“ಏಕರೂಪ ಶಿಕ್ಷಣ ನೀತಿಯಲ್ಲೂ ವಿಚಾರ ಭೇದ’


Team Udayavani, Jan 14, 2020, 6:05 AM IST

ekaroopa

ಉಡುಪಿ: ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ವಿಚಾರದಲ್ಲಿಯೂ ಸಾಕಷ್ಟು ವಿಚಾರ ಭೇದಗಳಿವೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಗೆ ಸೋಮ ವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಇಂಗ್ಲಿಷ್‌ ಇಲ್ಲ ಎಂಬ ಕಾರಣಕ್ಕಾಗಿ ಸರಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಎಂಬ ವಾದ ಸರಿಯಲ್ಲ. ಅದಕ್ಕೆ ಬೇರೆ ಬೇರೆ ಕಾರಣಗಳು ಕೂಡ ಇವೆ. ಸರಕಾರ ಈಗ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಬೇಕೆಂಬ ಉದ್ದೇಶವನ್ನು ಹೊಂದಿದೆ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಹಲವರು ಕಾಯುತ್ತಿರುವುದರಿಂದ ಅದನ್ನು ಯಾವ ರೀತಿ ಮಾಡಬೇಕೆಂಬ ಬಗ್ಗೆ ಯೋಚನೆ ಮಾಡಲಾಗಿದೆ ಎಂದು ಅವರು ಹೇಳಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ. ರಘುಪತಿ ಭಟ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಮುಖಂಡರಾದ ಪ್ರಭಾಕರ ಪೂಜಾರಿ, ಸಂಧ್ಯಾ ರಮೇಶ್‌ ಉಪಸ್ಥಿತರಿದ್ದರು. ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪ್ರಸ್ತಾವನೆಗೈದರು. ಸುರೇಶ್‌ ನಾಯಕ್‌ ಸ್ವಾಗತಿಸಿದರು. ಕುತ್ಯಾರ್‌ ನವೀನ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

“ಪಕ್ಕೆಲುಬು’ ಶಿಕ್ಷಕನ ಅಮಾನತು:
ಹೊರಗೆ ಶ್ಲಾಘನೆ, ಊರಿನಲ್ಲಿ ವಿರೋಧ! ಮಕ್ಕಳ ನ್ಯೂನತೆ ಮತ್ತು ಕೊರತೆಗಳನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು ಅಕ್ಷಮ್ಯ. ಶಾಲಾ ಅವಧಿಯಲ್ಲಿ ಶಿಕ್ಷಕರು ಮೊಬೈಲ್‌ ಬಳಕೆ ಮಾಡಬಾರದು ಎಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಿದ ಸುರೇಶ ಕುಮಾರ್‌, ಉತ್ತರ ಕರ್ನಾಟಕದ ಶಾಲೆಯೊಂದರಲ್ಲಿ “ಪಕ್ಕೆಲುಬು’ ಪ್ರಕರಣದ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿರುವ ಶಿಕ್ಷಕನನ್ನು ಅಮಾನತುಗೊಳಿಸಿರುವ ಬಗ್ಗೆ ಎಲ್ಲೆಡೆಗಳಿಂದ ಮೆಚ್ಚುಗೆ ವ್ಯಕ್ತವಾದರೆ ಅಲ್ಲಿನ ಗ್ರಾಮಸ್ಥರು ಮಾತ್ರ ಪ್ರತಿಭಟಿಸುತ್ತಿದ್ದಾರೆ. ಅಮಾನತು ಆದೇಶ ಹಿಂಪಡೆಯದಿದ್ದರೆ ಶಾಲೆ ತೆರೆಯಲು ಬಿಡುವುದಿಲ್ಲ ಎಂದು ಧರಣಿ ನಡೆಸುತ್ತಿದ್ದಾರೆ. ಇದೊಂದು ವಿಚಿತ್ರ ಸನ್ನಿವೇಶ ಎಂದರು.

ಅಂಗನವಾಡಿಗಳಿಗೆ ತೊಂದರೆ ಇಲ್ಲ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುವುದರಿಂದ ಅಂಗನವಾಡಿ ಗಳಿಗೆ ತೊಂದರೆ ಆಗದು. ಅಂಗನವಾಡಿ ನೌಕರರ ಕೆಲಸ ಪೌಷ್ಟಿಕ ಆಹಾರ ಕೊಡುವುದಾದರೆ, ಎಲ್‌ಕೆಜಿ ಯುಕೆಜಿ ಕೆಲಸ ಶಿಕ್ಷಣ ನೀಡುವುದಾಗಿದೆ ಎಂದರು.

ಸಚಿವರು ಏನೆಂದರು?
– ನಾವು ಎಲ್‌ಕೆಜಿ, ಯುಕೆಜಿ ಆರಂಭಿಸದಿದ್ದರೆ ಸರಕಾರಿ ಶಾಲೆಗಳಿಗೆ ಮಕ್ಕಳೇ ಬರುವುದಿಲ್ಲ. ಇದು ಮಕ್ಕಳನ್ನು ಆಕರ್ಷಿಸುವ ತಾಣ.
– ಒಂದನೇ ತರಗತಿಯಿಂದ ನೀಡುವ ನಲಿಕಲಿ ಪಾಠವನ್ನು ಎಲ್‌ಕೆಜಿ, ಯುಕೆಜಿಯಲ್ಲೂ ಆರಂಭಿಸಲು ತರಬೇತಿ ಪಡೆದ ಶಿಕ್ಷಕರ ಅಗತ್ಯವಿದೆ. ಆ ರೀತಿ ತರಬೇತಿಯನ್ನು ಅಂಗನವಾಡಿ ನೌಕರರಿಗೆ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಾಧ್ಯವೇ ಎಂಬ ಬಗ್ಗೆ ಚರ್ಚಿಸಲಾಗುವುದು.
– ಶಾಲಾ ಕಟ್ಟಡ, ಕಲಿಕೆಯ ಗುಣಮಟ್ಟ ಹೆಚ್ಚಿಸುವ ಮೂಲಕ ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಆಂಗ್ಲ ಮಾಧ್ಯಮ ಶಾಲೆ ಹೆಚ್ಚಿಸಲು ನಿರ್ಧರಿಸಿಲ್ಲ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.