ಉಡುಪಿ ಶ್ರೀಕೃಷ್ಣ ಮಠ ಸಂಭ್ರಮದ ಲಕ್ಷ ದೀಪೋತ್ಸವ ಆರಂಭ


Team Udayavani, Nov 17, 2021, 5:09 AM IST

ಉಡುಪಿ ಶ್ರೀಕೃಷ್ಣ ಮಠ ಸಂಭ್ರಮದ ಲಕ್ಷ ದೀಪೋತ್ಸವ ಆರಂಭ

ಉಡುಪಿ: ಶ್ರೀಕೃಷ್ಣಮಠದಲ್ಲಿ ಮಂಗಳವಾರ ಉತ್ಥಾನ ದ್ವಾದಶಿಯಂದು ತುಳಸೀ ಪೂಜೆಯ ಬಳಿಕ ತೆಪ್ಪೋತ್ಸವ ಸಹಿತ ಲಕ್ಷದೀಪೋತ್ಸವ, ವಾರ್ಷಿಕ ರಥೋತ್ಸವ ಆರಂಭಗೊಂಡಿತು. ಬೆಳಗ್ಗೆ ತುಳಸೀ ಪೂಜೆ ನಡೆದರೆ, ಸಂಜೆ ಕ್ಷೀರಾಬ್ಧಿ ಪೂಜೆ, ದೀಪೋತ್ಸವ ನಡೆಯಿತು.

ದ್ವಾದಶಿಯಾದ ಕಾರಣ ಮುಂಜಾವ ಶ್ರೀದಿಂದಲೇ ಪೂಜೆಗಳು ಆರಂಭಗೊಂಡಿತು. ಮಹಾಪೂಜೆ ಯನ್ನು, ಬಳಿಕ ತುಳಸೀ ಪೂಜೆಯನ್ನು ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ನೆರವೇರಿಸಿದರು. ಇದಕ್ಕೂ ಮುನ್ನ ಒಂದು ತಿಂಗಳಿಂದ ನಡೆಯುತ್ತಿದ್ದ ಪಶ್ಚಿಮಜಾಗರ ಪೂಜೆಯನ್ನು ಸಮಾಪನಗೊಳಿಸಿದರು. ಸಂಜೆ ಮಧ್ವಸರೋವರದ ಮಧ್ಯದ ಮಂಟಪದಲ್ಲಿಕ್ಷೀರಾಬ್ಧಿವನ್ನು ನೀಡಲಾಯಿತು.

ಅಪರಾಹ್ನ ರಥಬೀದಿಯಲ್ಲಿ ಅಳವಡಿಸಿದ ದಳಿಗಳ ಮೇಲೆ ಗೋಮಯವನ್ನು ಇಟ್ಟು ಅದರ ಮೇಲೆ ಹಣತೆ ಇಡುವ ಮುಹೂರ್ತವನ್ನು ವಿವಿಧ ಸ್ವಾಮೀಜಿಯವರು ನೆರವೇರಿಸಿದರು. ಸಂಜೆ ಕ್ಷೀರಾಬ್ಧಿ ಬಳಿಕ ರಾತ್ರಿ ಪೂಜೆ ನಡೆಯಿತು. ಬಳಿಕ ಉತ್ಸವ ಮೂರ್ತಿಯನ್ನು ತಂದು ರಾತ್ರಿ ಆಕರ್ಷಕ ತೆಪ್ಪೋತ್ಸವ ನಡೆಯಿತು. ಮಧ್ವ ಸರೋವರದಲ್ಲಿ ಈ ಸಂದರ್ಭ ಸಂಸ್ಕೃತ ಗೀತ ಗಾಯನ ನಡೆಯಿತು.ತೆಪ್ಪೋತ್ಸವದ ಬಳಿಕ ರಥೋತ್ಸವ ನಡೆಯಿತು.

