ಜರ್ಮನಿ ಮಿಷನರಿಗಳಿಂದ ಸ್ಥಾಪಿತ ಜಿಲ್ಲೆಯ ಮೊದಲ ಶಾಲೆಗೆ 164ರ ಸಂಭ್ರಮ

ಯುನೈಟೆಡ್‌ ಬಾಸೆಲ್‌ ಮಿಷನರೀಸ್‌ ಚರ್ಚ್‌ ಕನ್ನಡ ಶಾಲೆ

Team Udayavani, Nov 15, 2019, 5:37 AM IST

11515040IMG-20191106-WA0019

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಉಡುಪಿ: ಜರ್ಮನಿ ಮಿಷನರೀಸ್‌ಗಳಿಂದ ಸ್ಥಾಪಿತ ಹಾಗೂ ಜಿಲ್ಲೆಯಲ್ಲಿ ಶಿಕ್ಷಣದ ಕ್ರಾಂತಿ ಮೂಡಿಸಿದ ಮೊದಲ ಕನ್ನಡ ಶಾಲೆ ಯೂನೈಟೆಡ್‌ ಬಾಸೆಲ್‌ ಮಿಷನರೀಸ್‌ಗೆ 164 ವರ್ಷದ ಸಂಭ್ರಮ. ಈ ಶಾಲೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಜ್ಞಾನದ ಜತೆಗೆ ಬದುಕು ರೂಪಿಸಿಕೊಟ್ಟಿದೆ.

ಯೂನೈಟೆಡ್‌ ಬಾಸೆಲ್‌ ಮಿಷನರೀಸ್‌ ಚರ್ಚ್‌ ಕನ್ನಡ ಮಾಧ್ಯಮ ಶಾಲೆ ಜಿಲ್ಲೆಯ ಮೊದಲ ಶಾಲೆ. ಜರ್ಮನಿಯ ಕ್ರೈಸ್ತ ಮಿಷನರಿಗಳು ಧರ್ಮ ಪ್ರಚಾರಕ್ಕೆ ಉಡುಪಿಗೆ ಬಂದ ಸಮಯದಲ್ಲಿ ಜನರಲ್ಲಿ ಶಿಕ್ಷಣದ ಅರಿವು ಇರಲಿಲ್ಲ. ಸ್ಥಳೀಯರಿಗೆ ಶಿಕ್ಷಣದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ 1855ರಲ್ಲಿ ಮಿಷನರಿಗಳು ಶಾಲೆಯನ್ನು ಪ್ರಾರಂಭಿಸಿದರು. ಆ ಸಮಯದಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಬದುಕು ರೂಪಿಸಲು ಅಗತ್ಯವಿರುವ ವೃತ್ತಿಪರ ತರಬೇತಿಯನ್ನು ಸಹ ನೀಡುತ್ತಿದ್ದರು.

1892ರಲ್ಲಿ ಸರಕಾರದ ಮಾನ್ಯತೆ
1855ರಲ್ಲಿ ಸಣ್ಣ ಕಟ್ಟಡದಲ್ಲಿ ಪ್ರಾರಂಭಗೊಂಡ ಶಾಲೆ 1863ರಲ್ಲಿ ವಿಶಾಲವಾದ ಹೊಸ ಕಟ್ಟಡವನ್ನು ನಿರ್ಮಿಸಿದ್ದರು. ಬ್ರಿಟಿಷ್‌ ಸರಕಾರ 1892ರಲ್ಲಿ ಶಾಲೆಗೆ ಮಾನ್ಯತೆ ನೀಡಿದ್ದು, 1907ರಲ್ಲಿ 5ರಿಂದ 7 ತರಗತಿ ಪ್ರಾರಂಭಗೊಂಡಿತ್ತು. 1914ರ ಬಳಿಕ ವಿವಿಧ ಕಾರಣಗಳಿಂದ ವೃತ್ತಿಪರ ತರಬೇತಿ ಕೇಂದ್ರ ಮುಚ್ಚಲಾಯಿತು.

