ಉಜ್ವಲಾ: ಸಮಗ್ರ ಸಮೀಕ್ಷೆಗೆ ಡಿಸಿ ಸೂಚನೆ


Team Udayavani, Jul 10, 2018, 2:49 PM IST

ujwala.jpg

ಉಡುಪಿ: ಕೇಂದ್ರ ಸರಕಾರದ ಅನಿಲ ಸಂಪರ್ಕ “ಉಜ್ವಲಾ’ ಯೋಜನೆಯಡಿ ಅರ್ಹ ಫ‌ಲಾನುಭವಿಗಳಿಗೆ ಸಂಪರ್ಕ ಕಲ್ಪಿಸಲು ಬಾಕಿ ಇರುವವರ ಸಮೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಸೂಚಿಸಿದ್ದಾರೆ. 

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಉಜ್ವಲಾ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಷ್ಟು ಜನರಿಗೆ ಅನಿಲ ಸಂಪರ್ಕ ಕೊಡಲಾಗಿದೆ, ಎಷ್ಟು ಜನರಿಗೆ ಕೊಡಲು ಬಾಕಿ ಇದೆ ಎಂಬ ಕುರಿತು ಮಾಹಿತಿಯನ್ನು ಸಂಗ್ರಹಿಸಿ. ಈ ಸಾಮಾಜಿಕ ಆರ್ಥಿಕ ಸಮೀಕ್ಷೆಯ ವರದಿಯನ್ನು ಜು. 20ರೊಳಗೆ ನೀಡಬೇಕು ಎಂದರು. ಆಹಾರ ಮತ್ತು ನಾಗರಿಕ ಪೂರೈಕೆ ಜಿಲ್ಲಾ ಉಪ ನಿರ್ದೇಶಕರು, ಎಚ್‌ಪಿಸಿಎಲ್‌ ಅಧಿಕಾರಿಗಳು ಉಪಸ್ಥಿತರಿದ್ದರು. 

ಅನಿಲ ಸಂಪರ್ಕದಲ್ಲಿ ಅವ್ಯವಹಾರ ನಡೆದ ಕುರಿತು ಜಿಲ್ಲಾಧಿಕಾರಿಯವರ ಪ್ರತಿಕ್ರಿಯೆ ಕೇಳಿದಾಗ, ಎಚ್‌ಪಿಸಿಎಲ್‌ ನೋಡಲ್‌ ಅಧಿಕಾರಿಗಳು ಇದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದರು. 

ಪರಿಶಿಷ್ಟ ಜಾತಿ- ಪಂಗಡ, ಎಎವೈ (ಅಂತ್ಯೋದಯ, ಅನ್ನ ಯೋಜನೆ) ಫ‌ಲಾನುಭವಿಗಳಿಗೆ ಉಚಿತವಾಗಿ ಅನಿಲ ಸಿಲಿಂಡರ್‌ ಸಂಪರ್ಕವನ್ನು ಕೊಡುತ್ತಿದ್ದೇವೆ. ಈ ವರ್ಗದವರು ಸಮೀಪದ ಅನಿಲ ವಿತರಕರಿಂದ ಸಂಪರ್ಕವನ್ನು ಪಡೆಯಬಹುದು. ಮುಂದಿನ ದಿನಗಳಲ್ಲಿ ಬಿಪಿಎಲ್‌ ಕಾರ್ಡುದಾರರಿಗೂ ಅವಕಾಶ ಸಿಗುವ ಸಾಧ್ಯತೆ ಇದೆ. ದೇಶದಲ್ಲಿ ಒಟ್ಟು 4.5 ಕೋಟಿ ಜನರಿಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ. ಇನ್ನು 3.5 ಕೋಟಿ ಜನರಿಗೆ ನೀಡಬೇಕಾಗಿದೆ ಎಂದು ಎಚ್‌ಪಿಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಚುರುಕುಗೊಂಡ ತನಿಖೆ
ಬೈಂದೂರು:
ಉಡುಪಿ ಜಿಲ್ಲೆಯಲ್ಲಿ ನಡೆದ ಉಜ್ವಲಾ ಗೋಲ್‌ಮಾಲ್‌ ಹಗರಣ ಕುರಿತಂತೆ ಕೇಂದ್ರ ಪೆಟ್ರೋಲಿಯಂ ಇಲಾಖೆಯ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಾದ ಉಜ್ವಲಾ ಅಡುಗೆ ಅನಿಲ ವಿತರಣೆಯಲ್ಲಿ ಲೋಪ ನಡೆದಿರುವುದು ಬಹುತೇಕ ಸಾಬೀತುಗೊಂಡಿದೆ. ರಾಜ್ಯದ ವಿವಿಧ ಕಡೆ ಈ ಪ್ರಕರಣ ನಡೆದಿರುವುದು ಕೂಡ ಸಾಬೀತಾಗಿದೆ.

