Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ


Team Udayavani, May 10, 2024, 3:47 PM IST

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಉಡುಪಿ: ನಗರದ ಕವಿ ಮುದ್ದಣ ಮಾರ್ಗದ ಸನಿಹದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠದ ಮೊದಲ ಮಹಡಿಯಲ್ಲಿ ಸುಮಾರು 2 ಕೋ.ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಬಾಲಭೋಜನಾಲಯ ಮತ್ತು ಧ್ಯಾನ ಮಂದಿರದ ಲೋಕಾರ್ಪಣೆ ಶುಕ್ರವಾರ ಮಂದಿರ ಮಠದಲ್ಲಿ ನಡೆಯಿತು.

ಮಂದಿರ ಮಠದ ಮ್ಯಾನೇಜಿಂಗ್ ಟ್ರಸ್ಟಿ ಕೆ.ಕೆ. ಆವರ್ಸೇಕರ್ ಮುಂಬಯಿ ಅವರು ಉದ್ಘಾಟಿಸಿ, ಮನುಷ್ಯರಾದ ನಾವು ಕೇವಲ ನಿಮಿತ್ತ ಮಾತ್ರ, ಎಲ್ಲವೂ ಪರಮಾತ್ಮನ ಇಚ್ಛೆಯಂತೆಯೇ ನೆರವೇರುತ್ತದೆ. ಕಲಿಯುಗದಲ್ಲಿ ಪವಾಡ, ಕಾರಣಿಕತೆಯಿಂದ ಮೆರೆಯುತ್ತಿರುವ ಶ್ರೀ ನಿತ್ಯಾನಂದ ಸ್ವಾಮಿಯ ಇಚ್ಛೆಯಂತೆ ಭಕ್ತರಿಗೆ ಅನುಕೂಲವಾಗುವ ಬಾಲಭೋಜನಾಲಯ, ಧ್ಯಾನ ಮಂದಿರ ನಿರ್ಮಾಣಗೊಂಡಿದೆ ಎಂದು ಆಶಯ ವ್ಯಕ್ತಪಡಿಸಿದರು.

ಮಂದಿರ ಮಠದ ಜಂಟಿ ಕಾರ್ಯನಿರ್ವಾಹಕ ಟ್ರಸ್ಟಿ ಕೆ. ಮೋಹನಚಂದ್ರನ್ ನಂಬಿಯಾರ್ ಮಾತನಾಡಿ, ಮಂದಿರ ಮಠದಲ್ಲಿ ದಿನದಿಂದ ದಿನಕ್ಕೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದಂತೆ, ಕಾರಣಿಕತೆಯೂ ವೃದ್ಧಿಸುತ್ತಿದೆ ಎಂದರು.

ಶಾಸಕ ಯಶ್‌ಪಾಲ್ ಎ. ಸುವರ್ಣ ಶುಭಾಶಂಸನೆಗೈದರು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಮುಂಬಯಿ ಉದ್ಯಮಿಗಳಾದ ಸುರೇಂದ್ರ ಕಲ್ಯಾಣಪುರ, ನಾಗೇಶ್ ಪಾಂಡೆ, ಮಾಧವ ನಾಡಕರ್ಣಿ, ಟ್ರಸ್ಟಿ ಪುರುಷೋತ್ತಮ ಪಿ. ಶೆಟ್ಟಿ, ಉದ್ಯಮಿಗಳಾದ ಡಾ ಜಿ. ಶಂಕರ್, ಡಾ ತಲ್ಲೂರು ಶಿವರಾಮ ಶೆಟ್ಟಿ, ಮಂದಿರ ಮಠದ ಎಕ್ಸಿಕ್ಯೂಟಿವ್ ಟ್ರಸ್ಟಿ ಕೆ. ದಿವಾಕರ ಶೆಟ್ಟಿ ತೋಟದಮನೆ, ವೀಣಾ ದಿವಾಕರ ಶೆಟ್ಟಿ, ಆಡಳಿತ ಮಂಡಳಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಬನ್ನಂಜೆ, ಪ್ರಧಾನ ಕಾರ್ಯದರ್ಶಿ ಈಶ್ವರ್ ಶೆಟ್ಟಿ ಚಿಟ್ಪಾಡಿ, ಕೋಶಾಧಿಕಾರಿ ಶಶಿಕುಮಾರ್ ಶೆಟ್ಟಿ ಗೋವಾ, ಟ್ರಸ್ಟಿಗಳು, ಕಾರ್ಯಕಾರಿ ಸಮಿತಿ, ಸೇವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಾಸುದೇವ ಉಪಾಧ್ಯಾಯ ಬನ್ನಂಜೆಯವರ ನೇತೃತ್ವದಲ್ಲಿ ಗಣಹೋಮ, ಶ್ರೀ ನಿತ್ಯಾಾನಂದ ಸ್ವಾಮಿಗೆ ವಿಶೇಷ ಪೂಜೆ, ಮಧ್ಯಾಹ್ನ ಮಹಾಪೂಜೆ ನೆರವೇರಿತು. ಮಧ್ಯಾಹ್ನ ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

ಬೆಳಗ್ಗೆ ಮಕ್ಕಳ ಕುಣಿತ ಭಜನ ಸ್ಪರ್ಧೆಯಲ್ಲಿ ಜಿಲ್ಲೆಯ 18 ತಂಡಗಳು ಭಾಗವಹಿಸಿದ್ದವು. ತೀರ್ಪುಗಾರರಾಗಿ ಅರುಣ್ ಕುಮಾರ್ ಕಲ್ಯಾಣಪುರ, ರವಿಶಂಕರ್ ಹೆಬ್ಬಾರ್, ಸಚಿನ್ ಸುವರ್ಣ ಸಸಿಹಿತ್ಲು ಕಾರ್ಯನಿರ್ವಹಿಸಿದ್ದರು. ರಾಮಚಂದ್ರ ಮಿಜಾರು ನಿರೂಪಿಸಿದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.