ಶ್ರೀಕೃಷ್ಣ ಮಠ: ಹನುಮಜ್ಜಯಂತಿ ಆಚರಣೆ
Team Udayavani, Apr 20, 2019, 6:10 AM IST
ಭಜನಾ ಕಾರ್ಯಕ್ರಮವನ್ನು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಉಡುಪಿ: ಶ್ರೀಕೃಷ್ಣ ಮಠ, ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿಯ ವತಿಯಿಂದ 13ನೇ ವರ್ಷದ ಹನುಮ ಜಯಂತಿ ಉತ್ಸವವು ಶುಕ್ರವಾರ ಮಠದಲ್ಲಿ ಶ್ರದ್ಧಾಭಕ್ತಿಯಿಂದ ಜರಗಿತು.
ಬೆಳಗ್ಗೆ ವಾಯುಸ್ತುತಿ ಪುರಶ್ಚರಣ ಹೋಮ, ಶ್ರೀಕೃಷ್ಣ ಮಹಾಮಂತ್ರ ಹೋಮ, ಮಹಾಮಂತ್ರ ಹೋಮ, ಕಷ್ಣನಿಗೆ ವಜ್ರ ಕವಚ, ಹೂವಿನ ಸೇವೆ ಜರಗಿತು. ಬೆಳಗ್ಗೆ 9.30ರಿಂದ ಮಧ್ವಮಂಟಪದಲ್ಲಿ ವಿವಿಧ ತಂಡ ಗಳಿಂದ ಭಜನೆ, ಚಂದ್ರಶಾಲೆಯಲ್ಲಿ ಬೆಳಗ್ಗೆ 11.30ರಿಂದ 3.30ವರೆಗೆ ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯಾಯ ಮತ್ತು ಬಳಗದವರಿಂದ ಭಕ್ತಿಗಾನ ಸುಧೆ, ರಾಜಾಂಗಣದಲ್ಲಿ ಪಡುಬಿದ್ರಿ ಚಂದ್ರಕಾಂತ ಹಾಗೂ ಬಳಗದವರಿಂದ ಸುಗಮ ಸಂಗೀತ, ಸಂಜೆ 4ರಿಂದ 7 ರವರೆಗೆ ಪುತ್ತಿಗೆ ಚಂದ್ರಶೇಖರ್ ಅವರಿಂದ ಸಾಕೊÕàಫೋನ್ ಸೇವೆ ನಡೆಯಿತು.
ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಭಜನಾ ಕಾರ್ಯಕ್ರಮ ಉದ್ಘಾಟಿಸಿದರು ಮತ್ತು ಪಾಕಶಾಲೆಯಲ್ಲಿ ಪಲ್ಲ ಪೂಜೆಯನ್ನು ನೆರವೇರಿಸಿದರು. ಅನಂತರ ರಾಜಾಂಗಣ ದಲ್ಲಿ ಅನ್ನಸಂತರ್ಪಣೆಗೆ ಚಾಲನೆ ನೀಡಿದರು. ಅನಂತರ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಆಕರ್ಷಕ ಸುಡುಮದ್ದು ಪ್ರದರ್ಶನದೊಂದಿಗೆ ಬ್ರಹ್ಮರಥ, ಸ್ವರ್ಣರಥ, ನವರತ್ನರಥ
ಸೇವೆ ಜರಗಿತು.
ಸೇವಾ ಸಮಿತಿಯ ಪ್ರಮುಖರಾದ ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ಜಿತೇಶ್ ಕಿದಿಯೂರು, ಯವರಾಜ್ ಸಾಲ್ಯಾನ್ ಮಸ್ಕತ್, ಮಧುಸೂದನ ಪೂಜಾರಿ, ಮಾಧವ ಸುವರ್ಣ, ಈಶ್ವರ್ ಚಿಟ್ಟಾಡಿ, ಮನೋಹರ್ ಶೆಟ್ಟಿ, ಎಂ.ಎಸ್. ಭಟ್ ಮಲ್ಪೆ, ಮಠದ ಪಿಆರ್ಒ ಶ್ರೀಶ
ಕಡೆಕಾರ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