ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆ ಕಾಮಗಾರಿ; ಬ್ರಹ್ಮಾವರಕ್ಕೆ ತಾತ್ಕಾಲಿಕ ಸ್ಥಳಾಂತರ


Team Udayavani, Nov 19, 2020, 1:14 AM IST

ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆ ಕಾಮಗಾರಿ; ಬ್ರಹ್ಮಾವರಕ್ಕೆ ತಾತ್ಕಾಲಿಕ ಸ್ಥಳಾಂತರ

ಉಡುಪಿ: ಜಿಲ್ಲಾ ಪಂಚಾಯತ್‌ ಸಾಮಾನ್ಯ ಸಭೆ ಬುಧವಾರ ನಡೆಯಿತು.

ಉಡುಪಿ: ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಪೂರ್ಣಗೊಳ್ಳುವ ವರೆಗೆ ಆಸ್ಪತ್ರೆಯು ಬ್ರಹ್ಮಾವರದಲ್ಲಿ ಕಾರ್ಯನಿರ್ವಹಿಸಲಿದೆ. ಬುಧವಾರ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅವರ ಅಧ್ಯಕ್ಷತೆಯಲ್ಲಿ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಈ ನಿರ್ಣಯಕ್ಕೆ ಬರಲಾಯಿತು.

ಆಸ್ಪತ್ರೆಯನ್ನು 115 ಕೋ.ರೂ. ವೆಚ್ಚದಲ್ಲಿ 250 ಬೆಡ್‌ಗಳಿಗೆ ಮೇಲ್ದರ್ಜೆಗೇರಿಸಲಿದ್ದು, ಫೆಬ್ರವರಿ/ ಮಾರ್ಚ್‌ನಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ರೋಗಿಗಳನ್ನು ಇದೇ ಕಟ್ಟಡದಲ್ಲಿ ಉಳಿಸಿಕೊಂಡು ಕಾಮಗಾರಿ ಕೈಗೊಳ್ಳುವುದು ಅಸಾಧ್ಯವಾಗಿರುವ ಕಾರಣ ಮತ್ತು ಕೆಲಸವನ್ನು ವೇಗವಾಗಿ ಮುಗಿಸುವ ನಿಟ್ಟಿನಲ್ಲಿ ಎರಡು ವರ್ಷದ ಮಟ್ಟಿಗೆ ಪೂರ್ಣ ಪ್ರಮಾಣದಲ್ಲಿ ಬ್ರಹ್ಮಾವರದ ಸಮುದಾಯ ಆಸ್ಪತ್ರೆಗೆ ಸ್ಥಳಾಂತರಿಸಬೇಕು ಎಂದು ಶಾಸಕ ಕೆ. ರಘುಪತಿ ಭಟ್‌ ಸಲಹೆ ನೀಡಿದರು. ಸದಸ್ಯರು ಅನುಮೋದಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಬಳಿಯ ಎಎನ್‌ಎಂ ತರಬೇತಿ ಕೇಂದ್ರದಲ್ಲಿ ಒಂದೆರಡು ವಿಭಾಗಗಳನ್ನು ಸ್ಥಳಾಂತರಿಸಬಹುದು. ಬಿ.ಆರ್‌. ಶೆಟ್ಟಿ ಆಸ್ಪತ್ರೆಗೆ ಕೆಲವು ವಿಭಾಗಗಳನ್ನು ಹಂಚಬೇಕು ಎಂದು ಭಟ್‌ ತಿಳಿಸಿದರು.

ಹೊರರೋಗಿ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಒಂದೇ ಕಡೆ ಇರಿಸಬೇಕಾಗುತ್ತದೆ. ಬ್ರಹ್ಮಾವರವು ಜಿಲ್ಲೆಯ ಕೇಂದ್ರ ಸ್ಥಾನದಲ್ಲಿ ರುವುದರಿಂದ ಬ್ರಹ್ಮಾವರಕ್ಕೆ ಇವೆರಡನ್ನು ಸ್ಥಳಾಂತರಿಸುವುದು ಸೂಕ್ತ ಎಂದು ವೈದ್ಯರೂ ಆದ ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ಸಲಹೆ ನೀಡಿದರು. ಬ್ರಹ್ಮಾವರದ ಪ್ರವಾಸಿ ಮಂದಿರವನ್ನೂ ಇದಕ್ಕೆ ಉಪಯೋಗಿಸಿಕೊಳ್ಳಬಹುದು. ಅಗತ್ಯವಿದ್ದರೆ ಬ್ರಹ್ಮಾವರದ ರೋಗಿಗಳನ್ನು ಬಾರಕೂರು, ಕೋಟ ಆಸ್ಪತ್ರೆಗೆ ಶಿಫಾರಸು ಮಾಡಬಹುದು ಎಂದು ಭಟ್‌ ಸಲಹೆ ನೀಡಿದರು.

