Udupi; ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವ ಸಂಪನ್ನ

ಉಡುಪಿ ಕಿದಿಯೂರ್‌ ಹೊಟೇಲ್ಸ್‌ನ ಶ್ರೀ ನಾಗ ಸಾನ್ನಿಧ್ಯ

Team Udayavani, Feb 1, 2024, 12:47 AM IST

udUdupi; ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವ ಸಂಪನ್ನ

ಉಡುಪಿ: ಕಿದಿಯೂರು ಹೊಟೇಲ್ಸ್‌ನ ಕಾರಣಿಕ ಶ್ರೀ ನಾಗ ಸಾನ್ನಿಧ್ಯದಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವು ಧಾರ್ಮಿಕ ವಿಧಿ ವಿಧಾನ, ನಾಗದೇವರ ದರ್ಶನ ಸೇವೆಯ ಮೂಲಕ ಬುಧವಾರ ಸಂಪನ್ನಗೊಂಡಿತು.

ಜ. 26ರ ಬೆಳಗ್ಗೆ ಶ್ರೀ ನಾಗ ಸಾನ್ನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ವಿವಿಧ ಹೋಮ ಹವನಾದಿಗಳು ನಡೆದು ಜ. 31ರಂದು ಅಷ್ಟೋತ್ತರ ಶತಕಲಶಾಭಿಷೇಕ ಸಹಿತ ಬ್ರಹ್ಮಕುಂಭಾಭಿಷೇಕ, ಮಹಾಪೂಜೆ, ಹಾಲಿಟ್ಟು ಸೇವೆ, ಗಂಗಾರತಿ ಯ ಅನಂತರ ಅಷ್ಟಪವಿತ್ರ ನಾಗಮಂಡ ಲೋತ್ಸವ ನೆರವೇರಿತು.

ಕಿದಿಯೂರು ಹೊಟೇಲ್ಸ್‌ನ ಎಂಡಿ ಭುವನೇಂದ್ರ ಕಿದಿಯೂರು ಅವರ ಸೇವಾರ್ಥ ನಾಗಮಂಡಲೋತ್ಸವ ಆಯೋಜನ ಸಮಿತಿ ಗೌರವಾಧ್ಯಕ್ಷ ಡಾ| ಜಿ. ಶಂಕರ್‌ ನೇತೃತ್ವದಲ್ಲಿ ಜೋತಿಷ ವಿದ್ವಾನ್‌ ವೇ|ಮೂ| ಕಬಿಯಾಡಿ ಜಯರಾಮ ಆಚಾರ್ಯ ಅವರ ಮಾರ್ಗದರ್ಶನದಲ್ಲಿ ಶ್ರೀ ನಾಗದೇವರಿಗೆ ನೂತನವಾಗಿ ನಿರ್ಮಿಸಲಾದ ಭವ್ಯ ರಜತ ಮಂಟಪ, ರಜತ ಕವಚಗಳ ಮತ್ತು ಸ್ವರ್ಣಲೇಪಿತ ರಜತ ಪ್ರಭಾವಳಿಯಲ್ಲಿ ರಜತ ಬಲಿಮೂರ್ತಿಯ ಸಮರ್ಪಣೆ ನಡೆಯಿತು.

ವೇ|ಮೂ| ರಮಾನಂದ ಭಟ್‌ ಬೆಳ್ಳರ್ಪಾಡಿ, ವೇ|ಮೂ| ಮುರಳೀಧರ ಭಟ್‌ ಅಲೆವೂರು ಅವರ ನಾಗ ದರ್ಶನದೊಂದಿಗೆ ಮುದ್ದೂರು ವೈದ್ಯನಾಥೇಶ್ವರ ಡಮರುಗ ಬಳಗದ ಕೃಷ್ಣಪ್ರಸಾದ್‌ ವೈದ್ಯರ ನೇತೃತ್ವದ ಬಾಲಕೃಷ್ಣ ವೈದ್ಯ, ನಟರಾಜ ವೈದ್ಯರ ನಾಗಕನ್ನಿಕಾ ನರ್ತನದೊಂದಿಗೆ ನೆರವೇರಿತು.

