ಅವ್ಯವಸ್ಥೆಯ ಆಗರ ಉಡುಪಿಯ ತರಕಾರಿ ಮಾರುಕಟ್ಟೆ


Team Udayavani, Jun 15, 2018, 6:00 AM IST

1406udsg2a.jpg

ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣ ಬಳಿಯ ಸುಮಾರು 40 ವರ್ಷ ಹಳೆಯ ವಿಶ್ವೇಶ್ವರಯ್ಯ ತರಕಾರಿ/ಹಣ್ಣುಹಂಪಲು ಮಾರುಕಟ್ಟೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ವ್ಯಾಪಾರ, ಖರೀದಿ ನಡೆಸುವುದೇ ಕಷ್ಟವಾಗಿದೆ.  

ಮೂಲ ಸೌಕರ್ಯ ಕೊರತೆ
ಪ್ರತಿನಿತ್ಯ ನೂರಾರು ಮಂದಿ ತರಕಾರಿ/ಹಣ್ಣುಹಂಪಲುಗಳ ಖರೀದಿಗೆ ಬರುವ ಈ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಶೌಚಾಲಯ ವ್ಯವಸ್ಥೆ, ವಿದ್ಯುತ್‌ ಸಂಪರ್ಕ ಇಲ್ಲ. ಮಳೆಗಾಲದಲ್ಲಿ ಮಾರುಕಟ್ಟೆ ಒಳಗಡೆ ನಿಲ್ಲಲು ಮಾಡಿನ ವ್ಯವಸ್ಥೆಯಿಲ್ಲ. ಇಲ್ಲಿನ ಪಾರ್ಕಿಂಗ್‌ ಸ್ಥಳ ಕಲ್ಲು ಹಾಕಿದ್ದರಿಂದ ಏರುಪೇರಾಗಿದ್ದು, ನಾಗರಿಕರಿಗೆ ನಡೆದಾಡಲೂ ಕಷ್ಟಕರವಾಗಿದೆ. ಖರೀದಿಗೆ ಬಂದ ಅದೆಷ್ಟೋ ಹಿರಿಯ ನಾಗರಿಕರು ಬಿದ್ದು ಪೆಟ್ಟು ಮಾಡಿಕೊಂಡ ಘಟನೆಗಳೂ ನಡೆದಿವೆ. 

ಮಾರುಕಟ್ಟೆಯಲ್ಲಿ ಬೇಸಗೆಯಲ್ಲಿ ಧೂಳೆ ದ್ದರೆ, ಮಳೆಗಾಲದಲ್ಲಿ ಕೆಸರುಮಯವಾಗು ತ್ತದೆ. ಹೊಂಡಗಳಲ್ಲಿ ನೀರು ನಿಂತು ಸಮಸ್ಯೆ ಬಿಗಡಾಯಿಸುತ್ತದೆ. ಮಾರುಕಟ್ಟೆ ಬಳಿ ಕೆಎಸ್‌ಆರ್‌ಟಿಸಿ ನಿಲ್ದಾಣ ಇರುವುದರಿಂದ ಇದು ಜನನಿಬಿಡ ಪ್ರದೇಶವಾಗಿದೆ. ಇಲ್ಲಿ ವಾಹನಗಳು ಕೆಲವೊಮ್ಮೆ ಅಡ್ಡಾದಿಡ್ಡಿ ಯಾಗಿ ಸಂಚರಿಸುವುದರಿಂದ ಮಾರುಕಟ್ಟೆ ಪ್ರವೇಶಿ ಸಲೇ ಜನ ಹರಸಾಹಸ ಪಡಬೇಕಾಗಿದೆ. 
  
