ಉದ್ಯಾವರ: ಪಡುಕರೆ ಭಾಗದಲ್ಲಿ ಮುಂದುವರಿದ ಕಡಲ ಅಬ್ಬರ
Team Udayavani, Jun 14, 2019, 6:10 AM IST
ಕಟಪಾಡಿ: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆ ಪರಿಸರದಲ್ಲಿ ಕಡಲಿನ ಅಬ್ಬರವು ಮಂಗಳವಾರವೂ ಮುಂದುವರಿದಿದೆ.
ಕಡಲಿನ ನೀರಿನ ಸೆರೆಯ ಅಬ್ಬರದಿಂದ ಸಮುದ್ರದ ನೀರು ಮಲ್ಪೆ ಸಂಪರ್ಕದ ಪ್ರಮುಖ ರಸ್ತೆಯನ್ನೂ ದಾಟಿದ್ದು, ಶ್ರೀರಾಮಭಕ್ತ ಹನುಮಾನ್ ಭಜನ ಮಂದಿರ ಬಳಿಯ ಮೋಹನ್ ಮೆಂಡನ್, ಕಾವೇರಿ ಸುವರ್ಣ ಎಂಬವರ ಮನೆ ಬಳಿಯಲ್ಲಿ ತೋಟದೊಳಕ್ಕೆ ನುಗ್ಗಿ ಪೂರ್ವ ಪಾರ್ಶ್ವದಲ್ಲಿರುವ ಪಾಪನಾಶಿನಿ ಹೊಳೆಗೆ ಸೇರಿತ್ತು. ರಸ್ತೆಯ ಮೇಲೆಲ್ಲಾ ಮರಳು ತುಂಬಿತ್ತು.
ಈ ಬಗ್ಗೆ ಮಾಹಿತಿ ಪಡೆದ ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಸಂಜೆಯ ವೇಳೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದು ಅಪರ ಜಿಲ್ಲಾಧಿಕಾರಿ ಮತ್ತು ಎ.ಡಿ.ಬಿ. ಎಂಜಿನಿಯರ್ ಅವರೊಂದಿಗೆ ಸುರಕ್ಷತೆಯನ್ನು ಕಲ್ಪಿಸುವಂತೆ ಫೋನ್ ಮೂಲಕ ಸಂಪರ್ಕಿಸಿ ತಿಳಿಸಿರುತ್ತಾರೆ.
ಉಡುಪಿ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನೂ ನಡೆಸಿರುತ್ತಾರೆ.
ಈ ಸಂದರ್ಭ ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಗಣೇಶ್ ಕುಮಾರ್ ಉದ್ಯಾವರ, ಗ್ರಾ.ಪಂ.ಸದಸ್ಯ ರವಿ ಕೋಟ್ಯಾನ್, ಸ್ಥಳೀಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