ಉಡುಪಿ: ಹೆಮ್ಮಕ್ಕಳ ಸಂಖ್ಯೆ ಗಣನೀಯ ಕುಸಿತ


Team Udayavani, Aug 10, 2017, 7:30 AM IST

child.jpg

ಉಡುಪಿ: ಉಡುಪಿ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಣ್ಣು ಮಕ್ಕಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ಕಳೆದ ಮಾರ್ಚ್‌ವರೆಗಿನ ಲಿಂಗನುಪಾತ ವರದಿ ನೋಡಿದರೆ 1,000 ಗಂಡು ಮಕ್ಕಳಿಗೆ ಉಡುಪಿಯಲ್ಲಿ 954 ಹೆಣ್ಣು ಮಕ್ಕಳಿದ್ದಾರೆ. ದೇಶದೆಲ್ಲೆಡೆ ಬೇಟಿ ಬಚಾವೋ – ಬೇಟಿ ಪಡಾವೋ ಘೋಷಣೆ ಮೊಳಗುತ್ತಿದ್ದರೆ ಉಡುಪಿಯಲ್ಲಿ ಮಾತ್ರ ವರ್ಷದಿಂದ ವರ್ಷಕ್ಕೆ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ.

ಆರೋಗ್ಯ ನಿರ್ವಹಣಾ ಮಾಹಿತಿ ವರದಿಯಿಂದ 0-6 ವರ್ಷ ವಯಸ್ಸಿನ ಹೆಣ್ಣು ಹಾಗೂ ಗಂಡು ಮಕ್ಕಳ ಲಿಂಗನುಪಾತ ನೋಡಿದರೆ ಭಾರೀ ಪ್ರಮಾಣದ ವ್ಯತ್ಯಾಸ ಕಂಡು ಬರುತ್ತಿದೆ. ಲಿಂಗನುಪಾತ ವರದಿ ಪ್ರಕಾರ ರಾಜ್ಯದಲ್ಲಿ ಕರಾವಳಿಯ ಎರಡು ಜಿಲ್ಲೆಗಳೇ ಮುಂಚೂಣಿಯಲ್ಲಿ ಕಾಣಿಸಿಕೊಂಡಿವೆ. ಬುದ್ಧಿವಂತರ ಜಿಲ್ಲೆಗಳೆಂದು ಕರೆಯಲ್ಪಡುವ ಉಡುಪಿ ಹಾಗೂ ದ.ಕ.ದಲ್ಲಿ ಮಾತ್ರ ಹೆಣ್ಣು ಮಕ್ಕಳ ಸಂಖ್ಯೆ ಕುಸಿಯುತ್ತಿರುವ ಬೆಳವಣಿಗೆ ಆತಂಕ ಮೂಡಿಸಿದೆ.

ಅನುಪಾತ ಕುಸಿತ
ಉಡುಪಿ ಜಿಲ್ಲೆಯ ಕಳೆದ 10 ವರ್ಷಗಳ ಲಿಂಗಾನುಪಾತ ಪ್ರಮಾಣ ನೋಡಿದರೆ 2007-08ರಲ್ಲಿ 1,000 ಗಂಡು ಮಕ್ಕಳಿಗೆ 913 ಹೆಣ್ಣುಮಕ್ಕಳಿದ್ದರು; 2012-13ರಲ್ಲಿ 980ಕ್ಕೆ ಏರಿತ್ತು. ಅದರ ಮುಂದಿನ ವರ್ಷ ಅಂದರೆ 2013-14ರಲ್ಲಿ ಅದು 938ಕ್ಕೆ ಕುಸಿತ ಕಂಡಿತ್ತು. ಆ ಬಳಿಕ 2015ರಲ್ಲಿ 963ಕ್ಕೆ ಏರಿಕೆ ಕಂಡಿತ್ತು. 2016- 17ರ ಮಾರ್ಚ್‌ವರೆಗೆ ಜಿಲ್ಲಾ ಆರೋಗ್ಯ ಇಲಾಖೆ ವರದಿ ಪ್ರಕಾರ ಜಿಲ್ಲೆಯಲ್ಲಿ 1,000 ಗಂಡು ಮಕ್ಕಳಿಗೆ 954 ಮಂದಿ ಹೆಣ್ಣು ಮಕ್ಕಳಿದ್ದಾರೆ.
 
