ಶ್ರೀಕೃಷ್ಣ ಮಠ: ವೈಭವದ ಚೂರ್ಣೋತ್ಸವ

ರಥ ಎಳೆಯಲು ಮುಗಿಬಿದ್ದ ಭಕ್ತರು ; ಸ್ವಾಮೀಜಿಗಳ ಉಪಸ್ಥಿತಿ

Team Udayavani, Jan 16, 2020, 5:16 AM IST

15012020astro01

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಬುಧವಾರ ಹಗಲು ಬ್ರಹ್ಮ ರಥೋತ್ಸವ, ಚೂರ್ಣೋತ್ಸವ ನಡೆಯುವ ಮೂಲಕ ಪಲಿಮಾರು ಮಠ ಪರ್ಯಾಯದ ಕೊನೆಯ ಸಪ್ತೋತ್ಸವ ಸಮಾಪನಗೊಂಡಿತು.

ಶ್ರೀಮಧ್ವಾಚಾರ್ಯರು ಮಕರ ಸಂಕ್ರಮಣ ದಿನ ಶ್ರೀ ಕೃಷ್ಣ ದೇವರನ್ನು ಪ್ರತಿಷ್ಠಾಪಿಸಿದರು ಎಂಬ ನಂಬಿಕೆ ಹಿನ್ನೆಲೆಯಲ್ಲಿ ಮಕರಸಂಕ್ರಾಂತಿ ಉತ್ಸವ ಮಂಗಳವಾರ ಜರಗಿತು. ಸಪ್ತೋತ್ಸವದ ಕೊನೆಯ ದಿನದಂದು ಚೂರ್ಣೋತ್ಸವದ ಅಂಗವಾಗಿ ಬ್ರಹ್ಮರಥೋತ್ಸವ ನಡೆಯುವುದು ಇಲ್ಲಿನ ವಿಶೇಷವಾಗಿದೆ. ಸುವರ್ಣ ಪಲ್ಲಕಿಯಲ್ಲಿ ಶ್ರೀ ಕೃಷ್ಣಮುಖ್ಯಪ್ರಾಣ ದೇವರ ಉತ್ಸವಮೂರ್ತಿಯನ್ನು ತಂದು ಬ್ರಹ್ಮರಥದಲ್ಲಿ ಕೂರಿಸಿ ಪೂಜೆ, ನೈವೇದ್ಯ ಸಮರ್ಪಣೆ, ಮಹಾಮಂಗಳಾರತಿ ನೆರವೇರಿಸಲಾಯಿತು.

ದೇವರಿಗೆ ಅರ್ಪಿಸಿದ ಉಂಡೆ, ಸುವರ್ಣ ನಾಣ್ಯ, ಹಣ್ಣು ಹಂಪಲು, ತೆಂಗಿನಕಾಯಿಯನ್ನು ಬ್ರಹ್ಮರಥದಿಂದ ಭಕ್ತರಿಗೆ ವಿತರಿಸಲಾಯಿತು. ಪರ್ಯಾಯ ಶ್ರೀಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥರ ನೇತೃತ್ವದಲ್ಲಿ ನಡೆದ ಉತ್ಸವದಲ್ಲಿ ಕೃಷ್ಣಾಪುರ, ಪೇಜಾವರ, ಅದಮಾರು ಹಿರಿಯ, ಕಿರಿಯ, ಕಾಣಿಯೂರು, ಸೋದೆ, ಪಲಿಮಾರು ಕಿರಿಯ ಶ್ರೀಪಾದರು ಪಾಲ್ಗೊಂಡಿದ್ದರು.

