ಆನ್‌ಲೈನ್‌ ಉದ್ಯೋಗ, ತರಬೇತಿ: ವಂಚನೆ; ದೂರು


Team Udayavani, Feb 9, 2019, 12:30 AM IST

0802udsb1.jpg

ಉಡುಪಿ: ಆನ್‌ಲೈನ್‌ ಮೂಲಕ ಉದ್ಯೋಗ ಮತ್ತು ತರಬೇತಿ ನೀಡುವುದಾಗಿ ಹೇಳಿ ವಂಚಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಓರ್ವರು ಶುಕ್ರವಾರ ಜರಗಿದ ಪೊಲೀಸ್‌ ಫೋನ್‌-ಇನ್‌ನಲ್ಲಿ ಮನವಿ ಮಾಡಿದ್ದಾರೆ.

“ಆನ್‌ಲೈನ್‌ನಲ್ಲಿ ಡಾಟಾ ಎಂಟ್ರಿ ಬಗ್ಗೆ ಉದ್ಯೋಗ ನೀಡುತ್ತೇವೆ. ಅದಕ್ಕೆ ಬೇಕಾದ ತರಬೇತಿಯನ್ನು ಕೂಡ ಕೊಡುತ್ತೇವೆ. ತರಬೇತಿಗಾಗಿ ನಿರ್ದಿಷ್ಟ ಹಣ ಪಾವತಿ ಮಾಡಬೇಕು ಎಂದು ಹೇಳಿದ್ದರು. ಅದರಂತೆ 3,900 ರೂ. ಪಾವತಿಸಿದ್ದೇನೆ. ಅನಂತರ ಮತ್ತೆ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಆದರೆ ತರಬೇತಿಯನ್ನಾಗಲಿ ಉದ್ಯೋಗವನ್ನಾಗಲಿ ನೀಡಿಲ್ಲ’ ಎಂದು ಕರೆ ಮಾಡಿದವರು ದೂರಿದರು. ಈ ಬಗ್ಗೆ ಸೆನ್‌ ಪೊಲೀಸರಿಗೆ ದೂರು ನೀಡುವಂತೆ ಪೊಲೀಸ್‌ ಅಧಿಕಾರಿಗಳು ಸೂಚಿಸಿದರು.

ಪಿಜಿಯಿಂದ ಸಮಸ್ಯೆ
ಮಹಿಳೆಯೋರ್ವರು ಕರೆ ಮಾಡಿ “ನಗರದ ಕಾಲೇಜೊಂದರ ಬಳಿ ಒಂದೇ ಕಟ್ಟಡದಲ್ಲಿ  ಹುಡುಗ ಮತ್ತು ಹುಡುಗಿಯರ ಪಿಜಿಗಳಿವೆ. ಕೆಲವು ಹುಡುಗರು ಬೈಕ್‌ನಲ್ಲಿ ಬಂದು ಹುಡುಗಿಯರನ್ನು ಬಿಟ್ಟು ಹೋಗುತ್ತಾರೆ. ಇದು ಪರಿಸರದಲ್ಲಿ ಮುಜುಗರ ಸೃಷ್ಟಿಸುತ್ತಿದೆ. ಅನೈತಿಕವಾಗಿ ನಡೆದುಕೊಳ್ಳುವ ಆತಂಕವೂ ಇದೆ’ ಎಂದು ಹೇಳಿದರು.

ಆರೋಗ್ಯ ಕೇಂದ್ರ ಬಂದ್‌
ಪಡುಕರೆ ಪ್ರಾಥಮಿಕ ಆರೋಗ್ಯ ಕೇಂದ್ರ 1 ವರ್ಷದಿಂದ ಬಂದ್‌ ಆಗಿದೆ. ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮಲ್ಪೆ-ಪಡುಕರೆ ರಸ್ತೆಯಲ್ಲಿ ದಾರಿದೀಪ ಇಲ್ಲದೆ ಸಮಸ್ಯೆಯಾಗಿದೆ. ರಸ್ತೆ ಬದಿ ಹುಲ್ಲು ಬೆಳೆದು ತೊಂದರೆಯಾಗಿದೆ ಎಂದು ಸ್ಥಳೀಯರೋರ್ವರು ಕರೆ ಮಾಡಿ ಅಹವಾಲು ಸಲ್ಲಿಸಿದರು.

ವಿರುದ್ಧ ದಿಕ್ಕಿನಲ್ಲಿ ಬಂದ ವಾಹನಗಳ ವಶ
ರಾಷ್ಟ್ರೀಯ ಹೆದ್ದಾರಿ 66ರ ಸುಪ್ರೀಂ ಫೀಡ್ಸ್‌ ಬಳಿ, ಕೃಷ್ಣಾ ಮಿಲ್ಕ್ ಡೇರಿ, ಹ್ಯಾಂಗ್ಯೋ ಐಸ್‌ಕ್ರೀಂ ಮೊದಲಾದೆಡೆಗಳಿಂದ ಘನವಾಹನಗಳು ಕೂಡ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತವೆ ಎಂದು ಓರ್ವರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್‌ ಅಧಿಕಾರಿಗಳು “ಈ ರೀತಿ ಸಂಚರಿಸುವ ಕೆಲವು ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಮುಂದುವರಿಸಲಾಗುವುದು’ ಎಂದು ಹೇಳಿದರು.

