ಉಡುಪಿ: ಸರ್ವಧರ್ಮ ದೀಪಾವಳಿ ಆಚರಣೆ


Team Udayavani, Nov 9, 2018, 11:38 AM IST

081118astro02.jpg

ಉಡುಪಿ: ನಮ್ಮ ಪರಂಪರೆಯೇ ಸೌಹಾರ್ದದಿಂದ ಕೂಡಿದ್ದು. ಸರ್ವಧರ್ಮದವರು ಜತೆಗೂಡಿ ಹಬ್ಬಗಳನ್ನು ಆಚರಿಸುವುದು ಹೊಸತೇನಲ್ಲ. ಆದರೆ ಈ ಕಾಲಘಟ್ಟದಲ್ಲಿ ಮತ್ತೂಮ್ಮೆ ನಮ್ಮ ಪರಂಪರೆಯನ್ನು ನೆನಪು ಮಾಡಿಕೊಂಡು ಸೌಹಾರ್ದದಿಂದ ಆಚರಿಸುವಂತಾಗ ಬೇಕು ಎಂದು ಹೆಬ್ರಿ ಸರಕಾರಿ ಜೂನಿಯರ್‌ ಕಾಲೇಜಿನ ಪ್ರಾಧ್ಯಾಪಕಿ ಸುಮಾ ಎಸ್‌. ಅಭಿಪ್ರಾಯಪಟ್ಟರು.

ಗುರುವಾರ ಉಡುಪಿಯ ಶೋಕ ಮಾತಾ ಇಗರ್ಜಿ ವಠಾರದಲ್ಲಿ ಸೌಹಾರ್ದ ಸಮಿತಿ, ಕೆಥೋಲಿಕ್‌ ಸಭಾ ಉಡುಪಿ ಘಟಕ, ಶೋಕಮಾತಾ ಇಗರ್ಜಿ ಉಡುಪಿ, ಲಯನ್ಸ್‌ ಡಿಸ್ಟ್ರಿಕ್ಟ್ 317ಸಿ ಹಾಗೂ ಲಯನ್ಸ್‌ ಕ್ಲಬ್‌ ಉಡುಪಿ ಸಂಗಮ ವತಿಯಿಂದ ಜರಗಿದ ಸರ್ವಧರ್ಮ ದೀಪಾವಳಿ ಆಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಹಣತೆಯ ದೀಪ ಬೆಂಕಿಯಲ್ಲ, ಅದು ಬೆಳಕು. ಆ ದೀಪವನ್ನು ಸುಡುವುದಕ್ಕೆ ಹಚ್ಚುವುದಲ್ಲ, ಬೆಳಗುವುದಕ್ಕಾಗಿ ಹಚ್ಚುತ್ತೇವೆ. ನಮ್ಮೊಳಗೂ ಬೆಂಕಿ ಇದೆ. ಅದನ್ನು ಹಣತೆಯ ಬೆಳಕನ್ನಾಗಿಸಿ ಭಗವದ್ಭಕ್ತಿಯೊಂದಿಗೆ ಸಮರ್ಪಿಸಿ ಸಹಬಾಳ್ವೆ ನಡೆಸಬೇಕಾಗಿದೆ ಎಂದು ಸುಮಾ ಹೇಳಿದರು.

ಎಲ್ಲರ ಒಳಿತಿಗೆ ಪ್ರಾರ್ಥನೆ
ಶುಭಾಶಂಸನೆಗೈದ ರಂಗಿನಕೆರೆ ನೂರುಲ್‌ ಹುದಾ ಮಸೀದಿಯ ಧರ್ಮ ಗುರು ಮೌಲಾನಾ ಮಹಮ್ಮದ್‌ ಶರ್ವಾಣಿ ರಜ್ವಿ ಅವರು, “ಎಲ್ಲ ಧರ್ಮಗಳು ಕೂಡ ಇತರರನ್ನು ಪ್ರೀತಿಸುವುದನ್ನು ಹೇಳುತ್ತದೆಯೇ ಹೊರತು ದ್ವೇಷಿಸಲು ಹೇಳುವುದಿಲ್ಲ. ನೈಜ ಮುಸಲ್ಮಾನ ಕೂಡ ಎಲ್ಲರ ಒಳಿತಿಗಾಗಿ ಪ್ರಾರ್ಥಿಸುತ್ತಾನೆ’ ಎಂದರು. ಮಲ್ಪೆ ಯುಬಿಎಂ ಎಬಿಜರ್‌ ಚರ್ಚ್‌ ಪಾಸ್ಟರ್‌ ರೆ| ಸಂತೋಷ್‌ ಎ., ಲಯನ್ಸ್‌ ಜಿಲ್ಲಾ ಗವರ್ನರ್‌ ಡಾ| ತಲ್ಲೂರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು. ಶೋಕಮಾತಾ ಇಗರ್ಜಿಯ ಪ್ರಧಾನ ಧರ್ಮಗುರು ವಂ| ವಲೇರಿಯನ್‌ ಮೆಂಡೋನ್ಸ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಅಲೊನ್ಸ್‌ ಡಿ’ಕೋಸ್ಟಾ ನಿರ್ವಹಿಸಿದರು. ಸೌಹಾರ್ದ ಸಮಿತಿಯ ಸಂಚಾಲಕ ಮೈಕಲ್‌ ಡಿ’ಸೋಜಾ ವಂದಿಸಿದರು.

ಚರ್ಚ್‌ ವಠಾರದಲ್ಲಿ ಎತ್ತರದ ಹಣತೆಯಲ್ಲಿ ನೂರಾರು ದೀಪಗಳನ್ನು ಹಚ್ಚುವ ಮೂಲಕ ದೀಪಾ
ವಳಿ ಆಚರಿಸಲಾಯಿತು. ಗೂಡುದೀಪ ಗಳು, ದೀಪಗಳ ಸಾಲು ಚರ್ಚ್‌ ಆವರಣದಲ್ಲಿ ಬೆಳಕಿನ ಹಬ್ಬದ ಸಂಭ್ರಮ ಮೂಡಿಸಿತು.

ಜ್ಞಾನದತ್ತ ಒಯ್ಯುವ ಬೆಳಕು
ಅಧ್ಯಕ್ಷತೆ ವಹಿಸಿದ್ದ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಮಾತನಾಡಿ, “ತಾನು ಬೆಳಗಿ ಬೇರೆಯವರನ್ನು ಬೆಳಗಿಸುವ ಶಕ್ತಿ ದೀಪಕ್ಕಿದೆ. ಅಜ್ಞಾನದ ಕತ್ತಲೆಯಿಂದ ಜ್ಞಾನದ ದಿಕ್ಕಿಗೆ ದೀಪ ನಮ್ಮನ್ನು ಕೊಂಡೊಯ್ಯುತ್ತದೆ. ಸುಖ, ಶಾಂತಿ, ನಲಿವು, ಜ್ಞಾನ, ಸೌಹಾರ್ದದ ಸಂಕೇತವಾದ ದೀಪಾವಳಿಯನ್ನು ಎಲ್ಲರೂ ಸೇರಿಕೊಂಡು ಆಚರಿಸೋಣ’ ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.