ಉಡುಪಿ ವಿಟ್ಲ ಪಿಂಡಿ ಮಹೋತ್ಸವ; ಮೈನವಿರೇಳಿಸಿದ ಮಾನವ ಪಿರಮಿಡ್‌


Team Udayavani, Aug 24, 2019, 4:07 PM IST

Dahihandi

ಉಡುಪಿ: ಮುಂಬೈ ಬಾಲಮಿತ್ರ ಮಂಡಳಿಯ ಆಲಾರೆ ಗೋವಿಂದ ತಂಡವು ಶ್ರೀ ಕೃಷ್ಣ ಮಠದ ರಥ ಬೀದಿ ಮತ್ತು ನಗರದ ವಿವಿಧೆಡೆ ಶನಿವಾರ ಮೈನವಿರೇಳಿಸುವ ಮಾನವ ಪಿರಮಿಡ್‌ ರಚಿಸಿ ಎತ್ತರದ ದಹಿ ಹಂಡಿಯನ್ನು ಒಡೆಯುವ ಮೂಲಕ ತನ್ನ ಕರಾಮತ್ತನ್ನು ಪ್ರದರ್ಶಿಸಿದೆ.

ವಿಟ್ಲ ಪಿಂಡಿ ಮಹೋತ್ಸವದ ಅಂಗವಾಗಿ ಕನಕ ಸಾಂಸ್ಕೃತಿಕ ವೇದಿಕೆಯ ಆಯೋಜಿಸಿದ ಮಧುಸೂದನ್‌ ಪೂಜಾರಿ ಕೆಮ್ಮಣ್ಣು ಅವರ ನೇತೃತ್ವದ ಪೂರ್ವ ಮುಂಬಯಿ ಸಾಂತಕ್ರೂಸ್‌ ಬಾಲಮಿತ್ರ ಮಂಡಳಿಯ ಆಲಾರೆ ಗೋವಿಂದ ತಂಡದ ಸದಸ್ಯರು ಉಡುಪಿಯಲ್ಲಿ ಮೊಸರು ಕುಡಿಕೆ ಒಡೆದರು. ಈ ತಂಡದಲ್ಲಿ 14 ವರ್ಷದಿಂದ 50 ವರ್ಷದ ವರೆಗಿನ 110 ಮಂದಿ ಸದಸ್ಯರು ಸಮವಸ್ತ್ರ ಧರಿಸಿ ನೋಡುನೋಡುತ್ತಿದ್ದಂತೆ ಮಾನವ ಪಿರಮಿಡ್‌ ನಿರ್ಮಿಸಿ ನೋಡುಗರನ್ನು ಆಶ್ಚರ್ಯ ಚಕಿತರನ್ನಾಗಿಸಿದರು.

ಎರಡನೇ ಪ್ರಯತ್ನ ರಥ ಬೀದಿ ಶಿರೂರು ಮಠದ ಮುಂಭಾಗದಲ್ಲಿನ 50 ಅಡಿ ಎತ್ತರದ ದಹಿ ಹಂಡಿ ಒಡೆಯುವ ಮೊದಲ ಪ್ರಯತ್ನಕ್ಕೆ ಮಳೆ ಅಡ್ಡಿಯಾಗಿತ್ತು. ಎರಡನೇ ಪ್ರಯತ್ನದಲ್ಲಿ ಸದಸ್ಯರು ಮೊಸರು ಕುಡಿಕೆ ಒಡೆದರು.

ಕೆಮ್ಮಣ್ಣು ಮಧುಸೂದನ ಪೂಜಾರಿ ಅವರು ಸುಮಾರು 20 ವರ್ಷದ ಹಿಂದೆ ಈ ತಂಡವನ್ನು ಮುಂಬೈಯಲ್ಲಿ ಕಟ್ಟಿ ಬೆಳೆಸಿದ್ದಾರೆ. ಎರಡು ವರ್ಷಗಳ ಹಿಂದಿನ ವಿಟ್ಲಪಿಂಡಿ ಮಹೋತ್ಸವದಲ್ಲಿ ಇದೇ ತಂಡ ಭಾಗವಹಿಸಿತ್ತು.

ಮಳೆ ನಡುವೆ ವೀಕ್ಷಣೆ
ಎತ್ತರದ ದಹಿ ಹಂಡಿಯನ್ನು ಒಡೆಯುವುದನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ, ಅದಮಾರು ಕಿರಿಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಅವರು ಮಳೆ ನಡುವೆಯೂ ಓಲಿ ಕೊಡೆಯಡಿ ನಿಂತು ವೀಕ್ಷಣೆ ಮಾಡಿದರು. ಭಾರೀ ಸಂಖ್ಯೆಯಲ್ಲಿ ಆಗಮಿಸಿದ ಜನರು ಮಳೆಯನ್ನು ಲೆಕ್ಕಿಸದೆ ಘೋಷಣೆ ಕೂಗುವ ಮೂಲಕ ಆಲಾರೆ ಗೋವಿಂದ ತಂಡವನ್ನು ಹುರಿದುಂಬಿಸಿದರು.

ವಿವಿಧ ಕಡೆ ಪ್ರದರ್ಶನ
ಕಡಿಯಾಳಿ ಓಶಿಯನ್‌ ಪರ್ಲ್, ಅಂಬಲಪಾಡಿ ಶ್ಯಾಮಿಲಿ ಸಭಾಂಗಣ, ಉಡುಪಿ ಪೈ ಇಂಟರ್‌ನ್ಯಾಶನಲ್‌, ತ್ರಿವೇಣಿ ಸರ್ಕಲ್‌, ಕಾಣಿಯೂರು ಮಠ, ಪುತ್ತಿಗೆ ಮಠ, ಪೇಜಾವರ ಮಠ, ಕಿದಿಯೂರು ಹೊಟೇಲ್‌ ಎದುರು, ಡಯಾನ ಹೊಟೇಲ್‌ ಎದುರಿನ ದಹಿ ಹಂಡಿ ಒಡೆದರು.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.