ಎಸ್‌ಪಿ ಲಕ್ಷ್ಮಣ ಬ.ನಿಂಬರಗಿ ಮತ್ತು ಎಎಸ್‌ಪಿ ಕುಮಾರಚಂದ್ರ ಅವರು ಫೋನ್‌-ಇನ್‌ ಕಾರ್ಯಕ್ರಮ ನಡೆಸಿಕೊಟ್ಟರು. 

ಇತರ ದೂರು-ಕರೆಗಳು
– ಉಪ್ಪುಂದ ಶಾಲೆಬಾಗಿಲು ಎಂಬಲ್ಲಿ ಮೂಗಿಯೋರ್ವರಿಂದ ಸಮಸ್ಯೆಯಾಗಿದೆ.
– ಉಡುಪಿ ನಾರ್ತ್‌ ಶಾಲೆ ಸಮೀಪದ ಕಾಳಿಂಗ ಮರ್ದನ ರಸ್ತೆಯಲ್ಲಿ  ಪಾರ್ಕಿಂಗ್‌ ನಿಷೇಧಿಸಿ ಅಳವಡಿಸಿದ ಬ್ಯಾರಿಕೇಡ್‌ ತೆರವುಗೊಳಿಸಿರುವುದರಿಂದ ತೊಂದರೆಯಾಗಿದೆ.
– ಮಂದಾರ್ತಿ ಅಲ್ತಾರಿನಲ್ಲಿ  ಅಕ್ರಮ ಗಣಿಗಾರಿಕೆ ನಡೆಯುತ್ತಿದೆ.
– ಉಡುಪಿ ನಗರದ ಮಸೀದಿ ಬಳಿ ಪುಟ್‌ಪಾತ್‌ನಲ್ಲಿಯೇ ವ್ಯಾಪಾರ ನಡೆಯುತ್ತಿರುವುದರಿಂದ ಪಾದಚಾರಿಗಳು ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.
– ಕೆರಾಡಿ ಪರಿಸರದ ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ.
– ಉಡುಪಿಯಿಂದ ಶಿರ್ವ-ಬೆಳ್ಮಣ್‌ ಕಡೆಗೆ ಹೋಗುವ ಬಸ್‌ಗಳು ಉದ್ಯಾವರ ಪೇಟೆಗೆ ಬಾರದೆ ಹೆದ್ದಾರಿಯಲ್ಲಿಯೇ ಸಂಚರಿಸುತ್ತಿರುವುದರಿಂದ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ತೊಂದರೆಯಾಗಿದೆ.
– ಬ್ರಹ್ಮಾವರ ಆಕಾಶವಾಣಿ ಬಳಿ ರಸ್ತೆಯಲ್ಲಿ ಕಾರೊಂದು ಹಲವು ಸಮಯದಿಂದ ರಿಪೇರಿ ಸ್ಥಿತಿಯಲ್ಲಿಯೇ ಇದೆ.
– ಬ್ರಹ್ಮಾವರದ ಧರ್ಮಾವರ ಬಳಿ ಸರ್ವೀಸ್‌ ರಸ್ತೆಯಲ್ಲಿ ಎಕ್ಸ್‌ಪ್ರೆಸ್‌ ಬಸ್‌ಗಳ ಓಡಾಟದಿಂದ ತೊಂದರೆಯಾಗಿದೆ.
– ನಗರದ ಕೆಲವೆಡೆ ಬಸ್‌ ನಿಲುಗಡೆ ಇಲ್ಲದ ಸ್ಥಳಗಳಲ್ಲಿಯೂ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗುತ್ತಿದೆ. 
– ಕಲ್ಸಂಕ ಹಾಗೂ ಕರಾವಳಿ ಜಂಕ್ಷನ್‌ಗಳಲ್ಲಿ ಸಿಗ್ನಲ್‌ ಲೈಟ್‌ ಅಳವಡಿಸಬೇಕು.
– ಕಾರ್ಕಳ ತಾಲೂಕಿನ ಗ್ರಾ.ಪಂ.ವೊಂದರ ಪಿಡಿಒ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. 
– ಅಲೆವೂರು ಕ್ರೈಸ್ಟ್‌ ಶಾಲೆಯ ಬಳಿ ಹಲವು ಸಮಯದಿಂದ ಬಸ್‌ವೊಂದು ನಿಂತಿದೆ. ಇದರಿಂದ ಸಂಚಾರಕ್ಕೆ ತೊಡಕಾಗಿದೆ.
– ಆದಿ ಉಡುಪಿ ಸಂತೆ ಮಾರುಕಟ್ಟೆ ಬಳಿ ಮಾರುಕಟ್ಟೆಯಿಂದ ಹೊರಗೆ ರಸ್ತೆ ಬದಿ ವ್ಯಾಪಾರ ನಡೆಸುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ.
– ಮಣಿಪಾಲದ ಕೆಲವು ಅಂಗಡಿಗಳಲ್ಲಿ ಅಕ್ರಮವಾಗಿ ಬೀಡಿ, ಸಿಗರೇಟುಗಳನ್ನು ಮಾರಾಟ ಮಾಡಲಾಗುತ್ತಿದೆ. 
– ಅಂಗವಿಕಲರಿಗೆ ಬಸ್‌ಗಳಲ್ಲಿ ಮೀಸಲಿಟ್ಟಿರುವ ಆಸನವನ್ನು ಅವರಿಗೆ ನೀಡುವಂತೆ ಕ್ರಮ ಕೈಗೊಳ್ಳಬೇಕು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.