ವ್ಯಾಪಾರಸ್ಥರ ಗೋಳು 
ಇಲ್ಲಿ 30 ವ್ಯಾಪಾರಸ್ಥರು 27 ವರ್ಷ ಗಳಿಂದ ಅಧಿಕೃತವಾಗಿ ವ್ಯಾಪಾರ ನಡೆಸಿಕೊಂಡು ಬರುತ್ತಿದ್ದಾರೆ. ಇತ್ತೀಚೆಗೆ ವಿವಿಧೆಡೆ ಸಂತೆ ವ್ಯಾಪಾರ ನಡೆಸುವವರೂ ಗ್ರಾಹಕರಿಗೆ ಮೀಸಲಿಟ್ಟ ಜಾಗದಲ್ಲಿ ಬೆಳಗ್ಗೆ ಸುಮಾರು 5ರಿಂದ 11ರ ವರೆಗೆ ಹೋಲ್‌ಸೇಲ್‌, ಚಿಲ್ಲರೆ ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದ ಖಾಯಂ ವ್ಯಾಪಾರಸ್ಥರಿಗೆ ರವಿವಾರ, ಬುಧವಾರ ಹೊರತುಪಡಿಸಿ ವಾರದ ಉಳಿದ ದಿನಗಳಲ್ಲಿ ವ್ಯಾಪಾರವಿಲ್ಲದೇ ನಷ್ಟವಾಗುತ್ತಿದೆ ಎಂದು ಇಲ್ಲಿನ ವ್ಯಾಪಾರಸ್ಥರು ದೂರುತ್ತಿದ್ದಾರೆ.

ನಗರಸಭೆ ಉಪಕ್ರಮ 
ಬಿಪಿಪಿ ಮಾದರಿಯಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ನಗರಸಭೆ ಟೆಂಡರ್‌ ಕರೆದಿತ್ತು. ಆದರೆ ಸಿಂಗಲ್‌ ಟೆಂಡರ್‌ ಎನ್ನುವ ಕಾರಣಕ್ಕೆ ಸರಕಾರದ ಮಟ್ಟದಲ್ಲಿ ತಿರಸ್ಕೃತ ಗೊಂಡಿದೆ. ಪುನಃ ಟೆಂಡರ್‌ ಪ್ರಸ್ತಾವನೆ ಮಾಡುವಾಗ ಮಾರುಕಟ್ಟೆ ವ್ಯಾಪ್ತಿಯಲ್ಲಿರುವ ದೇವಸ್ಥಾನದವರು ದೇಗುಲಕ್ಕೆ ಸಂಬಂಧಪಟ್ಟ ಸ್ಥಳದ ಗಡಿ ಗುರುತು ಮಾಡುವಂತೆ ಸೂಚಿಸಿದ್ದರು. ಅದರಂತೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಏಕ ನಿವೇಶನ ಮಂಜೂ ರಾತಿ ಪಡೆದು ಬೆಂಗಳೂರಿನ ಐಡೆಕ್‌ ಸಂಸ್ಥೆಗೆ ವಿನ್ಯಾಸಕ್ಕೆ ಕಳುಹಿಸಿಕೊಟ್ಟಿದೆ. ಐಡೆಕ್‌ ಸಂಸ್ಥೆ ಯಿಂದ ಸಾಧ್ಯತಾ ವರದಿ (ಫಿಸಿಬಿಲಿಟಿ ರಿಪೋರ್ಟ್‌) ಇನ್ನಷ್ಟೇ ಬರಬೇಕಿದೆ. 

