ಬಿಡುಗಡೆಯಾಗದ ಹಣ: ಆಶ್ರಯ ಯೋಜನೆ ಮನೆಗಳು ಅಪೂರ್ಣ


Team Udayavani, Oct 10, 2019, 5:32 AM IST

BIDUGADEYADA-HANA

ಹೆಬ್ರಿ: ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದ ಆಶ್ರಯ ಯೋಜನೆಯಡಿಯಲ್ಲಿ ಮಂಜೂರಾದ ಮನೆಗಳು ಪೂರ್ಣಗೊಳ್ಳದೆ ಊಟಕ್ಕೆ ಇಲ್ಲದ ಉಪ್ಪಿನ ಕಾಯಿಯಂತಾಗಿವೆ.

ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಮಂಜೂರಾದ ಹೆಚ್ಚಿನ ಮನೆಗಳಿಗೆ ಎರಡು ವರ್ಷ ಕಳೆದರೂ ಪೂರ್ಣ ಪ್ರಮಾಣದ ಹಣ ಬಿಡುಗಡೆಯಾಗದೆ ಫ‌ಲಾನುಭವಿಗಳು ಸಂಕಷ್ಟದಲ್ಲಿದ್ದಾರೆ. ಕೆಲವರು ಮನೆ ಕಟ್ಟಲು ಅಡಿಪಾಯ ಹಾಕಿ ವರ್ಷವೇ ಕಳದಿದೆ. ಇನ್ನು ಕೆಲವರು ಗೋಡೆ ಆಗಿ ಮುಂದಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಕುಚ್ಚಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಫ‌ಲಾನುಭವಿಯೋರ್ವರಿಗೆ ಮನೆಗೆ ಅನುದಾನ ಬಿಡುಗಡೆಯಾಗಿ 2 ವರ್ಷವಾದರೂ ಇನ್ನೂ ಹಣ ಬಂದಿಲ್ಲ. ಮೊದಲ ಕಂತು ಬಂತು ಎಂದು ಪಂಚಾಂಗ ಹಾಕಿದರು. ಆದರೆ ಮುಂದಿನ ಹಣ ಬಾರದೆ ವಾಸಿಸಲು ಮನೆಯೂ ಇಲ್ಲದೆ ಪಂಚಾಂಗದ ಸಮೀಪ ಶೆಡ್‌ವೊಂದನ್ನು ಕಟ್ಟಿಕೊಂಡು ಕಳೆದ ಒಂದು ವರ್ಷದಿಂದ ವಾಸಿಸುತ್ತಿದ್ದಾರೆ. ಕೆಲವರಿಗೆ ಮೊದಲ ಕಂತಿನ ಹಣ ಮಾತ್ರ ಬಿಡುಗಡೆಯಾಗಿದ್ದು, ಉಳಿದ ಕಂತುಗಳು ಬಿಡುಗಡೆಯಾಗಿಲ್ಲ.

ಮನೆ ಕಟ್ಟಿದರೆ ಸಮಸ್ಯೆ
ಆಶ್ರಯ ಯೋಜನೆ ಜಿ.ಪಿ.ಎಸ್‌. ಆಧಾರಿತ ಭೌತಿಕ ಪ್ರಗತಿ ಪರಿಶೀಲಿಸಿ ಹಣ ಬಿಡುಗಡೆಯಾಗುವುದರಿಂದ ಪ್ರತಿಯೊಂದು ಹಂತದ ಕಾಮಗಾರಿಯನ್ನು ನೋಡಿ ಅದರ ಪ್ರಕಾರ ಹಣ ಬಿಡುಗಡೆ ಮಾಡಲಾಗುತ್ತದೆ. ಒಂದು ವೇಳೆ ಹಣ ಮತ್ತೆ ಪಡೆಯುತ್ತೇನೆ ಎಂದು ಸಾಲ ಮಾಡಿ ಮನೆ ಮುಂದುವರಿಸಿದರೆ ಆಶ್ರಯ ಯೋಜನೆಯಲ್ಲಿ ಬರುವ ಹಣ ಬರುವುದಿಲ್ಲ. ಈ ಕಾರಣದಿಂದ ಹೆಚ್ಚಿನವರು ಪಂಚಾಂಗ, ಗೋಡೆ ನಿರ್ಮಿಸಿ ಮುಂದಿನ ಹಣಬಿಡುಗಡೆಗೆ ಕಾಯುತ್ತಿದ್ದಾರೆ.

