Udupi; ಬೈಕಿನಲ್ಲಿ ನಾಲ್ವರ ಸಂಚಾರ! ಡಿವೈಡರ್ಗೆ ಢಿಕ್ಕಿ: ಓರ್ವ ಸಾವು
Team Udayavani, Mar 25, 2024, 12:23 AM IST
ಉಡುಪಿ: ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉಡುಪಿಯಲ್ಲಿ ರವಿವಾರ ಮುಂಜಾನೆ ಸಂಭವಿಸಿದೆ.
ಕರಾವಳಿ ಬೈಪಾಸ್ ಕಡೆಯಿಂದ ಶಿರಿಬೀಡು ಕಡೆಗೆ ಬೈಕ್ ಸವಾರ ರಾಯಚೂರಿನ ಸಿಂಧನೂರು ಮೂಲದ ಶರಣಬಸವ ಎಂಬಾತ ತನ್ನ ಬೈಕ್ನಲ್ಲಿ ಸಹಸವಾರರಾದ ಮಂಜುನಾಥ್, ರಮೇಶ್ ಮತ್ತು ಯಮನೂರು ಅವರನ್ನು ಕುಳ್ಳಿರಿಸಿಕೊಂಡು ಅತೀ ವೇಗದಲ್ಲಿ ಚಲಾಯಿಸಿಕೊಂಡು ಬಂದು ಡಿವೈಡರ್ಗೆ ಢಿಕ್ಕಿ ಹೊಡೆದಿದ್ದಾನೆ.
ಪರಿಣಾಮವಾಗಿ ಬೈಕ್ನಲ್ಲಿದ್ದ ನಾಲ್ವರೂ ರಸ್ತೆಗೆ ಬಿದ್ದಿದ್ದಾರೆ. ಬೈಕ್ ಸವಾರ ಶರಣಬಸವ ಡಿವೈಡರ್ ಮಧ್ಯೆ ಇರುವ ಕಬ್ಬಿಣದ ರಾಡ್ ಮೇಲೆ ಬಿದ್ದು, ಎಡ ಕಂಕುಳದ ಬಳಿ ಗಂಭೀರ ಸ್ವರೂಪದ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಇನ್ನುಳಿದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು