ಆನ್‌ಲೈನ್‌ ಉದ್ಯೋಗ, ತರಬೇತಿ: ವಂಚನೆ; ದೂರು


Team Udayavani, Feb 9, 2019, 12:30 AM IST

0802udsb1.jpg

ಉಡುಪಿ: ಆನ್‌ಲೈನ್‌ ಮೂಲಕ ಉದ್ಯೋಗ ಮತ್ತು ತರಬೇತಿ ನೀಡುವುದಾಗಿ ಹೇಳಿ ವಂಚಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಓರ್ವರು ಶುಕ್ರವಾರ ಜರಗಿದ ಪೊಲೀಸ್‌ ಫೋನ್‌-ಇನ್‌ನಲ್ಲಿ ಮನವಿ ಮಾಡಿದ್ದಾರೆ.

“ಆನ್‌ಲೈನ್‌ನಲ್ಲಿ ಡಾಟಾ ಎಂಟ್ರಿ ಬಗ್ಗೆ ಉದ್ಯೋಗ ನೀಡುತ್ತೇವೆ. ಅದಕ್ಕೆ ಬೇಕಾದ ತರಬೇತಿಯನ್ನು ಕೂಡ ಕೊಡುತ್ತೇವೆ. ತರಬೇತಿಗಾಗಿ ನಿರ್ದಿಷ್ಟ ಹಣ ಪಾವತಿ ಮಾಡಬೇಕು ಎಂದು ಹೇಳಿದ್ದರು. ಅದರಂತೆ 3,900 ರೂ. ಪಾವತಿಸಿದ್ದೇನೆ. ಅನಂತರ ಮತ್ತೆ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಆದರೆ ತರಬೇತಿಯನ್ನಾಗಲಿ ಉದ್ಯೋಗವನ್ನಾಗಲಿ ನೀಡಿಲ್ಲ’ ಎಂದು ಕರೆ ಮಾಡಿದವರು ದೂರಿದರು. ಈ ಬಗ್ಗೆ ಸೆನ್‌ ಪೊಲೀಸರಿಗೆ ದೂರು ನೀಡುವಂತೆ ಪೊಲೀಸ್‌ ಅಧಿಕಾರಿಗಳು ಸೂಚಿಸಿದರು.

ಪಿಜಿಯಿಂದ ಸಮಸ್ಯೆ
ಮಹಿಳೆಯೋರ್ವರು ಕರೆ ಮಾಡಿ “ನಗರದ ಕಾಲೇಜೊಂದರ ಬಳಿ ಒಂದೇ ಕಟ್ಟಡದಲ್ಲಿ  ಹುಡುಗ ಮತ್ತು ಹುಡುಗಿಯರ ಪಿಜಿಗಳಿವೆ. ಕೆಲವು ಹುಡುಗರು ಬೈಕ್‌ನಲ್ಲಿ ಬಂದು ಹುಡುಗಿಯರನ್ನು ಬಿಟ್ಟು ಹೋಗುತ್ತಾರೆ. ಇದು ಪರಿಸರದಲ್ಲಿ ಮುಜುಗರ ಸೃಷ್ಟಿಸುತ್ತಿದೆ. ಅನೈತಿಕವಾಗಿ ನಡೆದುಕೊಳ್ಳುವ ಆತಂಕವೂ ಇದೆ’ ಎಂದು ಹೇಳಿದರು.

ಆರೋಗ್ಯ ಕೇಂದ್ರ ಬಂದ್‌
ಪಡುಕರೆ ಪ್ರಾಥಮಿಕ ಆರೋಗ್ಯ ಕೇಂದ್ರ 1 ವರ್ಷದಿಂದ ಬಂದ್‌ ಆಗಿದೆ. ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮಲ್ಪೆ-ಪಡುಕರೆ ರಸ್ತೆಯಲ್ಲಿ ದಾರಿದೀಪ ಇಲ್ಲದೆ ಸಮಸ್ಯೆಯಾಗಿದೆ. ರಸ್ತೆ ಬದಿ ಹುಲ್ಲು ಬೆಳೆದು ತೊಂದರೆಯಾಗಿದೆ ಎಂದು ಸ್ಥಳೀಯರೋರ್ವರು ಕರೆ ಮಾಡಿ ಅಹವಾಲು ಸಲ್ಲಿಸಿದರು.

