ಕಂದಾಯ ಇಲಾಖೆಯ ಸೇವೆಯಲ್ಲಿ ಉಡುಪಿಗೆ ಅಗ್ರಸ್ಥಾನ


Team Udayavani, Feb 13, 2020, 5:44 AM IST

Revenu

ಉಡುಪಿ: ಕಂದಾಯ ಇಲಾಖೆಯಲ್ಲಿ ಬರುವ ಸೇವೆಯನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಉತ್ತಮ ಸಾಧನೆ ಮಾಡಿರುವ ಉಡುಪಿ ಜಿಲ್ಲಾಡಳಿತ ರಾಜ್ಯಕ್ಕೆ ಆಗ್ರ ಸ್ಥಾನ ಪಡೆದಿದೆ.

ಜನವರಿಯಲ್ಲಿ ರಾಜ್ಯ ಸರಕಾರ ಬಿಡುಗಡೆಗೊಳಿಸಿದ ಕಂದಾಯ ಇಲಾಖೆ ಸೇವೆಗಳ ಅನುಷ್ಠಾನದ ಜಿಲ್ಲೆಗಳ ಸಾಧನೆ ಪಟ್ಟಿಯಲ್ಲಿ ಉಡುಪಿ 100ಕ್ಕೆ 69 ಅಂಕ ಪಡೆದು ಪ್ರಥಮ ಸ್ಥಾನದಲ್ಲಿದೆ. 56.5 ಅಂಕ ಪಡೆದಿರುವ ಚಿತ್ರದುರ್ಗ ದ್ವಿತೀಯ 50.9 ಅಂಕ ಪಡೆದಿರುವ ಉತ್ತರ ಕನ್ನಡ ತೃತೀಯ ಸ್ಥಾನದಲ್ಲಿದೆ. ಬಳ್ಳಾರಿ ಕೊನೆಯ ಸ್ಥಾನದಲ್ಲಿದೆ.

ರೈತರಿಗೆ ಭೂಮಿ ಮ್ಯುಟೇಷನ್‌, 30 ದಿನದೊಳಗೆ ಭೂಮಿ ಮ್ಯುಟೇಷನ್‌, ವಸತಿ – ವಾಣಿಜ್ಯ ಉದ್ದೇಶಗಳಿಗಾಗಿ ಭೂ ಪರಿವರ್ತನೆ, ಎಸಿ ಕೋರ್ಟ್‌ನಲ್ಲಿರುವ ಪ್ರಕರಣ ವಿಲೇವಾರಿ, ಪೈಕಿ ಆರ್‌ಟಿಸಿ, ಸರ್ವೇ, ಪೋಡಿ ಸೇವೆಗಳಲ್ಲಿ ನೂರು ಅಂಕ ಗಳಿಸಿದೆ. ಉಳಿದಂತೆ ವ್ಯಾಜ್ಯಗಳನ್ನು ಪರಿಹರಿಸಿ ಭೂಮಿ ಮ್ಯುಟೇಷನ್‌ 89 ಅಂಕ, ಡಿಸಿ ಕೋರ್ಟ್‌ನಲ್ಲಿರುವ ಪ್ರಕರಣಗಳ ವಿಲೇವಾರಿ 30 ಅಂಕ., 79 ಎ ಬಿ ಪ್ರಕರಣಗಳ ವಿಲೇವಾರಿ 4 ಅಂಕ ಪಡೆದುಕೊಂಡಿದೆ.

ತಾಲೂಕುವಾರು ಟಾಪ್‌
15ರಲ್ಲಿ ಜಿಲ್ಲೆಯ 7 ತಾಲೂಕು 238 ತಾಲೂಕುಗಳ ಪೈಕಿ ಟಾಪ್‌ 15ರ ಪಟ್ಟಿಯಲ್ಲಿ ಜಿಲ್ಲೆಯ 7 ತಾಲೂಕುಗಳು, ಟಾಪ್‌ 10ರಲ್ಲಿ 5 ತಾಲೂಕುಗಳು ಕಂದಾಯ ಸೇವೆಯಲ್ಲಿ ಉತ್ತಮ ನಿರ್ವಹಣೆ ತೊರಿವೆ. ಮೊದಲ ಸ್ಥಾನ ಉಡುಪಿ, ಎರಡನೇ ಸ್ಥಾನ ಕಾಪು ಮತ್ತು ಮೂರನೇ ಸ್ಥಾನ ಬ್ರಹ್ಮಾವರ ಪಡೆದುಕೊಂಡಿದೆ.

ಮಾನದಂಡ
ರೈತರಿಗೆ ಭೂಮಿ ಮ್ಯುಟೇಷನ್‌, 30 ದಿನದೊಳಗೆ ಭೂಮಿ ಮ್ಯುಟೇಷನ್‌, ವಸತಿ ವಾಣಿಜ್ಯ ಉದ್ದೇಶಗಳಿಗಾಗಿ ಭೂ ಪರಿವರ್ತನೆ, ಎಸಿ ಕೋರ್ಟ್‌ನಲ್ಲಿರುವ ಪ್ರಕರಣ ವಿಲೇವಾರಿ, ಪೈಕಿ ಆರ್‌ಟಿಸಿ, ಸರ್ವೆ, ಪೋಡಿ ಸೇವೆ ಸೇರಿದಂತೆ 10 ವಿವಿಧ ಸೇವೆಗಳನ್ನು ನಿಗದಿತ ಕಾಲಮಿತಿಯೊಳಗೆ ಜನರಿಗೆ ತಲುಪಿಸಿದರೆ ರ್‍ಯಾಂಕ್‌ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆಯಬಹುದು. ಜಿಲ್ಲೆಯ ಇಲಾಖೆಯ ಈ ಸಾಧನೆಯಿಂದ ಸದ್ಯ ರಾಜ್ಯದ ಗಮನ ಸೆಳೆದಿದೆ. ಮನೆಬಾಗಿಲಿಗೆ ಪಿಂಚಣಿಯನ್ನು ತಲುಪಿಸುವ ನಿಟ್ಟಿನಲ್ಲಿ ರಾಜ್ಯದಲ್ಲೇ ಮೊದಲ ಪ್ರಯತ್ನ ಕೈಗೊಂಡ ಹಿರಿಮೆಯನ್ನು ಜಿಲ್ಲಾಡಳಿತ ಪಡೆದುಕೊಂಡಿದ್ದು ಬಡವರಿಗೆ ಕಂದಾಯ ಸೇವೆಯನ್ನು ಪ್ರಾಮಾಣಿಕವಾಗಿ ಮುಟ್ಟಿಸುವ ಕೆಲಸದ ಕಡೆಗೂ ಕೂಡ ಜಿಲ್ಲಾಡಳಿತ ಶ್ರಮಿಸುತ್ತಿದೆ.

ಸ್ಥಾನ ಉಳಿಸಿಕೊಂಡು ಉತ್ತಮ ಸೇವೆ ನೀಡುವತ್ತ ಗಮನ
ಜಿಲ್ಲಾಡಳಿತದ ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ ಹೆಚ್ಚು ಗಮನ ಕೊಡವಲ್ಲಿ ಮುತುವರ್ಜಿ ವಹಿಸಲಾಗಿದೆ. ಆರಂಭದಿಂದಲೂ ಕಂದಾಯ ಇಲಾಖೆಯ ಲೋಪಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳಿದ್ದವು. ಆರ್‌ಟಿಸಿ ಸಹಿತ ಹೀಗೆ ಯಾವುದೇ ಕೆಲಸಕ್ಕೆ ಅಲೆಯಬೇಕಾದ ಪರಿಸ್ಥಿತಿ. ಇದನ್ನು ಅರಿತು ದೃಢ ನಿರ್ಧಾರ ಹಾಗೂ ಸ್ವಂತ ಆಸಕ್ತಿಯಿಂದ ಕೆಲಸ ಕೈಗೊಳ್ಳಲಾಯಿತು. ಪ್ರತಿದಿನ ಜಿಲ್ಲಾಡಳಿತದಲ್ಲಿ ಆಗುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಖುದ್ದಾಗಿ ಪ್ರಗತಿ ಪರಿಶೀಲಿಸಿ ಹಿಂದೆ ಬಿದ್ದಿರುವ ಕೆಲಸಗಳನ್ನು ಸಂಬಂಧ ಪಟ್ಟವರಿಗೆ ಕರೆ ಮಾಡಿ ಕೆಲಸದ ವೇಗ ಹೆಚ್ಚಿಸುವ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ತಿಂಗಳಲ್ಲಿ ಪ್ರತಿ 15 ದಿನಕ್ಕೆ ತಹಶೀಲ್ದಾರ್‌ ಪ್ರಗತಿ ಪರಿಶಿಲನ ಸಭೆ ಮಾಡಲಾಗುವುದು, ಪ್ರತಿ ತಿಂಗಳು ಕಂದಾಯ ಇಲಾಖೆಯ ಸಭೆ ಸೇರಿಸಿ ಚರ್ಚಿ ಕೈಗೊಳ್ಳಾಗುತ್ತದೆ. ಮುಂದಿನ ದಿನಗಳಲ್ಲೂ ನಂಬರ್‌ ವನ್‌ ಸ್ಥಾನವನ್ನು ಕಾಯ್ದುಕೊಳ್ಳುವ ಗುರಿ ಹೊಂದಿದ್ದೇವೆ. ಎಡಿಸಿ, ಎಸಿ, ತಹಶೀಲ್ದಾರ್‌, ಪಿಡಿಒ ಎಲ್ಲರ ಸಹಕಾರ ಉತ್ತಮವಾಗಿದೆ.
ಜಿ. ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.