ಶ್ರೀ ನಾಗ ಸಾನ್ನಿಧ್ಯದಲ್ಲಿ ಬ್ರಹ್ಮಕಲಶ ಪೂಜೆ, ಅದಿವಾಸ ಸಹಿತ ಪ್ರಧಾನ ಹೋಮ, ಮೆರವಣಿಗೆ ನಾಗದರ್ಶನ, ಸಾನ್ನಿಧ್ಯದಲ್ಲಿ ದರ್ಶನ ಸೇವೆಡೆಯಿತು. ಮಧ್ಯಾಹ್ನ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಪಲ್ಲಪೂಜೆ ಮಾಡಿದರು. 50 ಸಾವಿರಕ್ಕೂ ಮಿಕ್ಕಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

ಗಂಗಾಜಲ ಸಂಪ್ರೋಕ್ಷಣೆ
ಕಾಶೀ ವಾರಾಣಸಿಯಿಂದ ತರಿಸ ಲಾದ ಪವಿತ್ರ ಗಂಗಾಜಲವನ್ನು ಭಕ್ತರಿಗೆ ಸಂಪ್ರೋಕ್ಷಣೆ ನಡೆಸಿ, (ನಾಗರಕ್ಷೆ) ದಾರ ವಿತರಿಸಲಾಯಿತು. ಸಂಜೆ ಹಾಲಿಟ್ಟು ಸೇವೆ, ಬಲಿ ಉತ್ಸವ, ಸೇವಾಕರ್ತರ ಪರಿವಾರದವರು ನಾಗಮಂಡಲದ ಸುತ್ತಲೂ ದೀಪ ಪ್ರಜ್ವಲಿಸಿ ಸಂಕಲ್ಪ ದೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ನಾಗಮಂಡಲದ ಮಂಟಪದಲ್ಲಿ ವಾರಾಣಸಿಯ ಅರ್ಚಕ ವೃಂದದವ ರಿಂದ ಅಕರ್ಷಕ ಗಂಗಾರತಿ ನಡೆಯಿತು.

ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.

ಹೀರಾ ಬಿ. ಕಿದಿಯೂರು, ಪುತ್ರ ಡಾ| ಬೃಜೇಶ್‌ ಕಿದಿಯೂರು ಮತ್ತು ಡಾ| ಶ್ವೇತಾ ಬ್ರಿಜೇಶ್‌ ದಂಪತಿ, ಪುತ್ರ ಡಾ| ಯಜ್ಞೇಶ್ ಬಿ. ಕಿದಿಯೂರು ಮತ್ತು ಶಿಲ್ಪಾ ಯಜ್ಞೆàಶ್‌ ದಂಪತಿ, ಪುತ್ರ ಜಿತೇಶ್‌ ಬಿ. ಕಿದಿಯೂರು ಮತ್ತು ಪ್ರಿಯಾಂಕಾ ಜಿತೇಶ್‌ ದಂಪತಿ, ಪುತ್ರಿ ಡಾ| ಭವ್ಯಶ್ರೀ ಅಭಿನ್‌ ಕಿದಿಯೂರು ಮತ್ತು ಡಾ| ಅಭಿನ್‌ ದೇವದಾಸ್‌ ಶ್ರೀಯಾನ್‌, ಸಮಿತಿ ಪ್ರಧಾನ ಕಾರ್ಯದರ್ಶಿ ಯುವರಾಜ್‌ ಸಾಲ್ಯಾನ್‌ ಮಸ್ಕತ್‌ ಹಾಗೂ ಕುಟುಂಬ ಸದಸ್ಯರು, ಆಯೋಜನ ಸಮಿತಿ ಪದಾಧಿಕಾರಿಗಳು, ಗಣ್ಯರು, ಹೊಟೇಲ್ಸ್‌ನ ಅಧಿಕಾರಿಗಳು, ಸಿಬಂದಿ, ಕಾರ್ಯಕರ್ತರು, ಸ್ವಯಂಸೇವಕರು, ಭಕ್ತರು ಭಾಗವಹಿಸಿದ್ದರು.

ಅಚ್ಚುಕಟ್ಟಿನ ವ್ಯವಸ್ಥೆ
ಕಿದಿಯೂರು ಹೊಟೇಲ್ಸ್‌ ಸಂಕೀರ್ಣ ಸೇರಿ ಕೇವಲ 50 ಸೆಂಟ್ಸ್‌ ಜಾಗದಲ್ಲಿ ನಗರದ ಹೃದಯ ಭಾಗದಲ್ಲಿ ವಾಹನ ಮತ್ತು ಜನಜಂಗುಳಿಯ ನಡುವೆ ಅತ್ಯಂತ ವ್ಯವಸ್ಥಿತವಾಗಿ ಅಚ್ಚುಕಟ್ಟಿನಿಂದ ಅದ್ದೂರಿಯಾದ ನಾಗಮಂಡಲೋತ್ಸವ ನೆರವೇರಿರುವುದು ವಿಶೇಷ. ನಾಗಮಂಡ ಲೋತ್ಸವದ ಯಶಸ್ಸಿನಲ್ಲಿ ಭುವನೇಂದ್ರ ಕಿದಿಯೂರು ಅವರ ಅಭಿಮಾನಿ ಸ್ವಯಂಸೇವಕರ ಶ್ರಮ ಬಹಳಷ್ಟಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.