ಉದ್ಯಾವರ : ಹೆದ್ದಾರಿಯಲ್ಲಿ ಅಪಾಯಕಾರಿ ಗುಂಡಿ
Team Udayavani, Aug 25, 2018, 11:43 AM IST
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗ್ಯಾಸ್ ಬಂಕ್ ಎದುರುಗಡೆ ಗುಂಡಿ ಕಂಡು ಬರುತ್ತಿದ್ದು, ದ್ವಿಚಕ್ರ ಸವಾರರ ಸಹಿತ ಇತರೇ ವಾಹನ ಚಾಲಕರು ಅಪಾಯವನ್ನು ಎದುರಿಸುವಂತಾಗಿದೆ.ತುಸು ಆಳವಾದ ಹೊಂಡ ಇದಾಗಿದ್ದು, ಹೆದ್ದಾರಿಯ ವಿಭಾಜಕದ ಪಕ್ಕದಲ್ಲಿಯೇ ಇದ್ದು ವಾಹನ ಸವಾರರು ಸರಿಯಾಗಿ ಲೆಕ್ಕಿಸದೆ ಅಪಾಯಕ್ಕೀಡಾಗುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಮಳೆ ಬಂದ ಸಂದರ್ಭ ಈ ಗುಂಡಿಯಲ್ಲಿ ನೀರು ನಿಂತು ರಸ್ತೆ ಯಾವುದು ಹೊಂಡ ಯಾವುದು ಎಂದು ತಿಳಿಯದ ಪರಿಸ್ಥಿತಿ ಇದ್ದು, ಕತ್ತಲಾಗುತ್ತಿದ್ದಂತೆಯೇ ಈ ಭಾಗದಲ್ಲಿ ಸಂಚಾರವು ದುಸ್ತರವಾಗುತ್ತಿದೆ. ಕಳೆದ ಸುಮಾರು 25 ದಿನಗಳಿಂದಲೂ ಈ ಹೆದ್ದಾರಿ ಗುಂಡಿಯು ಬಾಯ್ದೆರೆದಿದ್ದು, ಆ.23ರ ರಾತ್ರಿ ಓರ್ವ ದ್ವಿಚಕ್ರ ಸವಾರ ಈ ಗುಂಡಿಗೆ ಬಿದ್ದಿದ್ದು ತೀವ್ರ ತರಹದ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು.
ಇದೀಗ ಅಪಾಯವನ್ನು ತಡೆಯುವ ನಿಟ್ಟಿನಲ್ಲಿ ಬ್ಯಾರಿಕೇಡನ್ನು ಹೆದ್ದಾರಿ ನಡುವೆ ಇರಿಸಲಾಗಿದ್ದು, ಸ್ವಲ್ಪಮಟ್ಟಿನ ನಿರಾಳತೆ ಕಂಡುಬರುತ್ತದೆ. ಇಷ್ಟೆಲ್ಲಾ ಅಪಾಯಕಾರಿ ಸನ್ನಿವೇಶ ಹೆದ್ದಾರಿಯಲ್ಲಿ ನಿರ್ಮಾಣವಾಗಿದ್ದರೂ ಸಂಬಂಧ ಪಟ್ಟ ಇಲಾಖೆಯು ನಿರ್ವಹಣೆಯನ್ನು ಮಾಡದೆ ಇನ್ನಷ್ಟು ಅಪಾಯವನ್ನು ನಿತ್ಯ ಸವಾರರು ಎದುರಿಸುವಂತಾಗಿದೆ.
ಇಲ್ಲಿನ ಗುಂಡಿ ಸಹಿತ ಹೆದ್ದಾರಿಯ ಇತರೆಡೆಗಳಲ್ಲಿಯೂ ಕಂಡು ಬರುವ ಗುಂಡಿಗಳನ್ನು ಸಂಬಂಧಪಟ್ಟ ಇಲಾಖೆ ಇನ್ನಾದರೂ ಎಚ್ಚೆತ್ತು ಸರಿಪಡಿಸಿ ವಾಹನ ಸವಾರರ ಸುಗಮ ರಸ್ತೆ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್