ಗೋವಿಂದನ ಸ್ತುತಿಸಿದ ಭಕ್ತರು!
ಭಕ್ತರು ಶ್ರೀಕೃಷ್ಣ ದೇವರ ರಥೋತ್ಸವ ವೀಕ್ಷಿಸಿ ಪುಣೀತರಾದರು. ರಥೋತ್ಸವದಲ್ಲಿ ಭಾಗಿಯಾಗಿ ಗೋವಿಂದಾ ಎಂದು ನಾಮಸ್ಮರಣೆ ಮಾಡಿದರು. ಭಕ್ತರು ರಥದ ಹಗ್ಗವನ್ನು ಎಳೆದರು. ರಥವು ರಾಜಬೀದಿಗೆ ಒಂದು ಸುತ್ತು ಪ್ರದಕ್ಷಿಣೆ ಬಂದಿತು. ರಥದ ಉತ್ಸವ ಮುಂದೆ ತೆರಳಿದ್ದಂತೆ ಹತ್ತಾರು ಮಂದಿ ಭಕ್ತರು ಅದರ ಹಿಂದಿನಿಂದ ಉರುಳು ಸೇವೆ ಸಲ್ಲಿಸಿದರು. ರಥದ ಹಗ್ಗ ಎಳೆಯಲು ನೂಕುನುಗ್ಗಲು ನಡೆಯಿತು. ಮಠದ ಸಿಬಂದಿ, ಪೊಲೀಸರು ನಿಯಂತ್ರಿಸಿದರು.

ಸ‌ರೋವರದಲ್ಲಿ ಅವಭೃಥೋತ್ಸವ
ಉತ್ಸವದ ಬಳಿಕ ಶ್ರೀ ಕೃಷ್ಣನಿಗೆ ವಸಂತ ಮಹಲ್‌ನಲ್ಲಿ ಅಷ್ಟಾವಧಾನ ಪೂಜೆ, ಓಲಗ ಮಂಟಪ ಸೇವೆ ನಡೆಯಿತು. ಸೇವಾಕರ್ತರಿಗೆ ಓಕುಳಿ ಎರಚುವ ಸಂಪ್ರದಾಯಗಳು ನಡೆದವು. ಬಳಿಕ ಮಧ್ವ ಸರೋವರದಲ್ಲಿ ಅವಭೃಥಸ್ನಾನದಲ್ಲಿ ಎಲ್ಲ ಮಠಾಧೀಶರು ಮತ್ತು 23 ಸಪ್ತೋತ್ಸವದ ಸೇವಾಕರ್ತರು ಪಾಲ್ಗೊಂಡರು.

ಆಕರ್ಷಕ ತೆಂಗಿನ ಗರಿಯ ಟೋಪಿ
ಪೇಜಾವರ ಶ್ರೀಗಳು ಬೆಂಗಳೂರಿನಿಂದ ಝಾರ್ಖಂಡ್‌ ಕಲಾವಿದನೊಬ್ಬ ನಿಂದ ಮಾಡಿಸಿ ತಂದ ತೆಂಗಿನ ಗರಿಯ ಕಲಾತ್ಮಕ ಟೋಪಿಯನ್ನು ಎಲ್ಲ ಸ್ವಾಮೀಜಿಯವರು ಧರಿಸಿದ್ದರು. ಇದು ಬಿಸಿಲಿನಿಂದ ರಕ್ಷಣೆ ಒದಗಿಸುವಂತಿತ್ತು.

ಗಮನ ಸೆಳೆದ ರಾಮ, ಕೃಷ್ಣ
ರಥೋತ್ಸವದ ವೇಳೆ ಮಠದ ಗೋ ಶಾಲೆಯ ಓಂಗೋಲ್‌ ತಳಿಯ ರಾಮ ಮತ್ತು ಕೃಷ್ಣ ಎರಡು ಜೋಡಿ ಜಾನುವಾರುಗಳು ಗಮನ ಸೆಳೆದವು. ಅವುಗಳೆರಡು ಮೆರವಣಿಗೆಯ ಮುಂಚೂಣಿಯಲ್ಲಿದ್ದವು. ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಅವುಗಳನ್ನು ಭಕ್ತರು ಮುಟ್ಟಿ ನಮಸ್ಕರಿಸುತ್ತಿದ್ದರು. ಬ್ರಹ್ಮರಥ ಸಾಗಿ ಬಂದ ವೇಳೆ ನೆರೆದಿದ್ದ ಭಕ್ತರಲ್ಲಿ ಹಲವರು ಉದ್ದಂಡ ನಮಸ್ಕಾರ ಸಲ್ಲಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.