Ullal ಅಂತಾರಾಜ್ಯ ಸ್ಪಿರಿಟ್‌ ಮಾರಾಟ ದಂಧೆ ಪತ್ತೆ: ಮೂವರು ವಶಕ್ಕೆ, ಓರ್ವ ಪರಾರಿ

ಲಕ್ಷಾಂತರ ಬೆಲೆಯ ಸ್ಪಿರಿಟ್‌, ಕಾರು, ನಕಲಿ ಸಾರಾಯಿ ವಶಕ್ಕೆ

Team Udayavani, Dec 13, 2023, 11:14 PM IST

Ullal ಅಂತಾರಾಜ್ಯ ಸ್ಪಿರಿಟ್‌ ಮಾರಾಟ ದಂಧೆ ಪತ್ತೆ: ಮೂವರು ವಶಕ್ಕೆ, ಓರ್ವ ಪರಾರಿ

ಉಳ್ಳಾಲ: ಕರ್ನಾಟಕ – ಕೇರಳ ಗಡಿಭಾಗದ ತಲಪಾಡಿ ಮತ್ತು ಕಿನ್ಯಾ ಗ್ರಾಮದ ಸಾಂತ್ಯದಲ್ಲಿ ಅಕ್ರಮವಾಗಿ ಸ್ಪಿರಿಟ್‌ ದಾಸ್ತಾನು ಮಾಡಿ ಕೇರಳ ಭಾಗಕ್ಕೆ ಸಾಗಾಟ ನಡೆಸುತ್ತಿದ್ದ ಬೃಹತ್‌ ಸ್ಪಿರಿಟ್‌ ಮತ್ತು ನಕಲಿ ಸಾರಾಯಿ ಜಾಲವನ್ನು ಅಬಕಾರಿ ಇಲಾಖೆ ಪತ್ತೆ ಹಚ್ಚಿದೆ.

ಮಂಗಳೂರು ವಿಭಾಗ ಉಪ ಆಯುಕ್ತ ಟಿ.ಎಂ. ಶ್ರೀನಿವಾಸ್‌ ನೇತೃತ್ವದ ತಂಡವು 2,450 ಲೀ. ಸ್ಪಿರಿಟ್‌, 242 ಲೀ. ನಕಲಿ ಬ್ರಾಂಡಿ, 2..34 ಲೀ. ಪ್ರಸ್ಟೀಜ್‌ ವಿಸ್ಕಿ ಸೇರಿದಂತೆ ಸಾರಾಯಿ ಪ್ಯಾಂಕಿಂಗ್‌ ಯಂತ್ರ, ಸಾಗಾಟಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ವಶಕ್ಕ ಪಡೆದುಕೊಂಡಿದ್ದು, ಮೂವರನ್ನು ಬಂಧಿಸಿದೆ. ಇಬ್ಬರ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಿನ್ಯಾ ಗ್ರಾ.ಪಂ. ವ್ಯಾಪ್ತಿಯ ಸಾಂತ್ಯದ ಮನೆಯಿಂದ 2,240 ಲೀ. ಮದ್ಯ ಸಾರ, 222 ಲೀ. ನಕಲಿ ಬ್ರಾಂಡಿ ಹಾಗೂ ನಕಲಿ ಸಾರಾಯಿ ಪ್ಯಾಕಿಂಗ್‌ ನಡೆಸುತ್ತಿದ್ದ ಯಂತ್ರವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿ ನಿತ್ಯಾನಂದ ಭಂಡಾರಿ ತಲೆಮರೆಸಿಕೊಂಡಿದ್ದಾನೆ. ತಲಪಾಡಿ ಮಸೀದಿ ಬಳಿಯ ಮನೆಯೊಂದರಿಂದ 210 ಲೀ. ಸ್ಪಿರಿಟ್‌ 20ಲೀ. ನಕಲಿ ಬ್ರಾಂಡಿ, 2.34 ಲೀ. ನಕಲಿ ಪ್ರಸ್ಟೀಜ್‌ ವಿಸ್ಕಿ, ಇನೋವಾ ಕಾರು ಸಹಿತ ಅದರೊಳಗಿದ್ದ 70 ಲೀ. ಸ್ಪಿರಿಟ್‌ ವಶಕ್ಕೆ ಪಡೆಯಲಾಗಿದೆ. ಸತೀಶ್‌ ತಲಪಾಡಿ, ಕುಂಜತ್ತೂರಿನ ನೌಷಾದ್‌ ಹಾಗೂ ಅನ್ಸಿಫ್‌ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಮುಖ ಆರೋಪಿ ಮಂಜೇಶ್ವರ ಕುಂಜತ್ತೂರು ನಿವಾಸಿ ಆನ್ನು ಯಾನೆ ಅರವಿಂದನ ಪತ್ತೆಗೆ ಕರ್ನಾಟಕದ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಕೇರಳದ ಅಬಕಾರಿ ಇಲಾಖೆಯ ಸಹಯೋಗದೊಂದಿಗೆ ದಾಳಿ ನಡೆಸಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ನಿತ್ಯಾನಂದ ಮತ್ತು ಅರವಿಂದನ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.

