ಮಳೆ ಅಬ್ಬರಕ್ಕೆ ಮಿಂದೆದ್ದ ಉಡುಪಿ


Team Udayavani, Jun 21, 2018, 6:00 AM IST

2006gk5.jpg

ಉಡುಪಿ: ಉಡುಪಿ ನಗರವೂ ಸೇರಿದಂತೆ ಉಡುಪಿ ತಾಲೂಕಿನಲ್ಲಿ ಜೂ.19ರಂದು ರಾತ್ರಿ ಮತ್ತು ಜೂ. 20ರಂದು ಇಡೀ ದಿನ ನಿರಂತರವಾಗಿ ಸುರಿದ ಮಳೆಯಿಂದಾಗಿ ಸಾಮಾನ್ಯ ಜನಜೀವನ ಬಹುಮಟ್ಟಿಗೆ ಅಸ್ತವ್ಯಸ್ತಗೊಂಡಿತು.

ಬುಧವಾರ ಬೆಳಗಾಗುತ್ತಲೇ ದಟ್ಟ ಮೋಡ, ಜಡಿಮಳೆಯಿಂದಾಗಿ ಕತ್ತಲಾವರಿಸಿಕೊಂಡಿತ್ತು. ಅಂತೆಯೇ ಎಡೆಬಿಡದೆ ಸುರಿದ ಮಳೆಯಿಂದಾಗಿ ನಗರ ಭಾಗದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳ ಎದುರು ನೀರು ನಿಂತಿತು. ತಗ್ಗುಪ್ರದೇಶಗಳ ನಿವಾಸಿಗಳು ಸಂಜೆವರೆಗೂ ಆತಂಕದಿಂದಲೇ ಸಮಯ ಕಳೆದರು. ಆರಂಭದ ಮಳೆಗೆ ಸ್ವಲ್ಪ ಮಟ್ಟಿಗೆ ನಗರಸಭೆ ಎಚ್ಚೆತ್ತುಕೊಂಡಿದ್ದರಿಂದ  ಕೆಲವು ಮನೆಗಳಿಗೆ ನೀರು ನುಗ್ಗುವುದು ತಪ್ಪಿತು. ಆದಾಗ್ಯೂ ಬುಧವಾರ ರಾ.ಹೆದ್ದಾರಿ 66ರ ಕರಾವಳಿ ಬೈಪಾಸ್‌ ಬಳಿ ಗ್ಯಾರೇಜ್‌ ಹಾಗೂ ಕೆಲವು ಕಾರ್ಮಿಕರ ಜೋಪಡಿ ಪ್ರದೇಶಗಳಲ್ಲಿ ನೀರು ಆವರಿಸಿತು.

ಗ್ಯಾರೇಜ್‌ಗೆ ನೀರು
ಕರಾವಳಿ ಬೈಪಾಸ್‌ ಸಮೀಪ ರಾ.ಹೆದ್ದಾರಿಗೆ ಹೊಂದಿಕೊಂಡಂತಿರುವ ಗ್ಯಾರೇಜ್‌ ಒಂದಕ್ಕೆ ನೀರು ನುಗ್ಗಿ ಅವರು ಕೆಲಸ ಮಾಡಲು ಸಾಧ್ಯವಾಗಲಿಲ್ಲ. ನಗರದ ವಿವಿಧೆಡೆ ಮಳೆಯ ತೀವ್ರತೆಯಿಂದಾಗಿ ಜನಸಂಚಾರ ವಿರಳವಾಗಿತ್ತು. 