ಎಲ್ಲೆಲ್ಲಿ ಸಮಸ್ಯೆ?
ಹೆಬ್ರಿ ತಾಲೂಕಿನ ಕುಚ್ಚಾರು ಗ್ರಾ.ಪಂ. ವ್ಯಾಪ್ತಿಯಲ್ಲಿ 2017- 18ನೇ ಸಾಲಿನಲ್ಲಿ ಒಟ್ಟು 61 ಮನೆಗಳಿಗೆ ಅನುದಾನ ಬಿಡುಗಡೆಯಾಗಿದ್ದು ಅದರಲ್ಲಿ 21ಮನೆಗಳು ಪೂರ್ಣಗೊಂಡಿವೆ. 40 ಮನೆಗಳು ಬಾಕಿ ಇವೆ. ಇದರಲ್ಲಿ ಅರಣ್ಯ ಅಥವಾ ಬೇರೆ ಬೇರೆ ಕಾರಣಗಳಿಂದ 17 ಮನೆಗಳ ಅರ್ಜಿಗಳು ತಿರಸ್ಕೃತಗೊಂಡಿದ್ದು, 23ಮನೆಗಳು ಅರ್ಧದಲ್ಲಿ ನಿಂತಿವೆ.

ಶಿವಪುರ ಪಂಚಾಯತ್‌ ವ್ಯಾಪ್ತಿಯಲ್ಲಿ ಹಿಂದಿನ ಬಾರಿಯೇ ಹಲವು ಮನೆಗಳು ಅರ್ಧದಲ್ಲಿ ನಿಂತಿದ್ದು 2017-18ನೇ ಸಾಲಿನಲ್ಲಿ ಸುಮಾರು 10 ಮನೆಗಳು ಅಪೂರ್ಣವಾಗಿವೆ. ನಾಡಾ³ಲು ಗ್ರಾ.ಪಂ. ವ್ಯಾಪ್ತಿಯಲ್ಲಿ 2017-18ನೇ ಸಾಲಿನಲ್ಲಿ ಬಿಡುಗಡೆಯಾದ ಒಟ್ಟು 12 ಮನೆಗಳಲ್ಲಿ 6 ಮನೆಗಳು ಪೂರ್ಣಗೊಂಡು 2 ಮನೆಗಳು ತಿರಸ್ಕೃತಗೊಂಡು 4 ಮನೆಗಳು ಬಾಕಿ ಇವೆ. ಹೆಬ್ರಿ ಗ್ರಾ.ಪಂ.

ವ್ಯಾಪ್ತಿಯಲ್ಲಿ 2015-16ರಲ್ಲಿ ಅನುದಾನ ಬಿಡುಗಡೆಯಾದ ಮನೆಗಳಲ್ಲಿ ಸುಮಾರು 22 ಮನೆಗಳು ಪ್ರಗತಿಯಲ್ಲಿದ್ದು ಕೆಲವೊಂದು ಮನೆಗಳು ದಾಖಲೆ ಸರಿಯಿಲ್ಲ ಎಂಬ ಕಾರಣಕ್ಕೆ ನಿಂತಿವೆ. ಇದೇ ರೀತಿ ಮುದ್ರಾಡಿ, ವರಂಗ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಡ ಸಮಸ್ಯೆಗಳಿವೆ.

ಕೆಲವೊಂದು ಸಮಸ್ಯೆಗೆ ಜನರೇ ಕಾರಣ
ಆರ್‌ಟಿಸಿ ತೋರಿಸಿ ಈ ಪರಿಸರದಲ್ಲಿ ಮನೆ ಕಟ್ಟುವುದಾಗಿ ಹೇಳಿ ಬಳಿಕ ಕುಮ್ಕಿ ಜಾಗದಲ್ಲಿ ಪಂಚಾಂಗ ಹಾಕಿದ ಬಗ್ಗೆ ದೂರುಗಳು ಬಂದು ಹಣ ಬಿಡುಗಡೆಯಾಗದಿದ್ದರೆ ಇದಕ್ಕೆ ಜನರೇ ಕಾರಣ ಎಂಬುದು ಅಧಿಕಾರಿಗಳ ಅಭಿಪ್ರಾಯ.

