ಉಡುಪಿ ಶ್ರೀಕೃಷ್ಣನಿಗೆ ಸುವರ್ಣ ಗೋಪುರ ಸಮರ್ಪಣೋತ್ಸವ

ಜೂ. 6: ಸುವರ್ಣ ಶಿಖರ ಸ್ಥಾಪನೆ ಜೂ. 9: ಬ್ರಹ್ಮಕಲಶೋತ್ಸವ ಮೇ 31-ಜೂ.10

Team Udayavani, May 29, 2019, 6:10 AM IST

krishna-mutt

ಉಡುಪಿ: ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಸಂಕಲ್ಪದಂತೆ ಶ್ರೀಕೃಷ್ಣ ಮಠದ ಗೋಪುರಕ್ಕೆ ಸ್ವರ್ಣ ಕವಚ ಸಮರ್ಪಣೋತ್ಸವ ಮೇ 31ರಿಂದ ಜೂ.10ರ ವರೆಗೆ ನೆರವೇರಲಿದೆ.

ಮಂಗಳವಾರ ಆಮಂತ್ರಣ ಪತ್ರಿಕೆ ಬಿಡುಗಡೆ ಬಳಿಕ ಮಾತನಾಡಿದ ಶ್ರೀಗಳು, ಮೇ 31ರಂದು ಬೆಳಗ್ಗೆ 9ಕ್ಕೆ ಸಮರ್ಪಣೋತ್ಸವದ ಉದ್ಘಾಟನೆ ಸಮಾರಂಭ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ಜರಗಲಿದೆ. ಶ್ರೀ ಉತ್ತರಾಧಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಜೂ.1: ಶೋಭಾಯಾತ್ರೆ

ಬ್ರಹ್ಮಕಲಶೋತ್ಸವ ಪ್ರಯುಕ್ತ ಸುವರ್ಣ ಶಿಖರ, ರಜತ ಕಲಶ ಶೋಭಾಯಾತ್ರೆ ಜೂ.1ರಂದು ಸಂಜೆ 5 ಗಂಟೆಗೆ ಜೋಡುಕಟ್ಟೆಯಿಂದ ಶ್ರೀಕೃಷ್ಣಮಠದ ವರೆಗೆ ನಡೆಯಲಿದೆ. ಜೂ.2ರಂದು ಬೆಳಗ್ಗೆ 9.30ಕ್ಕೆ ರಥಬೀದಿಯಲ್ಲಿ ಭಾರತೀಯ ಗೋತಳಿಗಳ ಸಮ್ಮಿಲನ ನಡೆಯಲಿದೆ. ಜೂ.3ರಂದು ಶ್ರೀಕೃಷ್ಣ ಚಿಣ್ಣರ ಸಂತರ್ಪಣೆ ಫ‌ಲಾನುಭವಿ ಮಕ್ಕಳ ಕಾರ್ಯಕ್ರಮ ನೆರವೇರಲಿದೆ. ಜೂ.4ರಂದು ಸಾಯಂಕಾಲ ವಿವಿಧ ದೇವಸ್ಥಾನಗಳ ಸಹಕಾರದೊಂದಿಗೆ ಭಕ್ತರಿಂದ ಹಸಿರು ಹೊರೆ ಕಾಣಿಕೆ ಸಮರ್ಪಣೆ ನೆರವೇರಲಿದೆ.

ಸುವರ್ಣ ಗೋಪುರ ಶಿಖರ ಪ್ರತಿಷ್ಠೆ

ಜೂ.6ರಂದು ಸುವರ್ಣಗೋಪುರ ಶಿಖರ ಪ್ರತಿಷ್ಠೆ, ಅಷ್ಟಮಠಾಧೀಶರಿಂದ ಸಹಸ್ರ ರಜತ ಕಲಶಾಭಿಷೇಕ ನೆರವೇರಲಿದೆ. ಜೂ.9ರಂದು ಶ್ರೀಕೃಷ್ಣದೇವರಿಗೆ ಅಷ್ಟಮಠಾಧೀಶರಿಂದ ಬ್ರಹ್ಮಕಲಶಾಭಿಷೇಕ, ಜೂ.10ರಂದು ಶ್ರೀಕೃಷ್ಣ ದೇವರಿಗೆ ಸುವರ್ಣೋತ್ಸವ-ಅವಭೃಥ ಜರಗಲಿದೆ. ಈ ಭಾಗದಲ್ಲಿ ಗೋಪುರಕ್ಕೆ ಸಾವಿರ ಕಲಶಾಭಿಷೇಕ ನಡೆಯುತ್ತಿರುವುದು, ಅದು ಕೂಡ ಅಷ್ಟಮಠಾಧೀಶರಿಂದಲೇ ನಡೆಯುತ್ತಿರುವುದು ಇದೇ ಮೊದಲು ಎಂದು ಶ್ರೀಗಳು ತಿಳಿಸಿದರು.

