ಉಡುಪಿ ತಾಲೂಕು ಮಟ್ಟದ ಕಂದಾಯ ಅದಾಲತ್: 85 ಪ್ರಕರಣ ವಿಲೇವಾರಿ
Team Udayavani, Jul 14, 2019, 5:15 AM IST
ಉಡುಪಿ: ಉಡುಪಿ ತಾಲೂಕಿನ ಪಿಂಚಣಿ ಮತ್ತು ಕಂದಾಯ ಅದಾಲತ್ ಕಾರ್ಯಕ್ರಮ ಉಡುಪಿಯ ಬನ್ನಂಜೆಯಲ್ಲಿರುವ ಹಳೆಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕುಂದಾಪುರ ಸಹಾಯಕ ಆಯುಕ್ತ ಎಸ್.ಎಸ್ ಮಧುಕೇಶ್ವರ್ ಅಧ್ಯಕ್ಷತೆಯಲ್ಲಿ ಗುರುವಾರ ಜರಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಕಂದಾಯ ಅದಾಲತ್ ಸೂಕ್ತ ವೇದಿಕೆಯಾಗಿದೆ. ವಿಶೇಷವಾಗಿ ದೀರ್ಘಕಾಲದಿಂದ ಬಾಕಿ ಇರುವ ಪ್ರಕರಣಗಳನ್ನು ಇಲ್ಲಿ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.
ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಉಪ ತಹಶೀಲ್ದಾರ್ ಸುರೇಂದ್ರ ಬಾಬು, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿ ಕಾರಿಗಳು ಹಾಜರಿದ್ದರು.ಪಿಂಚಣಿ ಅದಾಲತ್ನಲ್ಲಿ 22 ಫಲಾನುಭವಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಹಾಗೂ ಕಂದಾಯ ಅದಾಲತ್ನಲ್ಲಿ 85 ಪ್ರಕರಣಗಳನ್ನು ವಿಲೇವಾರಿ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್