ಉಡುಪಿ: ಯಾರಾಗುವರು ಉಸ್ತುವಾರಿ ?
Team Udayavani, May 20, 2018, 8:56 AM IST
ಉಡುಪಿ: ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ಮೂರೇ ದಿನಗಳಲ್ಲಿ ರಾಜೀನಾಮೆ ಕೊಟ್ಟಿದ್ದು, ಮುಂದಿನ ಅವಕಾಶ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟಕ್ಕೆ ಸಿಕ್ಕಿದೆ. ಬಿಜೆಪಿ ಸರಕಾರ ರಚನೆಯಾಗಿದ್ದರೆ ಜಿಲ್ಲೆಯ ಐವರು ಶಾಸಕರಲ್ಲಿ ಒಬ್ಬರಲ್ಲ ಒಬ್ಬರಿಗೆ ಸಚಿವ ಪದವಿ ಸಿಗುವ ಖಾತ್ರಿ ಇತ್ತು. ಆದರೆ ಈಗ ಕಾಂಗ್ರೆಸ್- ಜೆಡಿಎಸ್ ಸರಕಾರ ರಚಿಸಿವೆ, ಈ ಪಕ್ಷಗಳಿಂದ ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ವಿಧಾನಸಭಾ ಸದಸ್ಯನಿಲ್ಲ. ಹೀಗಾಗಿ ಉಡುಪಿ ಜಿಲ್ಲೆಗೆ ಉಸ್ತುವಾರಿ ಸಚಿವರು ಯಾರಾಗುವರು ಎಂಬ ಕುತೂಹಲ ಉಂಟಾಗಿದೆ.
ಈಗಿರುವ ಸಾಧ್ಯತೆ ಪ್ರಕಾರ ವಿಧಾನ ಪರಿಷತ್ ಸದಸ್ಯ ಕುಂದಾಪುರದ ಪ್ರತಾಪಚಂದ್ರ ಶೆಟ್ಟಿಯವರಿಗೆ ಅವಕಾಶಗಳು ಹೆಚ್ಚಿವೆ. ಮೈತ್ರಿಕೂಟ ಸರಕಾರವಿರುವಾಗ ಸಾಮಾನ್ಯವಾಗಿ ಜಿಲ್ಲೆಗಳನ್ನು ಉಭಯ ಪಕ್ಷಗಳು ಹಂಚಿಕೊಳ್ಳುತ್ತವೆ. ಹೀಗಾಗಿ ದ.ಕ., ಉಡುಪಿ ಜಿಲ್ಲೆ ಎರಡೂ ಜಿಲ್ಲೆಯನ್ನು ಕಾಂಗ್ರೆಸ್ ವಹಿಸಿಕೊಳ್ಳಬಹುದು ಅಥವಾ ಒಂದು ಜಿಲ್ಲೆಯನ್ನು ಕಾಂಗ್ರೆಸ್ ಮತ್ತು ಇನ್ನೊಂದು ಜಿಲ್ಲೆಯನ್ನು ಜೆಡಿಎಸ್ ಹಂಚಿಕೊಳ್ಳಬಹುದು.
ಯಾರು ಉಸ್ತುವಾರಿ ಸಚಿವರು?
ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಾಗಿದ್ದ ಒಂಬತ್ತು ಮಂದಿ ಶಾಸಕರಲ್ಲಿ ಕೆ. ಜಯಪ್ರಕಾಶ್ ಹೆಗ್ಡೆ -ಜನತಾದಳ, ಡಿ.ಟಿ. ಜಯಕುಮಾರ್ -ಜೆಡಿಎಸ್, ಡಾ| ವಿ.ಎಸ್. ಆಚಾರ್ಯ, ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿಯವರಾದರೆ ಉಳಿದವರೆಲ್ಲರೂ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿದ್ದರು. ಡಿ.ಟಿ. ಜಯಕುಮಾರ್ ಅವರು ಎಚ್.ಡಿ. ಕುಮಾರಸ್ವಾಮಿ- ಯಡಿಯೂರಪ್ಪ ಸರಕಾರವಿರುವಾಗ ಉಸ್ತುವಾರಿ ಸಚಿವರಾಗಿದ್ದರು. ಈಗ ಮತ್ತೆ ಅಂತಹ ಕಾಲ ಕೂಡಿ ಬರುತ್ತಿದೆ.
ಉಡುಪಿ ಜಿಲ್ಲೆ ಜೆಡಿಎಸ್ ಪಾಲಿಗಾದರೆ ಹೊರಗಿನ ಸಚಿವರು ಇಲ್ಲಿಗೆ ಉಸ್ತುವಾರಿಯಾಗಿ ಬರಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ ಸಚಿವರಾಗಬಲ್ಲ ವರ್ಚಸ್ಸು ಹೊಂದಿದ ಸ್ಥಳೀಯ ಜೆಡಿಎಸ್ ನಾಯಕರು ಇಲ್ಲವಾದ ಕಾರಣ ಹೊರಗಿನ ಜಿಲ್ಲೆಯವರು ಉಸ್ತುವಾರಿಯಾಗುವುದು ಅನಿವಾರ್ಯ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಪ್ರತಾಪಚಂದ್ರ ಶೆಟ್ಟಿಯವರಿಗೆ ಅವಕಾಶ ಕೂಡಿ ಬಂದೀತು. ಸುದೀರ್ಘ ಕಾಲ ವಿಧಾನಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಆಡಳಿತಾತ್ಮಕ ಸೂಕ್ಷ್ಮ ವಿಷಯಗಳು ತಿಳಿದಿದ್ದರೂ ಪ್ರತಾಪಚಂದ್ರ ಶೆಟ್ಟಿಯವರಿಗೆ ಸಚಿವರಾಗುವ ಯೋಗ ಬಂದಿರಲಿಲ್ಲ. ಈಗದು ಬರುವ ಲಕ್ಷಣಗಳಿವೆ.
ಇವರು ಉಸ್ತುವಾರಿ ಸಚಿವರಾಗಿದ್ದರು
ಕೆ. ಜಯಪ್ರಕಾಶ್ ಹೆಗ್ಡೆ, ವಸಂತ ಸಾಲ್ಯಾನ್, ರೋಶನ್ ಬೇಗ್, ಸುಮಾ ವಸಂತ್, ಮೋಟಮ್ಮ, ಡಿ.ಟಿ. ಜಯಕುಮಾರ್, ಡಾ| ವಿ.ಎಸ್. ಆಚಾರ್ಯ, ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಇದುವರೆಗೆ ಒಂಬತ್ತು ಮಂದಿ ಸಚಿವರಾಗಿದ್ದು, ಮುಂದಿನವರು ಹತ್ತನೆಯವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