Udupi; ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ: ಪೇಜಾವರ ಶ್ರೀ
Team Udayavani, Mar 19, 2024, 7:36 PM IST
ಉಡುಪಿ: ರಾಮ ಮಂದಿರ ನಿರ್ಮಾಣವಾಗಿದೆ. ಇನ್ನು ರಾಮರಾಜ್ಯದ ಪರಿಕಲ್ಪನೆಯಡಿ ನಾವು ಸಾಗಬೇಕು. ಈ ನಿಟ್ಟಿನಲ್ಲಿ ಮನೆಯಿಲ್ಲದವರಿಗೆ ಮನೆ ನಿರ್ಮಿಸಿಕೊಡುವುದು ಉತ್ಕೃಷ್ಟ ಸೇವೆಯಾಗಿದೆ. ಬಡವರಿಗೆ ಸೂರು ಕಲ್ಪಿಸುವ ಮೂಲಕ ಅಯೋಧ್ಯೆಯ ಶ್ರೀ ರಾಮ ದೇವರಿಗೆ ಸೇವೆ ಸಲ್ಲಿಸಿದಂತಾಗುತ್ತದೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.
ರಾಮರಾಜ್ಯದ ಕಲ್ಪನೆಯಡಿ ಬಡವರಿಗೆ ಮನೆ ನಿರ್ಮಿಸುವ ಅಭಿಯಾನದಡಿ ಆಸರೆ ಚಾರಿಟೆಬಲ್ ಟ್ರಸ್ಟ್ವತಿಯಿಂದ ಗುಂಡಿಬೈಲು ಪಾಡಿಗಾರಿನಲ್ಲಿ ಮನೆ ನಿರ್ಮಾಣಕ್ಕೆ ಮಂಗಳವಾರ ಶಿಲಾನ್ಯಾಸ ನೆರವೇರಿಸಿ ಶ್ರೀಪಾದರು ಆಶೀರ್ವದಿಸಿದರು.
ಸಮಾಜದಲ್ಲಿ ಸೇವಾ ಪ್ರವೃತ್ತಿ ಹೆಚ್ಚಾಗಬೇಕು. ಮನೆಯಿಲ್ಲದವರನ್ನು ಗುರುತಿಸಿ ಮನೆ ನಿರ್ಮಿಸಿಕೊಡುವ ಮೂಲಕ ರಾಮರಾಜ್ಯದ ಸಂಕಲ್ಪ ಸಾಕಾರ ಮಾಡುವ ನಿಟ್ಟಿನಲ್ಲಿ ಶ್ರಮಿಸಬೇಕು. ರಾಮಮಂದಿರ ನಿರ್ಮಾಣವಾಗಿ ದೇವರ ಪ್ರಾಣಪ್ರತಿಷ್ಠೆಯೂ ನಡೆದಿದೆ. ರಾಮ ರಾಜ್ಯವೂ ಆಗಬೇಕು. ಬಡವರ ಸೇವೆಯೇ ಶ್ರೀ ರಾಮ ದೇವರ ಸೇವೆ ಎಂದರು.
ಆಸರೆ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ವಂಸತ ಭಟ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಲಕ್ಷ್ಮೀ ಎಲೆಕ್ಟ್ರಿಕಲ್ ಮಾಲಕ ರಾಜ್ಗೋಪಾಲ್ ಭಟ್ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಕಲಶ ಪೂಜೆಯ ಸಂದರ್ಭದಲ್ಲಿ ಮಾಡಿದ ಸಂಕಲ್ಪದಂತೆ ಆಸರೆ ಚಾರಿಟೆಬಲ್ ಟ್ರಸ್ಟ್ ಮೂಲಕ ಮನೆ ಕಟ್ಟಿಕೊಡಲು ನಿರ್ಧರಿಸಿದ್ದರು. ರಾಜ್ಗೋಪಾಲ್ ದಂಪತಿಯನ್ನು ಶ್ರೀಪಾದರು ಸಮ್ಮಾನಿಸಿದರು.
ಮಾಜಿ ಶಾಸಕ ಕೆ. ರಘುಪತಿ ಭಟ್, ಟ್ರಸ್ಟ್ನ ಕೋಶಾಧಿಕಾರಿ ಸತೀಶ್ ಕುಲಾಲ್, ನಗರಸಭೆ ಸದಸ್ಯೆ ಗೀತಾ ಶೇಟ್, ಪ್ರಮುಖರಾದ ಮಂಜುನಾಥ್ ಹೆಬ್ಬಾರ್, ಸಂದೀಪ್ ಸನಿಲ್, ಸಂಧ್ಯಾ ರಮೇಶ್, ಸಂಧ್ಯಾ ಪ್ರಭು, ಸಂತೋಷ ಕಿಣಿ, ಮುರಳೀಧರ್ ರಾವ್ ಗುಂಡಿಬೈಲು ಹಾಗೂ ಫಲಾನುಭವಿ ಮಾಲಾಶ್ರೀ ಭಟ್ ಪಾಡಿಗಾರು ಉಪಸ್ಥಿತರಿದ್ದರು. ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್