ಮುಖ್ಯರಸ್ತೆಗಳಲ್ಲೇ ಸಮಸ್ಯೆ!
ಕರಾವಳಿ ಬೈಪಾಸ್‌ ರಾ.ಹೆ.66ರಲ್ಲಿ ಬುಧವಾರ ಕೂಡ ರಸ್ತೆಯಲ್ಲಿಯೇ ನೀರು ನಿಂತ ಪರಿಣಾಮ ವಾಹನಗಳು ನಿಧಾನವಾಗಿ ಚಲಿಸಿವೆ. ಕೆಲವೊಮ್ಮೆ ವಾಹನಗಳನ್ನು ನಿಲ್ಲಿಸಿದ್ದರಿಂದ ಬ್ಲಾಕ್‌ ಆಗಿದೆ. ಮಧ್ಯಾಹ್ನ 1.30ರ ಈ ಸಮಸ್ಯೆ ತೀವ್ರವಾಯಿತು. ವಾಹನಗಳ ನಡುವೆ ಕುಂದಾಪುರ ಕಡೆಯಿಂದ ಬರುತ್ತಿದ್ದ ಆ್ಯಂಬುಲೆನ್ಸ್‌ ಕೂಡ ಕೆಲಹೊತ್ತು ಬಾಕಿಯಾಯಿತು. ಇತ್ತ ಕಿನ್ನಿಮೂಲ್ಕಿ ಮುಖ್ಯರಸ್ತೆಯಲ್ಲಿ ಅಜ್ಜರಕಾಡು ತಿರುವಿನಲ್ಲಿ ಭಾರೀ ನೀರು ರಸ್ತೆಯಲ್ಲಿಯೇ ಪ್ರವಹಿಸಿ ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಚಾಲಕರು ತೀವ್ರ ತೊಂದರೆಗೀಡಾದರು. 

ರಜೆ ಅಧಿಕಾರ ಮುಖ್ಯೋಪಾಧ್ಯಾಯರಿಗೆ
ಮಳೆಯ ವಾತಾವರಣವನ್ನು ನೋಡಿಕೊಂಡು ಸ್ಥಳೀಯವಾಗಿ ಇರುವ ಪರಿಸ್ಥಿತಿ ಗಮನಿಸಿ ಆಯಾ ಶಾಲಾ ಮುಖ್ಯೋಪಾಧ್ಯಾಯರು ರಜೆ ನೀಡುವ ವಿವೇಚನಾ ಅಧಿಕಾರವನ್ನು ಈಗಾಗಲೇ ಜಿಲ್ಲಾಧಿಕಾರಿಯವರು ನೀಡಿದ್ದಾರೆ. ಹಾಗಾಗಿ ಮಳೆ ಸಂದರ್ಭ ಆಯಾ ಶಾಲೆಗಳಿಗೆ ರಜೆ ಘೋಷಿಸಲು ಮೇಲಧಿಕಾರಿಗಳ ಒಪ್ಪಿಗೆ ಬೇಕಾಗಿಲ್ಲ. ಪಡುಬಿದ್ರಿ ಭಾಗದಲ್ಲಿ ಹೆಚ್ಚು ನೀರು ನಿಂತ ಪರಿಣಾಮ ಆ ಭಾಗದ ಶಾಲೆಗಳ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಿರುವ ಮಾಹಿತಿ ಬಂದಿದೆ. 
– ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಡುಪಿ 

ಚರಂಡಿ ಎಲ್ಲಿ ಹೋಯಿತು?
ಕರಾವಳಿ ಬೈಪಾಸ್‌ನಲ್ಲಿ ಫ್ಲೈ ಓವರ್‌ ಕಾಮಗಾರಿ ಇನ್ನೂ ನಡೆಯುತ್ತಿರುವುದು ಹೌದು. ಆದರೆ ಮಳೆಯ ನೀರು ಹರಿಯಲು ತಾತ್ಕಾಲಿಕ ಕೆಲಸವನ್ನಾದರೂ ಮಾಡಬೇಕಿತ್ತು. ಹೆದ್ದಾರಿ ಪ್ರಾಧಿಕಾರದವರು ಕಣ್ಣು ಮುಚ್ಚಿ ಕುಳಿತಿದ್ದಾರೆಯೇ? ಹೀಗೆ ಮಳೆ ಬರುವಾಗ ನಮ್ಮ ಇಲಾಖೆಯ ಅಧಿಕಾರಿಗಳು ಹೊರಗೆ ಬರಬೇಕು.
– ವಿಶ್ವನಾಥ್‌, ಸ್ಥಳೀಯರು,ಕರಾವಳಿ ಬೈಪಾಸ್‌ 

ಚಿತ್ರ: ಗಣೇಶ್‌ ಕಲ್ಯಾಣಪುರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.