ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಸಂಪನ್ನ


Team Udayavani, Sep 14, 2017, 6:20 AM IST

astami.jpg

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಬುಧವಾರ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಂಡಿತು. ಸುಮಾರು 5,000 ವರ್ಷಗಳ ಹಿಂದೆ ಶ್ರೀಕೃಷ್ಣ ಸಿಂಹ/ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ದಿನ ರಾತ್ರಿ ಚಂದ್ರೋದಯದ ಹೊತ್ತಿಗೆ ರೋಹಿಣಿ ನಕ್ಷತ್ರ ಕೂಡಿಬಂದ ಬುಧವಾರ ಶ್ರೀಕೃಷ್ಣ ಭೂಮಿಯಲ್ಲಿ ಅವತರಿಸಿದ ಎಂದು ಶ್ರೀಮದ್ಭಾಗವತಾದಿ ಪುರಾಣಗಳು ಹೇಳಿವೆ. ಈ ಬಾರಿಯೂ ಬುಧ ವಾರವೇ ಬಂದದ್ದು ಕೃಷ್ಣಾಷ್ಟಮಿ ಆಚರಣೆಯ ವಿಶೇಷವಾಗಿದೆ.
ಶ್ರೀಕೃಷ್ಣ ಅವತರಿಸಿದ್ದ ಮಥುರಾ ಕ್ಷೇತ್ರದಲ್ಲಿ 3 ವರ್ಷದ ಹಿಂದೆ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಬುಧವಾರ ಪರ್ಯಾಯ ಮಠಾಧೀಶರಾಗಿ ಮಹಾಪೂಜೆ ನೆರವೇರಿಸಿದರು. ಉಡುಪಿಯ ಸಂಭ್ರಮವನ್ನು ಸವಿಯಲು ಬುಧವಾರ ದಿಂದಲೇ ನಾಡಿನೆಲ್ಲೆಡೆಯಿಂದ ಭಕ್ತ ಜನರು ಬರುತ್ತಿದ್ದಾರೆ.

ನಿರ್ಜಲ ಉಪವಾಸದಲ್ಲಿದ್ದ ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬೆಳಗ್ಗೆ ಮತ್ತು ರಾತ್ರಿ ಮಹಾಪೂಜೆ ನಡೆಸಿ ಮಧ್ಯರಾತ್ರಿ ಕೃಷ್ಣಾಘÂì ಪ್ರದಾನ ಮಾಡಿದರು. ಭಕ್ತರು ದೇವರ ದರ್ಶನ ಪಡೆದರು.

ಕೃಪೆ ತೋರಿದ ವರುಣ
ಮಂಗಳವಾರ ರಾತ್ರಿ ಉಡುಪಿಯೆಲ್ಲೆಡೆ ಜೋರು ಮಳೆಯಾಗಿತ್ತು. ಆ ಕ್ಷಣವನ್ನು ನೋಡಿದರೆ ಬುಧ ವಾರ ಭಾರೀ ಮಳೆಯಾಗುವ ಸಂಭವವೇ ಹೆಚ್ಚೆಂದು ಭಕ್ತರು ಆಡಿಕೊಂಡಿದ್ದರು. ಆದರೆ ಬುಧವಾರ ಇಡೀ ದಿನ ವರುಣನ ಆಗಮನವಾಗದೆ ಭಕ್ತರು ಸಲೀಸಾಗಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಏಕಾದಶಿಯಂತೆ ನಿರ್ಜಲ ಉಪವಾಸವಿರುವ ಕಾರಣ ಶ್ರೀಪಾದರು ರಾತ್ರಿಯೂ ಶ್ರೀಕೃಷ್ಣನಿಗೆ ತುಳಸೀ ಅರ್ಚನೆ ನಡೆಸಿ ಮಹಾಪೂಜೆ ಸಲ್ಲಿಸಿದರು. ಮಧ್ಯರಾತ್ರಿ ಶ್ರೀಪಾದರು ಕೃಷ್ಣಾಘÂì ಪ್ರದಾನ ಮಾಡಿದರು. ಅನಂತರ ಭಕ್ತ ಜನಸ್ತೋಮ ಕೃಷ್ಣಾಘÂì ಪ್ರದಾನ ಮಾಡಿದರು.

ಉಂಡೆ, ಚಕ್ಕುಲಿ ಸಮರ್ಪಣೆ
ಬೆಳಗ್ಗೆ ಮಹಾಪೂಜೆ ಬಳಿಕ ರಾತ್ರಿಯ ದೇವರ ನೈವೇದ್ಯಕ್ಕಾಗಿ ಉಂಡೆ ಕಟ್ಟಲು ಶ್ರೀಪಾದರು ಮುಹೂರ್ತ ಮಾಡಿದರು. ಬಾಣಸಿಗರು ತಯಾ ರಿಸಿದ ಚಕ್ಕುಲಿ, ಲಡ್ಡುಗಳನ್ನು ರಾತ್ರಿ ಪೂಜೆ ವೇಳೆ ದೇವರಿಗೆ ನಿವೇದಿಸಲಾಯಿತು. ಹಲವು ದೇವಸ್ಥಾನ, ಮನೆಗಳಲ್ಲಿಯೂ ರಾತ್ರಿ ಪೂಜೆ ನಡೆಸಿ ಅಘÂì ಪ್ರದಾನ ಮಾಡಲಾಯಿತು.

