ಉಡುಪಿಯಲ್ಲಿ ಶ್ರೀಕೃಷ್ಣನಿಗೆ ತುಲಾಭಾರ

ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವ ; ಇತಿಹಾಸ ನಿರ್ಮಿಸಿದ ಕಾರ್ಯಕ್ರಮ

Team Udayavani, Jan 6, 2020, 6:00 AM IST

05012020Astro09

ಉಡುಪಿ: ಶ್ರೀಕೃಷ್ಣ ಮಠದ ಉತ್ಸವ ಮೂರ್ತಿಗೆ ರವಿವಾರ ತುಲಾಭಾರ ಮಹೋತ್ಸವವು ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಮೊದಲ ಬಾರಿಗೆ ಸಂಭ್ರಮದಿಂದ ಸಂಪನ್ನಗೊಂಡಿತು.

ಸಂಜೆ ಚಾಮರಸೇವೆ ನಡೆದ ಬಳಿಕ, ರಾತ್ರಿ ಪೂಜೆ, ಶ್ರೀ ಮುಖ್ಯಪ್ರಾಣ ದೇವರಿಗೆ ರಂಗಪೂಜೆ, ಉತ್ಸವ ನಡೆಯಿತು. ಅನಂತರ ಸೃಷ್ಟಿ ನೃತ್ಯ ಕಲಾ ಕುಟೀರದ ಡಾ| ಮಂಜರಿ ಅವರಿಂದ “ಶ್ರೀಕೃಷ್ಣ ಸಂದರ್ಶನಂ’ ನೃತ್ಯರೂಪಕ ರಥಬೀದಿಯಲ್ಲಿ ನಿರ್ಮಿಸಿದ್ದ ಸುಧರ್ಮ ವೇದಿಕೆಯಲ್ಲಿ ನಡೆಯಿತು. ಬಳಿಕ ಶ್ರೀಕೃಷ್ಣ ದೇವರ ಉತ್ಸವಮೂರ್ತಿಗೆ ಸ್ವರ್ಣ ತುಲಾಭಾರ ಮಹೋತ್ಸವ ಇದೇ ಮೊದಲ ಬಾರಿ ನಡೆಯಿತು. ರಥಬೀದಿಯಲ್ಲಿ ಕಾರ್ಯಕ್ರಮ ಪೂರ್ತಿ ಕಿಕ್ಕಿರಿದ ಜನಸಂದಣಿ ಸೇರಿತ್ತು.

ದೇವರನ್ನು ತೂಗಲಿಕ್ಕೆ ನಾವು ಯಾರು, ದೇವರು ಕೊಟ್ಟದ್ದನ್ನೇ ನಾವು ಆತನಿಗೆ ಸಮರ್ಪಿಸುತ್ತಿದ್ದೇವೆ. ನಮ್ಮ ಭಾರ ಕಡಿಮೆ ಮಾಡಿ ಕೊಳ್ಳಲು ದೇವರಿಗೆ ಸಮರ್ಪಿಸುತ್ತಿದ್ದೇವೆ ಎಂದು ಪರ್ಯಾಯ ಶ್ರೀಪಾದರು ಆಶೀರ್ವಚನದಲ್ಲಿ ನುಡಿದರು.
ಇಂತಹ ಸತ್ಕಾರ್ಯಗಳನ್ನು ದೇವರು ನಮ್ಮೊಳ ಗಿದ್ದು, ಆತನೇ ಮಾಡಿಸಿಕೊಂಡದ್ದು ಎಂಬ ಅನುಸಂಧಾನ ಅಗತ್ಯ ಎಂದು ಶ್ರೀ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಹೇಳಿದರು. ಪಲಿಮಾರು ಸ್ವಾಮೀಜಿಯವರು ನಿತ್ಯ ಲಕ್ಷ ತುಳಸೀ ಅರ್ಚನೆ ನಡೆಸಿದರು. ನಾವು ಒಂದು ದಳವನ್ನಾದರೂ ಸಮರ್ಪಿಸಬೇಕು ಎಂದು ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.

ದೇವರಿಗೆ ತುಲನೆ ಇಲ್ಲ. ಪಲಿಮಾರು ಶ್ರೀಗಳು ಈಗಾಗಲೇ ವ್ಯಾಸರ ಸುವರ್ಣವೆಂಬ ಮಹಾಭಾರತ ಗ್ರಂಥದಿಂದಲೂ ಸುವರ್ಣದಿಂದಲೂ ತೂಗಿದ್ದಾರೆ. ಈಗ ಇನ್ನೊಂದು ಬಗೆಯಲ್ಲಿ ತೂಗಿದ್ದಾರೆಂದು ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥರು ಅಭಿಪ್ರಾಯಪಟ್ಟರು.

ಭಗವಂತ ನೀಡಿದ ಶಕ್ತಿಯಿಂದಲೇ ಜಗದೋದ್ಧಾರಕನನ್ನು ತೂಗಲಾಗಿದೆ ಎಂದು ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಗಳು ನುಡಿದರು. ಹೃತೂ³ರ್ವಕ ಅನುಸಂಧಾನ ದಿಂದ ತುಲಾಭಾರದಲ್ಲಿ ಪಾಲ್ಗೊಂಡರೆ ದೇಹದ ಭಾರ, ತಲೆಯ ಭಾರ ಇಳಿಕೆಯಾಗುತ್ತದೆ ಎಂದು ಶ್ರೀ ಬಾಳೆಗಾರು ಮಠದ ಶ್ರೀ ರಘುಭೂಷಣತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದರು. ಸತ್ಯ ಭಾಮೆ ಸುವರ್ಣದಿಂದ ಶ್ರೀಕೃಷ್ಣನನ್ನು ತೂಗಿದರೆ, ರುಕ್ಮಿಣಿ ತುಳಸಿಪತ್ರದಿಂದ ತೂಗಿದಳು ಎಂದು ಶ್ರೀ ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಹೇಳಿದರು. ವಿ| ಕೊರ್ಲಹಳ್ಳಿ ವೆಂಕಟೇಶಾಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ನೃತ್ಯ ಕಲಾವಿದೆಯ
ಏಕಾದಶಿ ಉಪವಾಸ
ನೃತ್ಯರೂಪಕ ನಡೆಸಿಕೊಟ್ಟ ಡಾ| ಮಂಜರಿ ಅವರು ಏಕಾದಶಿಯಂದು ನಿರ್ಜಲ ಉಪವಾಸ ಮಾಡುತ್ತಿದ್ದಾರೆ. ಅವರು ಕಲಾವಿದೆ ಮಾತ್ರವಲ್ಲದೆ ಧಾರ್ಮಿಕರೂ ಆಗಿದ್ದಾರೆ ಎಂದು ಪಲಿಮಾರು ಶ್ರೀಗಳು ಹೇಳಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.