ಅಕ್ಕಿ, ಬೇಳೆ ವಂಚನೆ
ಲಾಕ್‌ಡೌನ್‌ ಅವಧಿಯಲ್ಲಿ ಬೈಂದೂರು ವ್ಯಾಪ್ತಿಯಲ್ಲಿ ಅಕ್ಷರದಾಸೋಹ ಯೋಜನೆ ಯಡಿ ಅಕ್ಕಿ – ಬೇಳೆ ವಿತರಣೆಯಲ್ಲಿ ಅವ್ಯವಹಾರ ಆಗಿದೆ. ಶಿಕ್ಷಕರ ನಿಯೋಜನೆ ಯಲ್ಲಿ ನಿಯಮ ಮೀರಲಾಗಿದೆ. ಈ ಕುರಿತು ತನಿಖೆ ನಡೆಸಬೇಕೆಂದು ಶಂಕರ ಪೂಜಾರಿ, ಬಾಬು ಶೆಟ್ಟಿ ಆಗ್ರಹಿಸಿದರು. 10 ದಿನಗಳಲ್ಲಿ ವರದಿ ನೀಡುವಂತೆ ಸಿಇಒ ಸೂಚಿಸಿದರು.

ಕೆಲವು ಸಾಮಾಜಿಕ ಪಿಂಚಣಿದಾರರಿಗೆ ದೊರಕಿಲ್ಲ ಎಂದು ಜನಾರ್ದನ ತೋನ್ಸೆ ತಿಳಿಸಿದಾಗ ಖಜಾನೆ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸಭೆಯನ್ನು ನಡೆಸಿ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು ಎಂದು ರಘುಪತಿ ಭಟ್‌ ಸೂಚಿಸಿದರು.

ಜಿ.ಪಂ. ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಶೋಭಾ ಜಿ. ಪುತ್ರನ್‌, ಸುಮಿತ್‌ ಶೆಟ್ಟಿ, ಪ್ರತಾಪ್‌ ಹೆಗ್ಡೆ, ಡಿಎಫ್ಒ ಆಶೀಶ್‌ ರೆಡ್ಡಿ, ಉಪಕಾರ್ಯದರ್ಶಿ ಕಿರಣ್‌ ಪೆಡ್ನ್ ಕರ್‌, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಉಪಸ್ಥಿತರಿದ್ದರು.

ಪ್ರಾಕೃತಿಕ ವಿಕೋಪ: ಅರ್ಜಿಗೆ ಅವಧಿ ವಿಸ್ತರಣೆ
ಆಗಸ್ಟ್‌ನಲ್ಲಿ ಉಂಟಾದ ತೀವ್ರ ಪ್ರಾಕೃತಿಕ ವಿಕೋಪದಿಂದ ನಷ್ಟಕ್ಕೊಳಗಾದವರಿಗೆ ತುರ್ತು ಪರಿಹಾರವಾಗಿ 10,000 ರೂ. ನೀಡಲಾಗುತ್ತಿದೆ. ಶೇ. 90 ಜನರಿಗೆ ಇದು ಲಭಿಸಿದೆ. ಒಂದಿಷ್ಟು ಜನರಿಗೆ ಮಾಹಿತಿ ಕೊರತೆಯಿಂದ ದೊರಕಿಲ್ಲ. ಅಂತಹವರಿಗಾಗಿ ಅರ್ಜಿ ಸಲ್ಲಿಸಲು ನ. 30ರ ವರೆಗೆ ಅವಕಾಶವಿದೆ. ತಹಶೀಲ್ದಾರರು ಮಾಹಿತಿ ನೀಡಿ ಕ್ರಮ ಕೈಗೊಳ್ಳಬೇಕು ಎಂದು ರಘುಪತಿ ಭಟ್‌, ಜನಾರ್ದನ ತೋನ್ಸೆ, ಚಂದ್ರಿಕಾ ಕೇಳ್ಕರ್‌ ತಿಳಿಸಿದರು.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.