ವಿರುದ್ಧ ದಿಕ್ಕಿನಲ್ಲಿ ಬಂದ ವಾಹನಗಳ ವಶ
ರಾಷ್ಟ್ರೀಯ ಹೆದ್ದಾರಿ 66ರ ಸುಪ್ರೀಂ ಫೀಡ್ಸ್‌ ಬಳಿ, ಕೃಷ್ಣಾ ಮಿಲ್ಕ್ ಡೇರಿ, ಹ್ಯಾಂಗ್ಯೋ ಐಸ್‌ಕ್ರೀಂ ಮೊದಲಾದೆಡೆಗಳಿಂದ ಘನವಾಹನಗಳು ಕೂಡ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತವೆ ಎಂದು ಓರ್ವರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್‌ ಅಧಿಕಾರಿಗಳು “ಈ ರೀತಿ ಸಂಚರಿಸುವ ಕೆಲವು ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಮುಂದುವರಿಸಲಾಗುವುದು’ ಎಂದು ಹೇಳಿದರು.

ಎಸ್‌ಪಿ ಲಕ್ಷ್ಮಣ ಬ.ನಿಂಬರಗಿ ಮತ್ತು ಎಎಸ್‌ಪಿ ಕುಮಾರಚಂದ್ರ ಅವರು ಫೋನ್‌-ಇನ್‌ ಕಾರ್ಯಕ್ರಮ ನಡೆಸಿಕೊಟ್ಟರು. 