ಕುಸಿತಕ್ಕೆ ಕಾರಣಗಳೇನು?
ಹೆಣ್ಣು ಮಕ್ಕಳ ಸಂಖ್ಯೆ ಗಣನೀಯ ವಾಗಿ ಇಳಿಕೆಯಾಗಲು ಕಾರಣ ಕಡಿಮೆಯಾಗುತ್ತಿರುವ ಜನನ ದರ ಪ್ರಮಾಣ, ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಕಾನೂನು ಬಾಹಿರವಾಗಿ ಭ್ರೂಣಲಿಂಗ ಪತ್ತೆ, ಒಂದಕ್ಕಿಂತ ಹೆಚ್ಚಿನ ಮಗು ಬಯಸದೆ ಇರುವುದು, ಗಂಡುಮಕ್ಕಳ ಮೇಲಿನ ಮೋಹದಿಂದ ಹೆಣ್ಣು ಭ್ರೂಣ ಹತ್ಯೆ, ಈ ಎಲ್ಲ ಕಾರಣಗಳಿಂದ ಹೆಣ್ಣುಮಕ್ಕಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದಾಗಿ ಇತ್ತೀಚೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವರದಿಯೂ ಹೇಳಿತ್ತು.

ಜನನ ದರ ಪ್ರಮಾಣವೂ ಕುಸಿತ
ಉಡುಪಿ ಜಿಲ್ಲೆಯಲ್ಲಿ ಕೇವಲ ಹೆಣ್ಣು ಮಕ್ಕಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿರುವುದಲ್ಲ. ಒಟ್ಟಾರೆ ಗಂಡು ಅಥವಾ ಹೆಣ್ಣು ಮಕ್ಕಳ ಜನನ ದರ ಪ್ರಮಾಣವೂ ಕಡಿಮೆಯಾಗುತ್ತಿರುವುದೂ ಆತಂಕಕಾರಿ ಬೆಳವಣಿಗೆ. ಅಂದರೆ 5 ವರ್ಷಗಳ ಹಿಂದೆ ಶೇ. 17ರಷ್ಟಿದ್ದ ಜನನ ದರ ಪ್ರಮಾಣ ಈಗ ಶೇ. 11ಕ್ಕೆ ಕುಸಿದಿದೆ. ಇದಕ್ಕೆ ಕಾರಣವೂ ಇದೆ ಕರಾವಳಿ ಭಾಗದಲ್ಲಿ ತಡವಾಗಿ ಮದುವೆಯಾಗುತ್ತಿರುವುದು, ಪತಿ-ಪತ್ನಿ ಇಬ್ಬರೂ ಉದ್ಯೋಗಿಗಳಾಗಿದ್ದರೆ ಮಗು ಪಡೆಯುವ ಬಗ್ಗೆ ನಿರಾಸಕ್ತಿ, ಒಂದೇ ಮಗು ಸಾಕೆನ್ನುವ ಭಾವನೆ ಈ ಎಲ್ಲ ಕಾರಣಗಳಿಂದ ಜನನ ದರ ಪ್ರಮಾಣ ಕುಸಿಯುತ್ತಿದೆ. ಒಂದು ರೀತಿಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗಲು ಇದು ಕೂಡ ಒಂದು ಕಾರಣ ಎನ್ನಲಾಗುತ್ತಿದೆ. 

