ಎರಡು ವರ್ಷ ಕಳೆದರೂ ಮುಗಿಯದ ಸೇತುವೆ ಕೆಲಸ

 6 ಕೋಟಿ ರೂ. ವೆಚ್ಚದ ಜಾರಕುದ್ರು ಸೇತುವೆ

Team Udayavani, Mar 3, 2020, 5:47 AM IST

JARUKUDRU-BRIDGE

ಉದ್ಯಾವರ: ಇಲ್ಲಿನ ಜನರ ಬಹುಬೇಡಿಕೆಯಾದ ಸಂಪರ್ಕ ಸೇತುವೆ ಕಾಮಗಾರಿ ಇದೀಗ ಮೂರನೇ ಮಳೆಗಾಲ ಸಮೀಪಿಸುತ್ತಿದ್ದರೂ ಇನ್ನೂ ಮುಗಿದಿಲ್ಲ ಉದ್ಯಾವರ ಗ್ರಾ.ಪಂ. ವ್ಯಾಪ್ತಿಯ ಪಿತ್ರೋಡಿ -ಜಾರುಕುದ್ರು ಸಂಪರ್ಕ ಸೇತುವೆ ನಮ್ಮ ರಸ್ತೆ ಯೋಜನೆ ಯಡಿ 6 ಕೋಟಿ 54 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಮುಗಿಯಬೇಕಿತ್ತು. ಆದರೆ 2019ರ ಮೇ ಯಲ್ಲೇ ಮಳೆಗಾಲ ನೆಪದಲ್ಲಿ ಕಾಮಗಾರಿ ಸ್ಥಗಿತಗೊಂಡಿದ್ದು ಬಳಿಕ ಕುಂಟುತ್ತಿದೆ.
ಜನವರಿ ಒಳಗೆ ಕಾಮಗಾರಿ ಮುಕ್ತಾಯಕ್ಕೆ ಯೋಜನೆಯಡಿ ಕಾಲಾವಕಾಶ ಇದೆ ಎಂದು ಯೋಜನಾ ವಿಭಾಗದ ಅಧಿಕಾರಿ ರಮೇಶ್‌ ಹೆಚ್‌.ವಿ. ಭರವಸೆ ನೀಡಿದ್ದರು. ಆದರೆ ಕಾಮಗಾರಿ ಪಿಲ್ಲರ್‌ ಹಂತದಿಂದ ಮೇಲೇಳುವುದೂ ನಿಧಾನವಾಗಿದೆ.

ಬವಣೆಗೆ ಮುಕ್ತಿ ಎಂದು ?
ಪಾಪನಾಶಿನಿ ಹೊಳೆಗೆ ಅಡ್ಡಲಾಗಿ ಜಾರುಕುದ್ರುಗೆ ಸಂಪರ್ಕವನ್ನು ಕಲ್ಪಿಸಲು 175 ಮೀಟರ್‌ ಉದ್ದ ಮತ್ತು 7.5 ಮೀಟರ್‌ ಅಗಲದ ಈ ಸೇತುವೆ ನಿರ್ಮಾಣವಾಗುತ್ತಿದೆ. ಈಗ ಅರೆಬರೆ ಕಾಮಗಾರಿಯಿಂದ ಜನರು ಆತಂಕಿತರಾಗಿದ್ದಾರೆ.

ತಾಂತ್ರಿಕ ತೊಂದರೆಗಳಿಂದ ಕಾಮಗಾರಿಗೆ ಅಡ್ಡಿ
ಸೇತುವೆಗೆ ತಲಾ 25 ಮೀಟರ್‌ ಅಂತರದಲ್ಲಿ 6 ಪಿಲ್ಲರ್‌ ಮತ್ತು 2 ಅಪ್ಟಿಟ್ಯೂ ಅಳವಡಿಸಿ, ರಸ್ತೆ ಸಂಪರ್ಕವನ್ನು ಕಲ್ಪಿಸಬೇಕಿತ್ತು. ಪಿಲ್ಲರ್‌ ಅಳವಡಿಸಲು ನದಿಯಾಳದಲ್ಲಿ ಬಂಡೆ ಸಿಗದೆ ತೊಂದರೆ ಅನುಭವಿಸುವಂತಾಗಿತ್ತು. ಮತ್ತೆ ತಂತ್ರಜ್ಞರ ತಾಂತ್ರಿಕ ಸಲಹೆಯಂತೆ ಫೌಂಡೇಶನ್‌ನ್ನು ವೆಲ್‌ಸಿಂಕಿಂಗ್‌ ಮಾದರಿಯಲ್ಲಿ ಪೂರ್ಣಗೊಳಿಸಲಾಗಿದೆ. ಉಳಿದಂತೆ ಗರ್ಡರ್‌ ಮಾಡಿ, ಸ್ಲಾ Âಬ್‌ ಅಳವಡಿಸಿ ಸೇತುವೆಯ ಬಾಕಿ ಉಳಿದ ಕಾರ್ಯ ನಡೆಸಲಾಗುತ್ತದೆ ಎನ್ನಲಾಗಿದೆ.