ಎಲ್ಲಿ ನೋಡಿದರಲ್ಲಿ ವೇಷಧಾರಿಗಳು
ವಿಟ್ಲಪಿಂಡಿಯ ಮುನ್ನಾ ದಿನವಾದ ಬುಧವಾರ ನಗರದೆಲ್ಲೆಡೆ ವೇಷಗಳ ಕಾರುಬಾರು ಕಂಡುಬಂದಿತು. ಹುಲಿವೇಷದಿಂದ ಹಿಡಿದು ಬಗೆಬಗೆಯ ವೇಷಗಳು ಇದ್ದವು. ಶ್ರೀಕೃಷ್ಣ ಮಠದಲ್ಲಿ ನಡೆದ ಮುದ್ದುಕೃಷ್ಣ ವೇಷ ಸ್ಪರ್ಧೆಯಲ್ಲಿ 400ಕ್ಕೂ ಅಧಿಕ ಮಕ್ಕಳು ಪಾಲ್ಗೊಂಡಿದ್ದರು.

ನಿರಂತರ ಭಜನೆ
ಉಡುಪಿ, ಕುಂದಾಪುರ, ಹಂಗಾರಕಟ್ಟೆ ಮೊದ ಲಾದೆಡೆಗಳ ಭಜನಾ ತಂಡಗಳಿಂದ ಮಠದ ಮಧ್ವ ಮಂಟಪದಲ್ಲಿ ದಿನವಿಡೀ ಭಜನ ಕಾರ್ಯಕ್ರಮ ನಡೆಯಿತು. ಭಜನ ಕಾರ್ಯಕ್ರಮಕ್ಕೆ ಪೇಜಾವರ ಶ್ರೀಗಳು ಚಾಲನೆ ನೀಡಿದರು. ಸ್ಯಾಕೊÕàಫೋನ್‌ ವಾದನವೂ ಇತ್ತು.

ಇಂದು ವಿಟ್ಲಪಿಂಡಿ ಉತ್ಸವ
ಶ್ರೀಕೃಷ್ಣ ಮಠದಲ್ಲಿ ಇಂದು (ಗುರುವಾರ) ವಿಟ್ಲಪಿಂಡಿ (ಮೊಸರು ಕುಡಿಕೆ) ಉತ್ಸವ ಅಪರಾಹ್ನ 3.30ಕ್ಕೆ ಜರಗಲಿದೆ. ವಿವಿಧ ವೇಷಗಳ ಪ್ರದರ್ಶನ, ಸ್ಪರ್ಧೆ ಇರಲಿದೆ. ಶ್ರೀಕೃಷ್ಣ ಮೃಣ್ಮಯ ಪ್ರತಿಮೆಯ ರಥೋತ್ಸವ ಸಹಿತ ಲೀಲೋತ್ಸವ (ವಿಟ್ಲಪಿಂಡಿ) ಜರಗಲಿದ್ದು, ಬೆಳಗ್ಗೆ ಮಹಾಪೂಜೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಶ್ರೀಕೃಷ್ಣ ಲೀಲೋತ್ಸವದ ಭವ್ಯ ಮೆರವಣಿಗೆ 3 ಗಂಟೆಗೆ ಹೊರಡಲಿದೆ. ಮಣ್ಣಿನಿಂದ ತಯಾರಿಸಿದ ಮೂರ್ತಿಯನ್ನು ಉತ್ಸವ ಮೆರವಣಿಗೆಯಲ್ಲಿ ತರುತ್ತಾರೆ. ಗೋವಳರಿಂದ ಮೊಸರು ಕುಡಿಕೆ ಒಡೆಯುವ ದೃಶ್ಯ ಕಣ್ತುಂಬಲಿದೆ. ಗುರುವಾರ ಬೆಳಗ್ಗೆಯಿಂದಲೇ ಭೋಜನ ಪ್ರಸಾದ ವಿತರಣೆ ಇರಲಿದೆ. ಉತ್ಸವದಲ್ಲಿ ಶ್ರೀಕೃಷ್ಣನ ಮಣ್ಣಿನ ಮೂರ್ತಿ, ಶ್ರೀ ಅನಂತೇಶ್ವರ, ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ಉತ್ಸವಮೂರ್ತಿಗಳು ಪಾಲ್ಗೊಳ್ಳಲಿವೆ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.