ಏನೆಲ್ಲ ಶಿಕ್ಷೆಯಿದೆ?
ನಿಯಮ ಉಲ್ಲಂ ಸುವ ವೈದ್ಯರಿಗೆ 3 ವರ್ಷ ಜೈಲು ಹಾಗೂ 10,000 ರೂ. ದಂಡ, 2ನೇ ಬಾರಿ ಅಪರಾಧ ಸಾಬೀತಾದರೆ ಮತ್ತೆ 5 ವರ್ಷ ಹಾಗೂ 50,000 ರೂ. ದಂಡ ವಿಧಿಸಲಾಗುತ್ತದೆ. ಭ್ರೂಣಹತ್ಯೆ ನಡೆಸಿದರೆ ಅಂತಹ ಕುಟುಂಬದವರಿಗೂ ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗಲಿದೆ.ಅನಧಿಕೃತ ಸ್ಕ್ಯಾನಿಂಗ್‌ ಸೆಂಟರ್‌, ಭ್ರೂಣಲಿಂಗ ಪತ್ತೆ ಕಂಡುಬಂದಲ್ಲಿ ಸಾರ್ವಜನಿಕರೂ ಕೂಡ www.pepndtkar.in/index.php/complaint ಈ ವೆಬ್‌ಸೈಟ್‌ ಅಥವಾ ಜಿಲ್ಲಾಸ್ಪತ್ರೆಯ 0820 – 2527499ಕ್ಕೆ ದೂರು ನೀಡಬಹುದು.

ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ಕಣ್ಣು
ಹೆಚ್ಚುತ್ತಿರುವ ಸ್ಕ್ಯಾನಿಂಗ್‌ ಸೆಂಟರ್‌ಗಳಿಂದಾಗಿ ಲಿಂಗಾನುಪಾತ ಕುಸಿಯುತ್ತಿದೆ ಎನ್ನುವ ವರದಿಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್‌ ಸೆಂಟರ್‌ಗಳ ಕಾರ್ಯದ ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತೀವ್ರ ನಿಗಾ ಇರಿಸಿದೆ. ಅದಕ್ಕಾಗಿಯೇ ಪ್ರತ್ಯೇಕ ಸಮಿತಿ ರಚಿಸಿ ಪ್ರತಿ 3 ತಿಂಗಳಿಗೊಮ್ಮೆ ಜಿಲ್ಲೆಯಲ್ಲಿರುವ ಒಟ್ಟು 72 ಸ್ಕ್ಯಾನಿಂಗ್‌ (ಉಡುಪಿ- 40, ಕಾರ್ಕಳ- 11, ಕುಂದಾಪುರ- 21) ಸೆಂಟರ್‌ಗಳಿಗೂ ಆ ತಂಡ ಭೇಟಿ ನೀಡಿ ಭ್ರೂಣಲಿಂಗ ಪತ್ತೆ ನಿಷೇಧ ಫ‌ಲಕ ಅಳವಡಿಸಿರುವುದನ್ನು ಮತ್ತು ಭ್ರೂಣಲಿಂಗ ಪತ್ತೆ ಮಾಡುತ್ತಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳುತ್ತಿದೆ. ಗರ್ಭಪಾತ ಆಗಿದ್ದರೆ ಯಾವ ಕಾರಣಕ್ಕೆ ಎನ್ನುವ ವರದಿಯನ್ನು ಪರಿಶೀಲಿಸಿ ತಪಾಸಣೆ ನಡೆಸುವುದು ಈ ಸಮಿತಿಯ ಜವಾಬ್ದಾರಿಯಾಗಿರುತ್ತದೆ.

ನಿರ್ದಾಕ್ಷಿಣ್ಯ ಕ್ರಮ
ಯಾವುದೇ ಆಸ್ಪತ್ರೆ ಅಥವಾ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಭ್ರೂಣ ಲಿಂಗ ಪತ್ತೆ ಹಚ್ಚುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಅಂತಹ ದೂರುಗಳು ಬಂದಲ್ಲಿ ತನಿಖೆ ನಡೆಸಿ, ಕೃತ್ಯ ನಡೆದಿರುವುದು ಸಾಬೀತಾದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. 
– ಡಾ| ರೋಹಿಣಿ, ಉಡುಪಿ ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.