ನಾಳೆ ಬಾಳೆ ಮುಹೂರ್ತ: ಐದನೇ ಶತಮಾನದತ್ತ ಉಡುಪಿ ಪರ್ಯಾಯ


Team Udayavani, Nov 29, 2020, 5:32 AM IST

udupiನಾಳೆ ಬಾಳೆ ಮುಹೂರ್ತ: ಐದನೇ ಶತಮಾನದತ್ತ ಉಡುಪಿ ಪರ್ಯಾಯ

ಸಾಂದರ್ಭಿಕ ಚಿತ್ರ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಪೂರ್ವಭಾವಿ ಬಾಳೆ ಮುಹೂರ್ತವು ನ. 30ರಂದು ನಡೆಯಲಿದ್ದು, ದ್ವೆವಾರ್ಷಿಕ ಪರ್ಯಾಯ ಪೂಜಾ ಪದ್ಧತಿಯಲ್ಲಿ ಇದು 4ನೇ ಶತ ಮಾನದ ಕೊನೆಯ ಘಟ್ಟ ಮತ್ತು 5ನೇ ಶತಮಾನದ ಆದಿ ಭಾಗದ ತಿರುವಿನ ಸಂಕ್ರಮಣ ಕಾಲದ್ದು ಎನಿಸಲಿದೆ.

ಮಧ್ವಾಚಾರ್ಯ ಪ್ರತಿಷ್ಠಾಪಿತ ಶ್ರೀಕೃಷ್ಣನನ್ನು ಪೂಜಿಸಲು ವಾದಿರಾಜ ಸ್ವಾಮಿಗಳು ಹಾಕಿಕೊಟ್ಟ ಪರಂಪರೆ ಈಗ ಅತಿ ಮಹತ್ವದ ಘಟ್ಟದಲ್ಲಿದೆ. ಮಧ್ವಾಚಾರ್ಯರು (1238 - 1317) ಜೀವಿತದ ಕೊನೆಯ ಭಾಗ ದಲ್ಲಿ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದರೆಂಬ ನಂಬಿಕೆ ಇದೆ. ಇದರ ಪ್ರಕಾರ 1300ರ ಬಳಿಕ ಪ್ರತಿಷ್ಠಾಪನೆ ನಡೆದಿದೆ. ಅವರು ಎರಡು ತಿಂಗಳ ಪರ್ಯಾಯ ಕ್ರಮ ವನ್ನು ಸೂಚಿಸಿದ್ದರು. 200 ವರ್ಷಗಳ ಬಳಿಕ ಜನ್ಮತಾಳಿದ ವಾದಿರಾಜರು (1481-1601) ಎರಡು ವರ್ಷಗಳ ಪರ್ಯಾಯ ಆರಂಭಿಸಿದರು. ವಾದಿರಾಜರಿಗೆ 8 ವರ್ಷವಾಗುವಾಗ 1489ರಲ್ಲಿ ಸೋದೆ ಮಠದ ಉತ್ತರಾಧಿಕಾರಿಯಾಗಿ ಸನ್ಯಾಸಾಶ್ರಮವಾಯಿತು. 1518ರಲ್ಲಿ ಗುರು ಶ್ರೀ ವಾಗೀಶತೀರ್ಥರು ನಿರ್ಯಾಣ ಹೊಂದಿದರು. 37ನೇ ವಯಸ್ಸಿನಲ್ಲಿ ಮಠಾಧಿಪತಿಯಾದರು. 1518ರಿಂದ 1522ರ ವರೆಗೆ ಎರಡು ತಿಂಗಳ ಮೂರು ಪರ್ಯಾಯ ಪೂಜೆಯನ್ನು ನಡೆಸಿದ ವಾದಿರಾಜರು 1522ರಲ್ಲಿ ದ್ವೆ„ವಾರ್ಷಿಕ ಪರ್ಯಾಯ ಪೂಜೆ ಕ್ರಮ ಆರಂಭಿಸಿದರು. ಇದು ಆರಂಭವಾಗುವುದು ಪಲಿಮಾರು ಮಠದಿಂದ. ಅನಂತರ ಅದಮಾರು, ಕೃಷ್ಣಾಪುರ, ಪುತ್ತಿಗೆ, ಶೀರೂರು, ಸೋದೆ, ಕಾಣಿಯೂರು, ಪೇಜಾವರ ಮಠದಲ್ಲಿ ಪರ್ಯಾಯ ಚಕ್ರ ಕೊನೆಗೊಳ್ಳುವುದು.