ಹಲವು ಪ್ರದೇಶದ ಜನರಿಗೆ ಶಿಕ್ಷಣ ನೀಡಿದ ಶಾಲೆ
ಆ ಕಾಲದಲ್ಲಿ ಉದ್ಯಾವರ, ಕೊಡವೂರು, ಮಲ್ಪೆ, ಅಂಬಲಪಾಡಿ, ಅಂಬಾಗಿಲು, ಅಲೆವೂರು, ಕೊರಂಗರಪಾಡಿ ಸೇರಿದಂತೆ ವಿವಿಧ ಪ್ರದೇಶದವರು ಇಲ್ಲಿ ಶಿಕ್ಷಣ ಪಡೆಯುತ್ತಿದ್ದರು. ಶಾಲೆಯ ಮೊದಲ ಮುಖ್ಯೋಪಾಧ್ಯಾಯರಾಗಿ ಆಲ್ಬರ್ಟ್‌ ಸೇವೆ ಸಲ್ಲಿಸಿದ್ದಾರೆ. ಕುವೆಂಪು ವಿವಿ ಕುಲಪತಿ ಜೆ.ಎಸ್‌. ಶೇರಿಗಾರ್‌ ಅವರು ಶಾಲೆಯ ಹಳೆವಿದ್ಯಾರ್ಥಿಯಾಗಿದ್ದಾರೆ.

1,000 ವಿದ್ಯಾರ್ಥಿಗಳು
1980ರ ವರೆಗೆ ಶಾಲೆಯಲ್ಲಿ 14ಮಂದಿ ಸರಕಾರಿ ಶಿಕ್ಷಕರು ಇದ್ದರು. ಸುಮಾರು 1,000 ವಿದ್ಯಾರ್ಥಿಗಳು ಪ್ರತಿವರ್ಷ ಶಿಕ್ಷಣವನ್ನು ಪಡೆಯುತ್ತಿದ್ದರು. ಪ್ರಸ್ತುತ 126 ವಿದ್ಯಾರ್ಥಿಗಳು, ಸರಕಾರದ 2 ಶಿಕ್ಷಕರು ಹಾಗೂ ಆಡಳಿತ ಮಂಡಳಿಯಿಂದ ನೇಮಕಗೊಂಡ 5 ಶಿಕ್ಷಕರು ಇದ್ದಾರೆ. ಈ ಶಾಲೆ ಇನ್ನೊಂದು ವಿಶೇಷವೆಂದರೆ ಅನಾಥ ಮಕ್ಕಳಿಗೆ ಈ ಶಾಲೆಯಲ್ಲಿ ಶಿಕ್ಷಣ ನೀಡುವುದರ ಜತೆಗೆ ವಸತಿ ಸೌಕರ್ಯ ನೀಡಲಾಗುತ್ತಿತ್ತು. ಆ ವ್ಯವಸ್ಥೆ ಇಂದಿಗೂ ಜೀವಂತವಾಗಿದೆ.

ಅಜ್ಜಿ, ಅಮ್ಮ ನಾನು ಇದೇ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದುಕೊಂಡಿದ್ದೇವೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರು ಮಾಡಿದೆ. ಈ ಶಾಲೆಯ ಹಳೆಯ ವಿದ್ಯಾರ್ಥಿಗಳು ಇಂದು ಉನ್ನತ ಹುದ್ದೆಯಲ್ಲಿ ಇದ್ದಾರೆ. ಜಿಲ್ಲೆಯಲ್ಲಿ ಮೊದಲ ವಿದ್ಯಾದೇಗುಲ ಎನ್ನುವ ಶಾಲೆಯಲ್ಲಿ ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ.
-ಪಲ್ಲವಿ,ಹಳೆ ವಿದ್ಯಾರ್ಥಿ

ಜರ್ಮನಿ ಮಿಷನರೀಸ್‌ನಿಂದ ಸ್ಥಾಪಿತ ಈ ಕನ್ನಡ ಮಾಧ್ಯಮ ಶಾಲೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದೆ. ಹಳೆಯ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಇದ್ದಾರೆ.
-ಓಫಿಲಿಯ ಸುವಾಸಿನಿ,
ಮುಖ್ಯೋಪಾಧ್ಯಾಯಿನಿ.

- ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.