ಪಡುಕರೆ ಕನಕೋಡದವರಿಗೂ ಸಮಸ್ಯೆ
ಸೇತುವೆ ಪೂರ್ಣಗೊಳ್ಳದ್ದರಿಂದ ಪಡುಕರೆ-ಕನಕೋಡದವರಿಗೂ ಆತಂಕವಿದೆ. ಸಮುದ್ರ-ನದಿ ಮಧ್ಯೆ ಇಲ್ಲಿನ ನಿವಾಸಿಗಳಿದ್ದು ಹಾಕಿದ ಮಣ್ಣಿನಿಂದಾಗಿ ಮಳೆಗಾಲದಲ್ಲಿ ನದಿ ಕೊರೆತದ ಭೀತಿ ಇದೆ. ನದಿ ಪಡುಕರೆ ಭಾಗಕ್ಕೆ ರಭಸವಾಗಿ ಹರಿದು ಮಟ್ಟು ಭಾಗದಿಂದ ಹರಿದು ಬರುವ ಪಿನಾಕಿನಿ ನದಿ ಜತೆ ಸೇರಿ ಹೆಚ್ಚಿನ ಕೊರೆತ ಸಂಭವಿಸುತ್ತದೆ ಎಂದು ನಿವಾಸಿಗಳು ಹೇಳುತ್ತಾರೆ. ಆದರೆ ಸೇತುವೆ ಪೂರ್ಣಗೊಳಿಸದೆ ಮಣ್ಣು ತೆರವು ಮಾಡಿದರೆ ಕುದ್ರುವಿಗೆ ಸಂಪರ್ಕವೇ ಕಡಿಯುವ ಭೀತಿ ಇದೆ.

ಶೀಘ್ರ ನಿರ್ಮಾಣ
ಸಂಪರ್ಕ ಸೇತುವೆ ಕಾಮಗಾರಿ ಕೂಡಲೇ ಪೂರ್ಣಗೊಳಿಸಬೇಕೆಂದು ಶಾಸಕರು, ಎಂಜಿನಿಯರ್‌ ಗಮನಕ್ಕೆ ತರಲಾಗಿದೆ. ತಾಂತ್ರಿಕ ತೊಂದರೆಯನ್ನು ಬಗೆ ಹರಿಸಿಕೊಂಡು ಸೇತುವೆ ಶೀಘ್ರದಲ್ಲಿ ನಿರ್ಮಿಸುವಂತೆ ಸ್ಥಳಕ್ಕೆ ತೆರಳಿ ಪುನಃ ಪರಿಶೀಲನೆಯನ್ನು ನಡೆಸಲಾಗುತ್ತದೆ
-ದಿನಕರ ಬಾಬು, ಅಧ್ಯಕ್ಷ, ಉಡುಪಿ ಜಿ.ಪಂ.

ಗುತ್ತಿಗೆದಾರರಿಗೆ ಸೂಚನೆ
ತಾಂತ್ರಿಕ ತೊಂದರೆಯಿಂದ ಯೋಜನೆಯು ಪೂರ್ಣಗೊಳ್ಳುವಲ್ಲಿ ವಿಳಂಬವಾಗಿದೆ. ಜೂನ್‌ ತಿಂಗಳೊಳಗಾಗಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
-ಸೂರ್ಯನಾರಾಯಣ ಭಟ್‌, ಯೋಜನಾ ವಿಭಾಗದ ತಾಂತ್ರಿಕ ಸಹಾಯಕ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.