿಆರ್‌ಬಿ ಎಎಸ್‌ಐ ಪ್ರಕಾಶ್‌ ಉಪಸ್ಥಿತರಿದ್ದರು.

ಸಾರ್ವಜನಿಕರೇ ಸಿಸಿ ಕೆಮರಾ ಹಾಕಿಸಿ
ಉಡುಪಿ ಪುತ್ತೂರಿನ ಸುಬ್ರಹ್ಮಣ್ಯ ನಗರದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಕೊಲೆ ಪ್ರಕರಣ ನಡೆದ ಸಂದರ್ಭ ಅಲ್ಲಿನ ಜನರಲ್ಲಿ ಆ ಭಾಗದ ಪ್ರಮುಖ ಜಂಕ್ಷನ್‌ನಲ್ಲಿ ಸಾರ್ವಜನಿಕರೇ ಮುಂದೆ ಬಂದು ಸಿಸಿ ಕೆಮರಾ ಹಾಕುವಂತೆ ಸೂಚನೆ ನೀಡಿದ್ದೆ. ಇತರೆ ಪ್ರದೇಶದಲ್ಲಿಯೂ ಜನವಸತಿ ಪ್ರದೇಶದ ಪ್ರಮುಖ ಜಂಕ್ಷನ್‌ಗಳಲ್ಲಿ ಸಾರ್ವಜನಿಕರೇ ಮುಂದೆ ಬಂದು ಸಿಸಿ ಕೆಮರಾ ಅಳವಡಿಸಬೇಕು. ಇದರಿಂದ ಕಳ್ಳತನದಂತಹ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಿದೆ. ಮಾತ್ರವಲ್ಲದೆ ಹಿಟ್‌ ಆ್ಯಂಡ್‌ ರನ್‌ನಂಥ ಅಪಘಾತ ಪ್ರಕರಣಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಲು ಅನುಕೂಲವಾಗುತ್ತದೆ. ಮಳೆಗಾಲದಲ್ಲಿ ಕಳ್ಳತನದಂಥ ಪ್ರಕರಣಗಳು ಸಾಮಾನ್ಯವಾಗಿ ಹೆಚ್ಚಾಗಿರುತ್ತದೆ. ಸಾರ್ವಜನಿಕರೂ ಹೆಚ್ಚು ಜಾಗರೂಕರಾಗಿರಬೇಕು ಎಂದು ಎಸ್‌ಪಿ ಹೇಳಿದರು.

ದೂರು-ದುಮ್ಮಾನ
ಪೊಲೀಸ್‌ ಪೋನ್‌-ಇನ್‌ನಲ್ಲಿ ಈ ಬಾರಿಯೂ ಸಂಚಾರ ನಿಯಮ ಉಲ್ಲಂಘನೆ ಕುರಿತಾದ ದೂರುಗಳೇ ಅಧಿಕವಾಗಿದ್ದವು. ಪ್ರಮುಖ ದೂರುಗಳು ಇಂತಿವೆ:
– ಅಜ್ಜರಕಾಡು ಪಾರ್ಕ್‌ನಲ್ಲಿ ಕುಡುಕರ ಹಾವಳಿ ಇದೆ. ಕೆಲವು ಶಾಲಾ ಕಾಲೇಜು ವಿದ್ಯಾರ್ಥಿಗಳು ಕೂಡ ತರಗತಿಗೆ ಚಕ್ಕರ್‌ ಹಾಕಿ ಪಾರ್ಕ್‌ನಲ್ಲಿ ಬಂದು ಮೋಜು ಮಾಡುತ್ತಿರುತ್ತಾರೆ.
– ಹಿರಿಯಡಕ, ಚೇರ್ಕಾಡಿಯಲ್ಲಿ ಮಟ್ಕಾ; ಮಂದಾರ್ತಿಯಲ್ಲಿ ಅಕ್ರಮ ಸಾರಾಯಿ ಮಾರಾಟ ದೂರು.
– ಉದ್ಯಾವರ ಗ್ರಂಥಾಲಯದ ಬಳಿ ಮೈಕ್‌ ಸದ್ದಿನಿಂದ ಸ್ಥಳೀಯರ ನೆಮ್ಮದಿ ಭಂಗವಾಗಿದೆ ಎಂದು ಮಹಿಳೆಯೋರ್ವರಿಂದ ದೂರು.
– ನಗರದ ಹಲವು ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆಯ ಸಮಸ್ಯೆ
– ಗುಜ್ಜಾಡಿಯಲ್ಲಿ ಅಕ್ರಮ ಮಣ್ಣು ಸಾಗಾಟ
– ಸುಬ್ರಹ್ಮಣ್ಯ ನಗರದ ಮಹಿಳೆ ಕೊಲೆ ಪ್ರಕರಣ ಭೇದಿಸಿದ ಪೊಲೀಸರಿಗೆ ಅಭಿನಂದನೆ
– ಅತಿ ವೇಗದ ಬೈಕ್‌ ಸವಾರಿ, ವಿರುದ್ಧ ದಿಕ್ಕಿನಲ್ಲಿ ಸಂಚಾರ ದೂರು
– ಹಿರಿಯಡಕದಲ್ಲಿ ತ್ಯಾಜ್ಯ, ಬೀದಿನಾಯಿ ತೊಂದರೆ; ನ್ಯಾಯಬೆಲೆ ಅಂಗಡಿಯಲ್ಲಿ ಅಸಮರ್ಪಕ ಸೇವೆ ಕುರಿತು ಕೂಡ ಪೊಲೀಸರಿಗೆ ದೂರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.