ಮುಂದಿನದು 251ನೇ ಪರ್ಯಾಯ
1522ರಿಂದ ಆರಂಭಗೊಂಡ ಈ ಪರ್ಯಾಯ ಪೂಜಾ ಪದ್ಧತಿಗೆ 16 ವರ್ಷಗಳ 31 ಚಕ್ರಗಳು ಉರುಳಿವೆ. ಈಗ ನಡೆಯುತ್ತಿರುವುದು 250ನೇ ಪರ್ಯಾಯವಾಗಿದ್ದು, 32ನೇ ಪರ್ಯಾಯ ಚಕ್ರದಲ್ಲಿ 2ನೇಯದು. ಇದು ಅದಮಾರು ಮಠದಿಂದ ನಡೆಯುತ್ತಿದೆ. ಹೀಗೆ ಈಗ ನಡೆಯು
ತ್ತಿ ರುವುದು 499ನೇ ವರ್ಷ. 2021ರ ಜನವರಿ 18ರಂದು 500ನೇ ವರ್ಷ ಆರಂಭ‌ವಾಗುತ್ತದೆ. 2022ರ ಜನವರಿ 18ರಂದು ಪರ್ಯಾಯ ಪೂಜಾ ಸರದಿಯನ್ನು ನಿರ್ವಹಿಸುವವರು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು. ಅಂದು ಐತಿಹಾಸಿಕವಾದ 501ನೇ ವರ್ಷ ಆರಂಭಗೊಳ್ಳುತ್ತದೆ ಮತ್ತು 251ನೇ ಪರ್ಯಾಯೋತ್ಸವವಾಗಿದೆ. ಹೀಗೆ ಒಂದು ಶತಮಾನದ ಚಕ್ರ ಕೊನೆ ಗೊಂಡು ಇನ್ನೊಂದು ಶತಮಾನದ ಆರಂಭಕ್ಕೆ ನಾಂದಿ ಯಾಗುವ ಅಪೂರ್ವ ಘಳಿಗೆ.

ಅಪೂರ್ವ ಅವಕಾಶವೆಂಬ ಹರ್ಷ
5ನೇ ಶತಮಾನದ ಪೂಜೆ ಆರಂಭವಾಗುವ ಕುರಿತು ಶ್ರೀ ವಿದ್ಯಾಸಾಗರ ತೀರ್ಥರಲ್ಲಿ ಕೇಳಿದಾಗ, ಸದಾ ಗಂಭೀರ ಮುಖಮುದ್ರೆಯ ಮುಖದಲ್ಲಿ ಒಂದು ಕಿರುನಗೆ ಬೀರಿ ಹೀಗೆಂದರು: “ಇದೊಂದು ಅಪೂರ್ವ ಅವಕಾಶ, ಹೊಣೆಗಾರಿಕೆಯೂ ಸಹ. ಪ್ರಾಚೀನ ಸಂಪ್ರದಾಯ ಎಂಬುದು ಸಿದ್ಧವಾಗುತ್ತದೆ. ಈ ಅಪೂರ್ವ ಘಳಿಗೆಯನ್ನು ಸ್ಮರಣೀಯವಾಗಿಸಲು ಕಾರ್ಯಕ್ರಮವನ್ನು ಆಯೋಜಿಸಲು ಯತ್ನಿಸುತ್ತೇವೆ’.

ಕೃಷ್ಣಾಪುರ ಶ್ರೀಗಳಿಗೆ ಒಲಿದ ಯೋಗ
ಶ್ರೀ ವಿದ್ಯಾಸಾಗರತೀರ್ಥರು 4ನೇ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡುತ್ತಿದ್ದಾರೆ. 1974-75, 1990-91, 2006-07ರಲ್ಲಿ 3 ಬಾರಿ ಪರ್ಯಾಯ ಪೂಜೆ ನಿರ್ವಹಿಸಿದ್ದು 2022-23ರ ಅವಧಿಗೆ ಪೂಜಾ ಕೈಂಕರ್ಯ ನಿರ್ವಹಿಸಲಿದ್ದಾರೆ. ಆಶ್ರಮ ಜ್ಯೇಷ್ಠರಾಗಿದ್ದ ಪೇಜಾವರ ಶ್ರೀ ವಿಶ್ವೇಶತೀರ್ಥರು 2019ರ ಡಿ. 29ರಂದು ನಿರ್ಯಾಣರಾದ ಬಳಿಕ, 501ನೆಯ ವರ್ಷದ ಐತಿಹಾಸಿಕ ಕಾಲಘಟ್ಟ ಬರುವಾಗ
ಶ್ರೀ ವಿದ್ಯಾಸಾಗರತೀರ್ಥರೇ ಆಶ್ರಮ ಜ್ಯೇಷ್ಠರಾಗಿದ್ದಾರೆ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.