ಶ್ರೀಕೃಷ್ಣಮುಖ್ಯಪ್ರಾಣ, ಶ್ರೀಅನಂತೇಶ್ವರ, ಶ್ರೀಚಂದ್ರ ಮೌಳೀಶ್ವರ ಉತ್ಸವ ಮೂರ್ತಿಗಳನ್ನು ಗರುಡ ರಥ ಮತ್ತು ಮಹಾಪೂಜಾ ರಥಗಳಲ್ಲಿರಿಸಿ ಉತ್ಸವ ನಡೆಸಲಾಯಿತು. ರಥಬೀದಿ, ಮಧ್ವ ಸರೋವರದಲ್ಲಿ ಸಾವಿರಾರು ಹಣತೆಗಳ ದೀಪಗಳು ಕಂಗೊಳಿಸಿದವು. ಪರ್ಯಾಯ ಅದಮಾರು ಹಿರಿಯ, ಕಿರಿಯ, ಕೃಷ್ಣಾಪುರ, ಪಲಿಮಾರು ಹಿರಿಯ, ಕಿರಿಯ, ಪೇಜಾವರ, ಕಾಣಿಯೂರು ಸ್ವಾಮೀಜಿಯವರು ಕ್ಷೀರಾಬ್ಧಿ ಪೂಜೆ ಮತ್ತು ಉತ್ಸವದಲ್ಲಿ ಪಾಲ್ಗೊಂಡರು.

ಹೋದ ವರ್ಷ ಕೊರೊನಾ ಕಾರಣದಿಂದ ಸೀಮಿತ ಭಕ್ತರಿಗೆ ಮಾತ್ರ ಅವಕಾಶವಿತ್ತು. ಈ ಬಾರಿ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ:ಹಸಿವು ನೀಗಿಸುವ ಯೋಜನೆ ಜಾರಿ ಮಾಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌

ಪೌರಕಾರ್ಮಿಕರಿಗೂ ಸೇವಾವಕಾಶ
ನಿತ್ಯ ರಥಬೀದಿಯನ್ನು ಶುಚಿಗೊಳಿಸುವ ಪೌರಕಾರ್ಮಿಕರಿಗೂ ಲಕ್ಷದೀಪೋತ್ಸವದಲ್ಲಿ ಇತರ ಕಾರ್ಯಕರ್ತರ ಜತೆ ದೀಪಗಳನ್ನು ಬೆಳಗಿಸಲು ಬುಧವಾರ ಅವಕಾಶ ಕಲ್ಪಿಸಲಾಗುತ್ತಿದೆ.

ಪ್ರಕೃತಿ ಸೊಬಗಿನಲ್ಲಿ ತೆಪ್ಪೋತ್ಸವ
ತೆಪ್ಪವನ್ನು ಪ್ರಕೃತಿ ಸಂಕೇತವಾಗಿ ಮಾವಿನ ತೋರಣಗಳಿಂದ ಅಲಂಕರಿಸಲಾಗಿತ್ತು. ಮಧ್ವಸರೋವರದಲ್ಲಿ ಮತ್ತು ತೆಪ್ಪಕ್ಕೆ ಯಾವುದೇ ವಿದ್ಯುತ್‌ ಅಲಂಕಾರವನ್ನು ಮಾಡದೆ ಕೇವಲ ಎಣ್ಣೆ ದೀಪದಲ್ಲಿಯೇ ಉತ್ಸವವನ್ನು ನಡೆಸಲಾಯಿತು. ತೆಪ್ಪ ಹಿಲಾಲಿ ಬೆಳಕಿನಲ್ಲಿ ಕಂಗೊಳಿಸಿತು.

4 ದಿನಗಳ ಉತ್ಸವ
ಪರಿಶುದ್ಧವಾಗಿ ತಯಾರಿಸಿದ ಎಳ್ಳೆಣ್ಣೆಯಲ್ಲಿ ಲಕ್ಷದೀಪೋತ್ಸವವನ್ನು ಆಚರಿಸಲಾಯಿತು. ನ. 16ರಿಂದ ಆರಂಭಗೊಂಡ ಲಕ್ಷದೀಪೋತ್ಸವ ನ. 19ರ ವರೆಗೆ ನಾಲ್ಕು ದಿನ ನಡೆಯಲಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.