ಬೈಂದೂರು ತಾಲೂಕಿನಲ್ಲಿ ಉಜ್ವಲಾ ವಿತರಣೆಯಲ್ಲಿ ಗೋಲ್‌ಮಾಲ್‌ ನಡೆದಿರುವ ಕುರಿತು “ಉದಯವಾಣಿ’ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕೇಂದ್ರ ಸರಕಾರದ ನೋಡಲ್‌ ಅಧಿಕಾರಿಗಳಿಗೆ ನೋಟಿಸ್‌ ನೀಡಿದ್ದರು. ಈಗಾಗಲೇ ತನಿಖೆ ಚುರುಕುಗೊಳಿಸಿದ ಅಧಿಕಾರಿಗಳು ವಿತರಣೆಯಾದ ಗ್ಯಾಸ್‌ ಸಂಪರ್ಕಗಳ ಸಮಗ್ರ ವಿವರ ಪಡೆದು ವರದಿ ನೀಡಲಿದ್ದಾರೆ. ಒಂದೊಮ್ಮೆ ಪ್ರಕರಣ ಸಾಬೀತಾದರೆ ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ದಾಖಲೆಗಳ ಪರಿಶೀಲನೆ
ಬ್ರಹ್ಮಾವರ:
ಕೇಂದ್ರ ಸರಕಾರದ ಉಜ್ವಲಾ ಯೋಜನೆ ಸಂಪರ್ಕ ಉಡುಪಿ ಜಿಲ್ಲೆಯಲ್ಲಿ ರಾಂಗ್‌ ಕನೆಕ್ಷನ್‌ ಆಗಿದ್ದ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ. ಮೂವರು ಅಧಿಕಾರಿಗಳ ತಂಡ ಬ್ರಹ್ಮಾವರದ ಗ್ಯಾಸ್‌ ವಿತರಕ ಏಜೆನ್ಸಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿತು. 3,900 ಸಂಪರ್ಕಗಳಲ್ಲಿ ಸೋಮವಾರದ ತನಕ ಸುಮಾರು 3,000 ದಾಖಲೆಗಳ ಪರಿಶೀಲನೆ ನಡೆದಿದೆ. ಫಲಾನುಭವಿಗಳ ಆಧಾರ್‌, ಮೊಬೈಲ್‌, ಬ್ಯಾಂಕ್‌ ಖಾತೆ ಸಂಖ್ಯೆಗಳ ಸತ್ಯಾಸತ್ಯತೆ ತಿಳಿಯಲಾಗುತ್ತಿದೆ. ಟಿನ್‌ ನಂಬರ್‌ ತುಲನೆ ಮಾಡಲಾಗುತ್ತಿದೆ. ಕಂಪ್ಯೂಟರ್‌ ದಾಖಲೆಗಳನ್ನು ಪರಿಶೀಲಿಸಿ, ಸಂಶಯವಿರುವ ಮಾಹಿತಿಗಳ ನಕಲು ಪ್ರತಿ ಪಡೆಯಲಾಗಿದೆ. ಬ್ರಹ್ಮಾವರದ ಏಜೆನ್ಸಿಯಲ್ಲಿ ಪರಿಶೀಲನೆ ಮಂಗಳವಾರ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.