ರಸ್ತೆ ದಾಟುವುದೂ ಕಷ್ಟ  
ಮಾರುಕಟ್ಟೆ- ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಮುಖ್ಯರಸ್ತೆಯಲ್ಲಿ ವಾಹನ ದಟ್ಟಣೆಯಿಂದಾಗಿ ರಸ್ತೆ ದಾಟುವುದೇ ಹರಸಾಹಸದ ಕೆಲಸ. ಇಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲ. ಮುಖ್ಯರಸ್ತೆಯ ಸಮೀಪದಲ್ಲಿಯೇ ಟ್ಯಾಕ್ಸಿ ನಿಲ್ದಾಣ, ರಿಕ್ಷಾ ನಿಲ್ದಾಣ, ಬಸ್‌ನಿಲ್ದಾಣವಿದ್ದು ಯಾವ ಭಾಗದಿಂದ ವಾಹನಗಳು ಮುನ್ನುಗ್ಗುತ್ತವೆ ಎಂದು ತಿಳಿಯುವುದೇ ಇಲ್ಲ. ಇದರಿಂದ ಹಿರಿಯ ನಾಗರಿಕರು, ಮಹಿಳೆಯರು ಶಾಲಾ ಮಕ್ಕಳು ಆತಂಕದಿಂದಲೇ ಓಡಾಡಬೇಕಾಗಿದೆ.  

ನಮಗೊಂದು,ಅವರಿಗೊಂದು ನ್ಯಾಯ! 
ಸಂತೆ ವ್ಯಾಪಾರಿಗಳು ವ್ಯಾಪಾರ ನಡೆಸಿದ ಅನಂತರ ಉತ್ಪತ್ತಿಯಾದ ತ್ಯಾಜ್ಯವನ್ನು ಅಲ್ಲಿಯೇ ಬಿಟ್ಟು ಹೋಗುತ್ತಾರೆ. ಇದನ್ನು ನಗರಸಭೆಯ ಪೌರಕಾರ್ಮಿಕರು 11 ಗಂಟೆಯ ಬಳಿಕ ಬಂದು ಉಚಿತವಾಗಿ ವಿಲೇವಾರಿ ಮಾಡುತ್ತಾರೆ. ಆದರೆ ಮಾರುಕಟ್ಟೆ ವ್ಯಾಪಾರಿಗಳಿಂದ ಉತ್ಪತ್ತಿಯಾದ ತಾಜ್ಯ ವಿಲೇವಾರಿಗೆ ನಗರಸಭೆಯ ಸ್ವಸಹಾಯ ಸಂಘಗಳಿಗೆ ಮಾರುಕಟ್ಟೆ ವ್ಯಾಪಾರಸ್ಥರು ಹಣ ಪಾವತಿಸಿ ವಿಲೇವಾರಿಗೊಳಿಸಬೇಕಾಗಿದೆ. ಈ ಬಗ್ಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ.  
– ಅಬ್ದುಲ್‌ ರಹೀಂ,ಅಧ್ಯಕ್ಷರು, ಉಡುಪಿ 
ವಿಶ್ವೇಶ್ವರಯ್ಯ ಮಾರುಕಟ್ಟೆ ವ್ಯಾಪಾರಸ್ಥರ ಸಂಘ 

ಮಳೆಗಾಲದ ಬಳಿಕ ರಿಪೇರಿ
ಮಾರುಕಟ್ಟೆಯೊಳಗಿದ್ದ ಪಾರ್ಕಿಂಗ್‌ ಸ್ಥಳವು ಹೊಂಡಗಳಿಂದ ಕೂಡಿದ್ದರಿಂದ ತಕ್ಕಮಟ್ಟಿಗೆ ರಿಪೇರಿಗೆ ಮಾರ್ಚ್‌ನಲ್ಲಿ ನಿರ್ಧರಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆ ಎದುರಾದ ನೆಲೆಯಲ್ಲಿ ಬಾಕಿ ಉಳಿದುಕೊಂಡಿದೆ. ಮಳೆಗಾಲ ಕಳೆದ ಮೇಲೆ ಅದನ್ನು ರಿಪೇರಿ ಮಾಡಿ ಅನುಕೂಲ ಕಲ್ಪಿಸಲಾಗುವುದು. 
– ಜಿ.ಸಿ. ಜನಾರ್ದನ್‌,
ಪೌರಾಯುಕ್ತರು,  ಉಡುಪಿ ನಗರಸಭೆ

– ಎಸ್‌.ಜಿ .ನಾಯ್ಕ

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.