ವಾರದೊಳಗೆ  ಉಡುಪಿ- ಕಲ್ಸಂಕ- ಅಂಬಾಗಿಲಿಗೆ ನರ್ಮ್ ಬಸ್‌


Team Udayavani, Apr 14, 2017, 2:55 PM IST

130417ppe1.jpg

ಉಡುಪಿ: ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಡುಪಿ- ಕಲ್ಸಂಕ- ಅಂಬಾಗಿಲು ಮಾರ್ಗವಾಗಿ ಬಸ್‌ ಓಡಿಸಲು ಪರವಾನಗಿ ಸಿಕ್ಕಿದ್ದು, ಸಮಯ, ಹಂತಗಳನ್ನು ಶೀಘ್ರ ಅಂತಿಮಗೊಳಿಸಿ ವಾರದೊಳಗೆ ನರ್ಮ್ ಬಸ್‌ ಸಂಚಾರಕ್ಕೆ ಚಾಲನೆ ನೀಡಲಾಗುವುದು ಎಂದು ಮಂಗಳೂರು ವಿಭಾಗೀಯ ಸಂಚಾರ ಅಧಿಕಾರಿ ಜೈಶಾಂತ್‌ ಕುಮಾರ್‌ ಭರವಸೆ ನೀಡಿದರು.

ಅವರು ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು  ವಿಭಾಗದ ಉಡುಪಿ ನಿಟ್ಟೂರಿನ ಘಟಕದಲ್ಲಿ ವತಿಯಿಂದ  ಬಸ್‌ಗಳ ಕಾರ್ಯಾಚರಣೆಯ ಬಗ್ಗೆ ಗುರುವಾರ ನಡೆದ  ಸಾರ್ವಜನಿಕ ಸಂಪರ್ಕ ಸಭೆಯಲ್ಲಿ  ಮಾತನಾಡಿದರು. 

ಶೀಘ್ರ 18 ಹೊಸ ನರ್ಮ್ ಬಸ್‌ : ಜಿಲ್ಲೆಯ ಆರ್‌ಟಿಎ ವ್ಯಾಪ್ತಿಯಲ್ಲಿ ಒಟ್ಟು 55 ಸರಕಾರಿ ಬಸ್‌ಗಳ ಸೇವೆ ಕಲ್ಪಿಸಲಾಗಿದೆ. ಇನ್ನೂ 30 ಬಸ್‌ ಓಡಿಸಲು ಪರವಾನಗಿ ಸಿಕ್ಕಿದೆ. ಇದುವರೆಗೆ 77 ಬಸ್‌ಗಳ ಪರವಾನಗಿ ಸಿಕ್ಕಿದರೂ, ವೇಳಾಪಟ್ಟಿ ನಿಗದಿಯಾಗದ್ದರಿಂದ ಬಾಕಿ ಇವೆ. ಅದಲ್ಲದೆ ಉಡುಪಿ ಜಿಲ್ಲೆಯಾದ್ಯಂತ ಬೇಡಿಕೆ ಇರುವ ಕಡೆ ಶೀಘ್ರ 18 ಹೊಸ ನರ್ಮ್ ಬಸ್‌ಗಳ ಸಂಚಾರ ಆರಂಭಿಸಲಾಗುವುದು ಎಂದರು.
 
ನರ್ಮ್ ಬಸ್‌ ವಿರುದ್ಧ ಕೋರ್ಟಿಗೆ: ಹೆಚ್ಚಿನ ಕಡೆ ಜನರಿಂದ ಬೇಡಿಕೆಗಳು ಬಂದ ತತ್‌ಕ್ಷಣ ಅಲ್ಲಿಗೆ ಬಸ್‌ ಸೇವೆ ಒದಗಿಸಲು ಇದು ರಾಷ್ಟ್ರೀಕೃತವಲ್ಲದ ರಸ್ತೆಯಾಗಿರುವುದರಿಂದ ಕೆಎಸ್‌ಆರ್‌ಟಿಸಿಗೆ ಅಧಿಕಾರವಿಲ್ಲ. ಕೆಲವೊಂದು ಯೋಜನೆಗಳು ಖಾಸಗಿಯವರ ಲಾಬಿಯಿಂದಾಗಿ ಈ ಪ್ರಕ್ರಿಯೆ ವಿಳಂಬವಾಗುತ್ತಿವೆ. ಉಡುಪಿಯಲ್ಲಿ ನರ್ಮ್ ಬಸ್‌ ಸಂಚಾರ ಆರಂಭಿಸಿರುವುದು ಸರಿಯಿಲ್ಲ  ಎಂದು ಖಾಸಗಿಯವರು ಕೋರ್ಟಿಗೆ ಅರ್ಜಿ ಹಾಕಿದ್ದಾರೆ. ಈ ಹಿಂದೆಯೂ ಪರವಾನಗಿ, ಕಡಿಮೆ ದರ, ಸಮಯ ವ್ಯತ್ಯಯ ಹೀಗೆ ಅನೇಕ ಸಂದರ್ಭಗಳಲ್ಲಿ ಕೋರ್ಟಿಗೆ ಅರ್ಜಿ ಹಾಕಿದ್ದಾರೆ ಎಂದರು. 

ಸಭೆಯಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ಹೆಗಡೆ, ಘಟಕ ವ್ಯವಸ್ಥಾಪಕ ಎ. ಉದಯ್‌ ಶೆಟ್ಟಿ, ಅಂಕಿ- ಅಂಶ ಅಧಿಕಾರಿ ಸ್ವರ್ಣಲತಾ, ಸಹಾಯಕ ವಿಭಾಗೀಯ ಸಂಚಾರ ಅಧಿಕಾರಿ ಮಂಜುನಾಥ್‌, ಸಂಚಾರ ನಿರೀಕ್ಷಕಿ ಸಿಂಧೂಜಾ ನಾಯಕ್‌ ಉಪಸ್ಥಿತರಿದ್ದರು. 

ಸಾರ್ವಜನಿಕರಿಂದ ಬಂದ ಬೇಡಿಕೆಗಳು
-ಉಡುಪಿ- ಕಲ್ಸಂಕ- ಅಂಬಾಗಿಲಿಗೆ ನರ್ಮ್ ಬಸ್‌.
-ಉಡುಪಿ- ಇಂದ್ರಾಳಿ- ರೈಲು ನಿಲ್ದಾಣಕ್ಕೆ ಸರಿಯಾದ ಸಮಯದಲ್ಲಿ ಬಸ್‌ ಸೇವೆ.
-ಉಡುಪಿ- ಕಿದಿಯೂರು- ಸಂಪಿಗೆನಗರ- ಪಿತ್ರೋಡಿ  ಮಾರ್ಗಕ್ಕೆ ನರ್ಮ್ ಬಸ್‌.
-ಉಡುಪಿ- ವಡಭಾಂಡೇಶ್ವರ- ಹಂಪನ್‌ಕಟ್ಟಾ ಮಾರ್ಗಕ್ಕೆ ನರ್ಮ್ ಬಸ್‌. ಜ  ಉಡುಪಿ- ಕಾರ್ಕಳ ಮಾರ್ಗದ ಸರಕಾರಿ ಬಸ್‌ಗಳ ದರ ಹಾಗೂ ಪಾಸ್‌ ದರವನ್ನು ಗ್ರಾಮಾಂತರ ಸಾರಿಗೆ ದರವಾಗಿ ಪರಿಷ್ಕರಿಸಬೇಕು.
-ಉಡುಪಿ ಸರ್ವೀಸ್‌ ಬಸ್‌ ನಿಲ್ದಾಣದಿಂದ ನರ್ಮ್ ಬಸ್‌ ಓಡಿಸಬೇಕು.
-ವಿದ್ಯಾರ್ಥಿಗಳಿಗೆ ಪಾಸ್‌ ವ್ಯವಸ್ಥೆ ಸುಲಭವಾಗಿ ಸಿಗುವಂತಾಗಬೇಕು.
-ಉಡುಪಿ- ಕಾರ್ಕಳ ಮಾರ್ಗದಲ್ಲಿ ನರ್ಮ್ ಬಸ್‌  ಸಂಚಾರಕ್ಕೆ ಸರಿಯಾದ ಸಮಯ ನಿಗದಿಗೊಳಿಸಿ.
-ಉಡುಪಿ- ಬ್ರಹ್ಮಾವರ- ಮುದ್ದೂರು- ಹೆಬ್ರಿ- ಕಬ್ಬಿನಾಲೆಗೆ ಸರಕಾರಿ ಬಸ್‌ ಸೇವೆ. ಜ  ಸ್ಯಾಬ್ರಕಟ್ಟೆ- ಶಿರಿಯಾರ- ಕುದುರೆಕಟ್ಟೆ- ಮಂದಾರ್ತಿಗೆ ಸರಕಾರಿ ಬಸ್‌ ಸೇವೆ.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.