ಉಸ್ತುವಾರಿ ಸಚಿವರ ಗಮನಕ್ಕೆ
ಕೆಲವೊಂದು ಮನೆಗಳಿಗೆ ಒಂದು ಅಥವಾ ಎರಡು ಕಂತಿನ ಹಣ ಬಿಡುಗಡೆಯಾಗಿದೆ. ಉಳಿದ ಮನೆಗಳಿಗೆ ಬಿಡುಗಡೆಯಗಿಲ್ಲ. ಈ ಬಗ್ಗೆ ಜಿ.ಪಂ. ಸಿಇಒ ಅವರು ನಿಗಮಕ್ಕೆ ವರದಿ ಸಲ್ಲಿಸಬೇಕು. ಇದನ್ನು ಮಾಡದ ಕಾರಣ ವಿಳಂಬವಾಗಿದೆ. ಇತ್ತೀಚೆಗೆ ಭೇಟಿ ನೀಡಿದ ಉಸ್ತುವಾರಿ ಸಚಿವರ ಗಮನಕ್ಕೂ ವಿಷಯವನ್ನು ತಂದಿದ್ದು ಇನ್ನೆರಡು ದಿನಗಳಲ್ಲಿ ವರದಿ ಕಳುಹಿಸಿ ಸಮಸ್ಯೆ ಬಗೆಹರಿಸಲಾಗುವುದು.
-ವಿ. ಸುನಿಲ್‌ ಕುಮಾರ್‌, ಶಾಸಕರು, ಕಾರ್ಕಳ

ಸಂಬಂಧಪಟ್ಟವರು ಗಮನಹರಿಸಿ
ಆಶ್ರಯ ಯೋಜನೆಯಡಿಯಲ್ಲಿ ಮನೆಯ ಅಡಿಪಾಯ ಹಾಕಿ ಮೊದಲ ಕಂತಿನ ಹಣ ಬಿಡುಗಡೆಯಾಗಿದೆ. ಈಗ ಡೀಮ್ಡ್ ಫಾರೆಸ್ಟ್‌ ಎಂದು ಹಣಬಿಡುಗಡೆ ಆಗುತ್ತಿಲ್ಲ ಎನ್ನುತ್ತಿದ್ದಾರೆ. ಇಂತಹ ಹಲವು ಮನೆಗಳಿವೆ. ಬಡತನದಿಂದ ಜೀವನ ನಡೆಸುವವರಿಗೆ ವಾಸಿಸಲು ಒಂದು ಸೂರು ಸಿಕ್ಕಿತು ಎಂದು ನಿಟ್ಟುಸಿರುಬಿಟ್ಟವರು ಈಗ ಹಣಕ್ಕಾಗಿ ಪಂಚಾಯತ್‌ಗೆ ದಿನನಿತ್ಯ ಹೋಗಬೇಕಾದ ಪರಿಸ್ಥಿತಿ ಇದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು.
-ಶ್ರೀಕಾಂತ್‌ ಪೂಜಾರಿ, ಸಾಮಾಜಿಕ ಕಾರ್ಯಕರ್ತರು, ಕುಚ್ಚಾರು

ದಾಖಲೆ ಸರಿ ಇದ್ದವರಿಗೆ ಹಣ ಬಿಡುಗಡೆ
94ಸಿ ಅಡಿಯಲ್ಲಿ ಜಾಗ ಪಡೆದವರು, ಡೀಮ್ಡ್ ಫಾರೆಸ್ಟ್‌, ಕುಮ್ಕಿ ಜಾಗ ಹಾಗೂ ಮರಳು ಸಮಸ್ಯೆ ಇರುವ ಕಾರಣ ಕೆಲವೊಂದು ಮನೆಗಳು ಪೂರ್ಣಗೊಂಡಿಲ್ಲ. ಉಳಿದಂತೆ ದಾಖಲೆ ಸರಿಯಿದ್ದವರಿಗೆ ಜಿ.ಪಿ.ಎಸ್‌. ಮೂಲಕ ಹಂತ ಹಂತವಾಗಿ ಹಣ ಬಿಡುಗಡೆಯಾಗಿದೆ.
-ವಿಜಯ, ಪಿಡಿಒ,ಹೆಬ್ರಿ ಗ್ರಾ.ಪಂ.

– ಉದಯ್‌ ಕುಮಾರ್‌ ಹೆಬ್ರಿ

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.