ನಿತ್ಯ ಧಾರ್ಮಿಕ, ಸಾಹಿತ್ಯಿಕ ಸಂಭ್ರಮ

ಸಮರ್ಪಣೋತ್ಸವ ಪ್ರಯುಕ್ತ ಮೇ 31ರಿಂದ ಜೂ.10ರ ವರೆಗೆ ಪ್ರತಿದಿನ ವಿವಿಧ ಧಾರ್ಮಿಕ, ಸಾಹಿತ್ಯಿಕ ಗೋಷ್ಠಿ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿವೆ. ಮಂತ್ರ ಗೋಪುರಮ್‌(ಗೋಷ್ಠಿ), ಸಂಸ್ಕೃತ ಗೋಪುರಮ್‌, ಶ್ರೀಕೃಷ್ಣ ಕಾವ್ಯ ಗೋಪುರಮ್‌, ಧರ್ಮ ಗೋಪುರಮ್‌, ಸಸ್ಯ ಗೋಪುರಮ್‌, ದಾಸ ಸಾಹಿತ್ಯ ಗೋಪುರಮ್‌, ರಾಷ್ಟ್ರ ಗೋಪುರಮ್‌, ಮಾಧ್ಯಮ ಗೋಪುರಮ್‌, ಶಾಸ್ತ್ರ ಗೋಪುರಮ್‌,ಜ್ಞಾನ ವಿಜ್ಞಾನ ಗೋಪುರಮ್‌, ಬಾಲಗೋಪುರಮ್‌ ಮಾನವೀಯ ಸಂಪದಭಿವೃದ್ಧಿ ಮತ್ತು ವೇದಾಂತ ಚಿಂತನೆ ನಡೆಯಲಿವೆ.

ಅಷ್ಟಮಠಾಧೀಶರಲ್ಲದೆ ಇತರ ಮಠಾಧೀಶರು, ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಮೈಸೂರು ಮಹಾರಾಜ ಯದುವೀರಕೃಷ್ಣದತ್ತ ಚಾಮರಾಜ ಒಡೆಯರು, ತಿರುವನಂತಪುರಮ್‌ನ ತಿರುವಾಂಕೂರು ಮಹಾರಾಜರ ಸಹಿತ ದೇಶದ ವಿವಿಧ ರಾಜರು, ರಾಜವಂಶಸ್ಥರು ಮತ್ತು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀಪಾದರು ತಿಳಿಸಿದರು.

ಎನ್‌ಐಟಿಕೆ ಪ್ರಮಾಣಪತ್ರ

ಗೋಪುರಕ್ಕೆ ಚಿನ್ನವನ್ನು ಮಡಾಯಿಸುವ ಮೊದಲು ಅದರಲ್ಲಿರುವ ಚಿನ್ನದ ಪ್ರಮಾಣವನ್ನು ಎನ್‌ಐಟಿಕೆ ತಜ್ಞರು ಪ್ರಮಾಣೀಕರಿಸಿದ್ದಾರೆ. ಭಕ್ತರು ನೀಡಿದ ಚಿನ್ನವನ್ನು ಪ್ರಾಮಾಣಿಕವಾಗಿ ಬಳಸಿಕೊಳ್ಳಲಾಗಿದೆ. ತಗಡಿನ ಒಳಭಾಗದಲ್ಲಿಯೇ ಮೊಳೆ ಜೋಡಿಸಲಾಗಿದೆ. ಇದರಿಂದಾಗಿ ಸ್ವಲ್ಪವೂ ಮಳೆನೀರು ಒಳಬರುವುದು ಅಸಾಧ್ಯ ಎಂದು ಶ್ರೀಗಳು ಹೇಳಿದರು.

ಭಕ್ತರಿಗೆ ಸಕಲ ವ್ಯವಸ್ಥೆ

ಉಡುಪಿಯಲ್ಲಿ ನೀರಿನ ಕೊರತೆ ಇದ್ದರೂ ಕೂಡ ಭಕ್ತರಿಗೆ ಎಲ್ಲ ಅವಶ್ಯ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಹಾಗಾಗಿ ಶ್ರೀಕೃಷ್ಣ ಮಠಕ್ಕೆ ಬರಲು ಹಿಂಜರಿಕೆ ಬೇಡ. ಅಷ್ಟರೊಳಗೆ ಮಳೆಯೂ ಸುರಿಯಲಿದೆ ಎಂದು ಶ್ರೀಗಳು ಹೇಳಿದರು.

ಡಿಸಿ ಹೆಪ್ಸಿಬಾರಾಣಿ ಕೊರ್ಲಪಾಟಿ ಆಮಂತ್ರಣಪತ್ರಿಕೆ ಅನಾವರಣಗೊಳಿಸಿದರು. ಎಸ್‌ಪಿ ನಿಶಾ ಜೇಮ್ಸ್‌, ಮಠದ ದಿವಾನರಾದ ಶಿಬರೂರುವೇದವ್ಯಾಸ ತಂತ್ರಿ, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಶ ಭಟ್ ಕೊಡವೂರು, ವಿದ್ವಾನ್‌ ಕೊರ್ಲಹಳ್ಳಿ ವೆಂಕಟೇಶಾಚಾರ್ಯ, ರಾಮಚಂದ್ರ ಉಪಾಧ್ಯಾಯ, ವಿಷ್ಣುಪ್ರಸಾದ್‌ ಪಾಡಿಗಾರ್‌, ಚಿನ್ನದ ಕೆಲಸದ ನಿರ್ವಾಹಕರಾದ ವೆಂಕಟೇಶ್‌ ಶೇಟ್ ಮತ್ತು ಯಶವಂತ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.