ವಾರದೊಳಗೆ  ಉಡುಪಿ- ಕಲ್ಸಂಕ- ಅಂಬಾಗಿಲಿಗೆ ನರ್ಮ್ ಬಸ್‌


Team Udayavani, Apr 14, 2017, 2:55 PM IST

130417ppe1.jpg

ಉಡುಪಿ: ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಡುಪಿ- ಕಲ್ಸಂಕ- ಅಂಬಾಗಿಲು ಮಾರ್ಗವಾಗಿ ಬಸ್‌ ಓಡಿಸಲು ಪರವಾನಗಿ ಸಿಕ್ಕಿದ್ದು, ಸಮಯ, ಹಂತಗಳನ್ನು ಶೀಘ್ರ ಅಂತಿಮಗೊಳಿಸಿ ವಾರದೊಳಗೆ ನರ್ಮ್ ಬಸ್‌ ಸಂಚಾರಕ್ಕೆ ಚಾಲನೆ ನೀಡಲಾಗುವುದು ಎಂದು ಮಂಗಳೂರು ವಿಭಾಗೀಯ ಸಂಚಾರ ಅಧಿಕಾರಿ ಜೈಶಾಂತ್‌ ಕುಮಾರ್‌ ಭರವಸೆ ನೀಡಿದರು.

ಅವರು ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು  ವಿಭಾಗದ ಉಡುಪಿ ನಿಟ್ಟೂರಿನ ಘಟಕದಲ್ಲಿ ವತಿಯಿಂದ  ಬಸ್‌ಗಳ ಕಾರ್ಯಾಚರಣೆಯ ಬಗ್ಗೆ ಗುರುವಾರ ನಡೆದ  ಸಾರ್ವಜನಿಕ ಸಂಪರ್ಕ ಸಭೆಯಲ್ಲಿ  ಮಾತನಾಡಿದರು. 

ಶೀಘ್ರ 18 ಹೊಸ ನರ್ಮ್ ಬಸ್‌ : ಜಿಲ್ಲೆಯ ಆರ್‌ಟಿಎ ವ್ಯಾಪ್ತಿಯಲ್ಲಿ ಒಟ್ಟು 55 ಸರಕಾರಿ ಬಸ್‌ಗಳ ಸೇವೆ ಕಲ್ಪಿಸಲಾಗಿದೆ. ಇನ್ನೂ 30 ಬಸ್‌ ಓಡಿಸಲು ಪರವಾನಗಿ ಸಿಕ್ಕಿದೆ. ಇದುವರೆಗೆ 77 ಬಸ್‌ಗಳ ಪರವಾನಗಿ ಸಿಕ್ಕಿದರೂ, ವೇಳಾಪಟ್ಟಿ ನಿಗದಿಯಾಗದ್ದರಿಂದ ಬಾಕಿ ಇವೆ. ಅದಲ್ಲದೆ ಉಡುಪಿ ಜಿಲ್ಲೆಯಾದ್ಯಂತ ಬೇಡಿಕೆ ಇರುವ ಕಡೆ ಶೀಘ್ರ 18 ಹೊಸ ನರ್ಮ್ ಬಸ್‌ಗಳ ಸಂಚಾರ ಆರಂಭಿಸಲಾಗುವುದು ಎಂದರು.
 
ನರ್ಮ್ ಬಸ್‌ ವಿರುದ್ಧ ಕೋರ್ಟಿಗೆ: ಹೆಚ್ಚಿನ ಕಡೆ ಜನರಿಂದ ಬೇಡಿಕೆಗಳು ಬಂದ ತತ್‌ಕ್ಷಣ ಅಲ್ಲಿಗೆ ಬಸ್‌ ಸೇವೆ ಒದಗಿಸಲು ಇದು ರಾಷ್ಟ್ರೀಕೃತವಲ್ಲದ ರಸ್ತೆಯಾಗಿರುವುದರಿಂದ ಕೆಎಸ್‌ಆರ್‌ಟಿಸಿಗೆ ಅಧಿಕಾರವಿಲ್ಲ. ಕೆಲವೊಂದು ಯೋಜನೆಗಳು ಖಾಸಗಿಯವರ ಲಾಬಿಯಿಂದಾಗಿ ಈ ಪ್ರಕ್ರಿಯೆ ವಿಳಂಬವಾಗುತ್ತಿವೆ. ಉಡುಪಿಯಲ್ಲಿ ನರ್ಮ್ ಬಸ್‌ ಸಂಚಾರ ಆರಂಭಿಸಿರುವುದು ಸರಿಯಿಲ್ಲ  ಎಂದು ಖಾಸಗಿಯವರು ಕೋರ್ಟಿಗೆ ಅರ್ಜಿ ಹಾಕಿದ್ದಾರೆ. ಈ ಹಿಂದೆಯೂ ಪರವಾನಗಿ, ಕಡಿಮೆ ದರ, ಸಮಯ ವ್ಯತ್ಯಯ ಹೀಗೆ ಅನೇಕ ಸಂದರ್ಭಗಳಲ್ಲಿ ಕೋರ್ಟಿಗೆ ಅರ್ಜಿ ಹಾಕಿದ್ದಾರೆ ಎಂದರು. 

ಸಭೆಯಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ಹೆಗಡೆ, ಘಟಕ ವ್ಯವಸ್ಥಾಪಕ ಎ. ಉದಯ್‌ ಶೆಟ್ಟಿ, ಅಂಕಿ- ಅಂಶ ಅಧಿಕಾರಿ ಸ್ವರ್ಣಲತಾ, ಸಹಾಯಕ ವಿಭಾಗೀಯ ಸಂಚಾರ ಅಧಿಕಾರಿ ಮಂಜುನಾಥ್‌, ಸಂಚಾರ ನಿರೀಕ್ಷಕಿ ಸಿಂಧೂಜಾ ನಾಯಕ್‌ ಉಪಸ್ಥಿತರಿದ್ದರು. 

ಸಾರ್ವಜನಿಕರಿಂದ ಬಂದ ಬೇಡಿಕೆಗಳು
-ಉಡುಪಿ- ಕಲ್ಸಂಕ- ಅಂಬಾಗಿಲಿಗೆ ನರ್ಮ್ ಬಸ್‌.
-ಉಡುಪಿ- ಇಂದ್ರಾಳಿ- ರೈಲು ನಿಲ್ದಾಣಕ್ಕೆ ಸರಿಯಾದ ಸಮಯದಲ್ಲಿ ಬಸ್‌ ಸೇವೆ.
-ಉಡುಪಿ- ಕಿದಿಯೂರು- ಸಂಪಿಗೆನಗರ- ಪಿತ್ರೋಡಿ  ಮಾರ್ಗಕ್ಕೆ ನರ್ಮ್ ಬಸ್‌.
-ಉಡುಪಿ- ವಡಭಾಂಡೇಶ್ವರ- ಹಂಪನ್‌ಕಟ್ಟಾ ಮಾರ್ಗಕ್ಕೆ ನರ್ಮ್ ಬಸ್‌. ಜ  ಉಡುಪಿ- ಕಾರ್ಕಳ ಮಾರ್ಗದ ಸರಕಾರಿ ಬಸ್‌ಗಳ ದರ ಹಾಗೂ ಪಾಸ್‌ ದರವನ್ನು ಗ್ರಾಮಾಂತರ ಸಾರಿಗೆ ದರವಾಗಿ ಪರಿಷ್ಕರಿಸಬೇಕು.
-ಉಡುಪಿ ಸರ್ವೀಸ್‌ ಬಸ್‌ ನಿಲ್ದಾಣದಿಂದ ನರ್ಮ್ ಬಸ್‌ ಓಡಿಸಬೇಕು.
-ವಿದ್ಯಾರ್ಥಿಗಳಿಗೆ ಪಾಸ್‌ ವ್ಯವಸ್ಥೆ ಸುಲಭವಾಗಿ ಸಿಗುವಂತಾಗಬೇಕು.
-ಉಡುಪಿ- ಕಾರ್ಕಳ ಮಾರ್ಗದಲ್ಲಿ ನರ್ಮ್ ಬಸ್‌  ಸಂಚಾರಕ್ಕೆ ಸರಿಯಾದ ಸಮಯ ನಿಗದಿಗೊಳಿಸಿ.
-ಉಡುಪಿ- ಬ್ರಹ್ಮಾವರ- ಮುದ್ದೂರು- ಹೆಬ್ರಿ- ಕಬ್ಬಿನಾಲೆಗೆ ಸರಕಾರಿ ಬಸ್‌ ಸೇವೆ. ಜ  ಸ್ಯಾಬ್ರಕಟ್ಟೆ- ಶಿರಿಯಾರ- ಕುದುರೆಕಟ್ಟೆ- ಮಂದಾರ್ತಿಗೆ ಸರಕಾರಿ ಬಸ್‌ ಸೇವೆ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.