ಉಡುಪಿ: ಗಾಳಿ-ಮಳೆ, ವಿದ್ಯುತ್‌ ಅಸ್ತವ್ಯಸ್ತ


Team Udayavani, May 20, 2017, 3:10 PM IST

udupi.jpg

ಉಡುಪಿ: ಗುರುವಾರ ತಡರಾತ್ರಿಯಿಂದ ಬೆಳಗ್ಗೆವರೆಗೆ ಜಿಲ್ಲೆಯಾದ್ಯಂತ ಭಾರೀ ಗಾಳಿಯಿಂದ ಕೂಡಿದ ಮಳೆಯಾಯಿತು. ಬೇಸಗೆಯ ಬಿಸಿಯಿಂದ ಕಂಗೆಟ್ಟಿದ್ದ ಜನತೆ ಮಳೆಯಿಂದಾಗಿ ಹಿತಾನುಭವ ಹೊಂದಿದರು. 

ಉಡುಪಿ ಜಿಲ್ಲೆಯಲ್ಲಿ ಅಪರಾಹ್ನದಿಂದಲೇ ಮೋಡ ಕವಿದ ವಾತಾವರಣವಿತ್ತು. ರಾತ್ರಿ 11 ಗಂಟೆ ಬಳಿಕ ಗುಡುಗು, ಮಿಂಚಿನಿಂದ ಕೂಡಿದ ತುಂತುರು ಮಳೆಯಾಯಿತು. ಮಧ್ಯರಾತ್ರಿ ಬಳಿಕ ಭಾರೀ ಗುಡುಗು ಮಿಂಚಿನೊಂದಿಗೆ ಮುಂಜಾನೆವರೆಗೂ ಗಾಳಿ-ಮಳೆ ಸುರಿದು ವಿದ್ಯುತ್‌ ಸಂಪರ್ಕ ಕಡಿತವಾಯಿತು. 

60 ವಿದ್ಯುತ್‌ ಕಂಬ ಧರೆಗೆ
ಗಾಳಿಯ ಪರಿಣಾಮದಿಂದಾಗಿ ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಉರುಳಿದವು. ಮೆಸ್ಕಾಂ ಮಣಿಪಾಲ, ಹಿರಿಯಡಕ ವಲಯಗಳಲ್ಲಿ ಶುಕ್ರವಾರ ಮಧ್ಯಾಹ್ನದವರೆಗೆ ವಿದ್ಯುತ್‌ ಸಂಪರ್ಕ ಇರಲಿಲ್ಲ. ಉಡುಪಿ ನಗರದಲ್ಲಿ ಮಧ್ಯರಾತ್ರಿ ಹೋದ ವಿದ್ಯುತ್‌ ಬೆಳಗ್ಗೆ 9 ಗಂಟೆಗೆ ಬಂತು. ಉಡುಪಿ ಉಪವಿಭಾಗದಲ್ಲಿ ಸುಮಾರು 60 ವಿದ್ಯುತ್‌ ಕಂಬಗಳು ನೆಲಕ್ಕೆ ಉರುಳಿದ್ದು ಬಹುತೇಕ ಕಂಬಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ. ಮಣಿಪಾಲ – ಪರ್ಕಳ ರಸ್ತೆಯ ಈಶ್ವರನಗರದಲ್ಲಿ ಮಾವಿನ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಆರು ವಿದ್ಯುತ್‌ ಕಂಬಗಳು ಬಿದ್ದವು. 
ಬ್ರಹ್ಮಾವರ, ಕೋಟ, ಸಾಲಿಗ್ರಾಮ, ಕೊಲ್ಲೂರು,  ವಂಡ್ಸೆ, ಸಿದ್ದಾಪುರ, ಅಮಾಸೆಬೈಲಿನಲ್ಲಿ ಸಿಡಿಲು, ಮಿಂಚಿನಿಂದ ಕೂಡಿದ ಮಳೆಯಾಗಿದೆ.

ಸಿಡಿಲಿಗೆ 9 ಹಸುಗಳು ಸಾವು
ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಕುಂದಾಪುರ ತಾ|ನ ವಿವಿಧೆಡೆ ಗುರುವಾರ ತಡರಾತ್ರಿ ಸಿಡಿಲು ಬಡಿದು 9 ಹಸುಗಳು ಸಾವಿಗೀಡಾಗಿವೆ. 

ಕಲಶಾಭಿಷೇಕ – ವರುಣಾಭಿಷೇಕ
ಕಳೆದ ನಾಲ್ಕು ದಿನಗಳಿಂದ ಶ್ರೀಕೃಷ್ಣ ಮಠದಲ್ಲಿ ಬ್ರಹ್ಮಕಲಶೋತ್ಸವ ನಿಮಿತ್ತ ನಡೆದ ಸಭೆಗಳಲ್ಲಿ ಮೇ 18ರ ಬಳಿಕ ಮಳೆ ಬರುತ್ತದೆ ಎಂದು ಹಲವರು ತಿಳಿಸಿದ್ದರು. ಒಂದು ದಿನದ ಸಭೆಯಲ್ಲಿ “ಬ್ರಹ್ಮಕಲಶೋತ್ಸವಕ್ಕಾಗಿ ಮಳೆ ವಿಳಂಬವಾಗುವುದು ಬೇಡ. ಮಳೆ ಬರಲಿ’ ಎಂದು ಪೇಜಾವರ ಶ್ರೀಗಳು ಹಾರೈಸಿದ್ದರು. ಅಂತೂ ಬ್ರಹ್ಮಕಲಶೋತ್ಸವ ನಡೆದ ದಿನವೇ ಮಳೆ ಬಂದದ್ದು ಕಾಕತಾಳೀಯವಾಗಿದೆ. ಬ್ರಹ್ಮಕಲಶೋತ್ಸವದ ದಿನವೇ ಮಳೆ ಬಂದಿರುವುದಕ್ಕೆ ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ಹರ್ಷ ವ್ಯಕ್ತಪಡಿಸಿದೆ. ಮಳೆಗಾಗಿ ಪರ್ಯಾಯ ಶ್ರೀ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಸಚಿವ ಪ್ರಮೋದ್‌ ಮಧ್ವರಾಜರು ಪ್ರಾರ್ಥನೆ ಸಲ್ಲಿಸಿದ್ದರು. ಮಸೀದಿ, ಚರ್ಚುಗಳಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.