ಕುಂಜತ್ತೂರು ಸಂಪರ್ಕ
ಸಾಂತ್ಯದಲ್ಲಿ ನಿತ್ಯಾನಂದ ಮತ್ತು ತಲಪಾಡಿಯ ಸತೀಶ್‌ ಅಕ್ರಮ ಅಡ್ಡೆಯ ಪ್ರಮುಖ ರೂವಾರಿ ಕುಂಜತ್ತೂರು ನಿವಾಸಿ ಅನ್ನು ಯಾನೆ ಅರವಿಂದ್‌ ಎಂಬಾತನಾಗಿದ್ದು, ಆತನ ವಿರುದ್ಧ ಕರ್ನಾಟಕ ಮತ್ತು ಕೇರಳದಲ್ಲಿ ಅನೇಕ ಪ್ರಕರಣಗಳು ದಾಖಲಾಗಿವೆ. 9 ಪ್ರಕರಣಗಳು ತನಿಖೆಯ ಹಂತದಲ್ಲಿವೆ. ಕುಂಜತ್ತೂರು ಪ್ರದೇಶ ಅಕ್ರಮ ದಾಸ್ತನಿಗೆ ಅವಕಾಶವಿರದ ಕಾರಣ ತಲಪಾಡಿ ಮತ್ತು ಸಾಂತ್ಯದಲ್ಲಿ ಈ ಚಟುವಟಿಕೆ ಅರವಿಂದ್‌ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದು, ಅಲ್ಲಿಂದ ನಕಲಿ ಸಾರಾಯಿಯನ್ನು ಕಾಸರಗೋಡು ಜಿಲ್ಲೆಯ ವಿವಿಧೆಡೆಗೆ ಏಜೆಂಟ್‌ಗಳ ಮೂಲಕ ಸಾಗಾಟ ಮಾಡುತ್ತಿದ್ದರು.

ಬುಧವಾರ ಮಂಗಳೂರು ವಿಭಾಗದ ಅಬಕಾರಿ ಅಧಿಕಾರಿಗಳ ತಂಡ ಕಾಸರಗೋಡು ಜಿಲ್ಲೆಯ ಅಬಕಾರಿ ಇಲಾಖೆಯ ತಂಡದೊಂದಿಗೆ ಅರವಿಂದನ ಮನೆಗೆ ದಾಳಿ ನಡೆಸಿದ್ದು, ಆರೋಪಿ ಮನೆಯಿಂದ ಹೊರಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಅರವಿಂದ ವಿದೇಶಕ್ಕೆ ತೆರಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಪ ಆಯುಕ್ತ ಟಿ.ಎಂ. ಶ್ರೀನಿವಾಸ ಮಾತನಾಡಿ, ಅಧಿಕಾರ ಸ್ವೀಕರಿಸಿದ 2 ತಿಂಗಳ ಅವಧಿಯಲ್ಲಿ ಇದು ಬೃಹತ ದಾಳಿಯಾಗಿದ್ದು, ಅಕ್ರಮ ಸ್ಪಿರಿಟ್‌ ಸೇರಿದಂತೆ ನಕಲಿ ಸಾರಾಯಿ ಮಾರಾಟದ ಮೇಲೆ ನಿಗಾ ವಹಿಸಿದ್ದು, ಈ ಪ್ರಕರಣದ ಹಿಂದೆ ಇರುವ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.

ಅಬಕಾರಿ ಮಂಗಳೂರು ವಿಭಾಗದ ಜಂಟಿ ಆಯುಕ್ತ ನಾಗರಾಜಪ್ಪ ಟಿ., ಉಪ ಆಯುಕ್ತ ಟಿ.ಎಂ. ಶ್ರೀನಿವಾಸ ಮಾರ್ಗದರ್ಶನದಲ್ಲಿ ಉಪಅಧೀಕ್ಷಕ ಸೈಯ್ಯದ್‌ ತಫಿjàಲುಲ್ಲಾ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ದಕ್ಷಿಣ ವಲಯ-2 ಅಬಕಾರಿ ಇಲಾಖೆ ನಿರೀಕ್ಷಕಿ ಕಮಲಾ ಎಚ್‌.ಎನ್‌. ಉಪ ನಿರೀಕ್ಷಕರಾದ ಅಶೀಷ್‌, ಉಮೇಶ್‌, ಉಪ ವಿಭಾಗ 2 ಮಂಗಳೂರು ದಕ್ಷಿಣ ವಲಯ 1 ಮತ್ತು ಪೂರ್ವ ವಲಯ 1ರ ಅಬಕಾರಿ ಇಲಾಖೆಯ ಸಿಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.