ಇತರ ದೂರು-ಕರೆಗಳು
– ಉಪ್ಪುಂದ ಶಾಲೆಬಾಗಿಲು ಎಂಬಲ್ಲಿ ಮೂಗಿಯೋರ್ವರಿಂದ ಸಮಸ್ಯೆಯಾಗಿದೆ.
– ಉಡುಪಿ ನಾರ್ತ್‌ ಶಾಲೆ ಸಮೀಪದ ಕಾಳಿಂಗ ಮರ್ದನ ರಸ್ತೆಯಲ್ಲಿ  ಪಾರ್ಕಿಂಗ್‌ ನಿಷೇಧಿಸಿ ಅಳವಡಿಸಿದ ಬ್ಯಾರಿಕೇಡ್‌ ತೆರವುಗೊಳಿಸಿರುವುದರಿಂದ ತೊಂದರೆಯಾಗಿದೆ.
– ಮಂದಾರ್ತಿ ಅಲ್ತಾರಿನಲ್ಲಿ  ಅಕ್ರಮ ಗಣಿಗಾರಿಕೆ ನಡೆಯುತ್ತಿದೆ.
– ಉಡುಪಿ ನಗರದ ಮಸೀದಿ ಬಳಿ ಪುಟ್‌ಪಾತ್‌ನಲ್ಲಿಯೇ ವ್ಯಾಪಾರ ನಡೆಯುತ್ತಿರುವುದರಿಂದ ಪಾದಚಾರಿಗಳು ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.
– ಕೆರಾಡಿ ಪರಿಸರದ ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ.
– ಉಡುಪಿಯಿಂದ ಶಿರ್ವ-ಬೆಳ್ಮಣ್‌ ಕಡೆಗೆ ಹೋಗುವ ಬಸ್‌ಗಳು ಉದ್ಯಾವರ ಪೇಟೆಗೆ ಬಾರದೆ ಹೆದ್ದಾರಿಯಲ್ಲಿಯೇ ಸಂಚರಿಸುತ್ತಿರುವುದರಿಂದ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ತೊಂದರೆಯಾಗಿದೆ.
– ಬ್ರಹ್ಮಾವರ ಆಕಾಶವಾಣಿ ಬಳಿ ರಸ್ತೆಯಲ್ಲಿ ಕಾರೊಂದು ಹಲವು ಸಮಯದಿಂದ ರಿಪೇರಿ ಸ್ಥಿತಿಯಲ್ಲಿಯೇ ಇದೆ.
– ಬ್ರಹ್ಮಾವರದ ಧರ್ಮಾವರ ಬಳಿ ಸರ್ವೀಸ್‌ ರಸ್ತೆಯಲ್ಲಿ ಎಕ್ಸ್‌ಪ್ರೆಸ್‌ ಬಸ್‌ಗಳ ಓಡಾಟದಿಂದ ತೊಂದರೆಯಾಗಿದೆ.
– ನಗರದ ಕೆಲವೆಡೆ ಬಸ್‌ ನಿಲುಗಡೆ ಇಲ್ಲದ ಸ್ಥಳಗಳಲ್ಲಿಯೂ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗುತ್ತಿದೆ. 
– ಕಲ್ಸಂಕ ಹಾಗೂ ಕರಾವಳಿ ಜಂಕ್ಷನ್‌ಗಳಲ್ಲಿ ಸಿಗ್ನಲ್‌ ಲೈಟ್‌ ಅಳವಡಿಸಬೇಕು.
– ಕಾರ್ಕಳ ತಾಲೂಕಿನ ಗ್ರಾ.ಪಂ.ವೊಂದರ ಪಿಡಿಒ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. 
– ಅಲೆವೂರು ಕ್ರೈಸ್ಟ್‌ ಶಾಲೆಯ ಬಳಿ ಹಲವು ಸಮಯದಿಂದ ಬಸ್‌ವೊಂದು ನಿಂತಿದೆ. ಇದರಿಂದ ಸಂಚಾರಕ್ಕೆ ತೊಡಕಾಗಿದೆ.
– ಆದಿ ಉಡುಪಿ ಸಂತೆ ಮಾರುಕಟ್ಟೆ ಬಳಿ ಮಾರುಕಟ್ಟೆಯಿಂದ ಹೊರಗೆ ರಸ್ತೆ ಬದಿ ವ್ಯಾಪಾರ ನಡೆಸುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ.
– ಮಣಿಪಾಲದ ಕೆಲವು ಅಂಗಡಿಗಳಲ್ಲಿ ಅಕ್ರಮವಾಗಿ ಬೀಡಿ, ಸಿಗರೇಟುಗಳನ್ನು ಮಾರಾಟ ಮಾಡಲಾಗುತ್ತಿದೆ. 
– ಅಂಗವಿಕಲರಿಗೆ ಬಸ್‌ಗಳಲ್ಲಿ ಮೀಸಲಿಟ್ಟಿರುವ ಆಸನವನ್ನು ಅವರಿಗೆ ನೀಡುವಂತೆ ಕ್ರಮ ಕೈಗೊಳ್ಳಬೇಕು.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Kaup: ಬಸ್‌ಗೆ ಕಾಯುತ್ತಿದ್ದಾಗ ಹೃದಯಾಘಾತ; ಕುಸಿದು ಬಿದ್ದು 57ರ ವ್ಯಕ್ತಿ ಸಾವು

arrest-lady

ನಿಟ್ಟೆ; ಹಾಸ್ಟೆಲ್‌ನಲ್ಲಿ ದ್ವೇಷ ಪ್ರಚೋದನೆ ಬರಹ: ವಿದ್ಯಾರ್ಥಿನಿ ಅರೆಸ್ಟ್

2

Kasaragod: ತಡೆಗೋಡೆಗೆ ಕಾರು ಢಿಕ್ಕಿ: ನಾಲ್ವರಿಗೆ ಗಾಯ

1-aa-parshu

ಪರಶುರಾಮ ಥೀಮ್ ಪಾರ್ಕ್ ವಿವಾದ; ಕಂಚಿನ ಬದಲು‌ ಹಿತ್ತಾಳೆ ಬಳಕೆ: ತನಿಖೆಯಲ್ಲಿ ಪತ್ತೆ

17

Udupi: ಹೋಂ ನರ್ಸ್‌ನಿಂದ ವಂಚನೆ; ರೋಗಿಯ ಖಾತೆಯಿಂದ 68,500 ರೂ. ವರ್ಗಾವಣೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.