“ಚಿತ್ತ ಚಿತ್ತಾರ’, “ಬಹುರೂಪಿ ಪ್ರೀತಿ’ ಕೃತಿಗಳ ಅನಾವರಣ
Team Udayavani, Mar 29, 2018, 7:55 AM IST
ಉಡುಪಿ: ರಂಗಭೂಮಿ ಉಡುಪಿ, ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಮಂಗಳವಾರ ನಡೆದ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ರಂಗ ಕಲಾವಿದ ಅರಸೀಕೆರೆ ಚಾಂದ್ ಬಾಷಾ ಅವರು ವಿರಚಿತ ಕವನ ಸಂಕಲನಗಳಾದ “ಚಿತ್ತ ಚಿತ್ತಾರ’ ಮತ್ತು “ಬಹುರೂಪಿ ಪ್ರೀತಿ’ ಕೃತಿಗಳ ಅನಾವರಣ ನಡೆಯಿತು.
ರಂಗಭೂಮಿಯ ಗೌರವಾಧ್ಯಕ್ಷ ಡಾ| ಎಚ್. ಶಾಂತಾರಾಮ್ ಅವರು ಕೃತಿಗಳ ಅನಾವರಣ ಮಾಡಿದರು. ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ರಂಗನಟ- ನಿರ್ದೇಶಕ ಲಕ್ಷ್ಮೀನಾರಾಯಣ ಭಟ್ ಕೆ. ಅವರನ್ನು ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಯಿತು.
ಕೃತಿಕಾರ ಅರಸೀಕೆರೆ ಚಾಂದ್ ಬಾಷಾ, ನಾಟಕ ಅಕಾಡೆಮಿ ಸದಸ್ಯ ಬಾಸುಮ ಕೊಡಗು, ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಡಾ| ಸಂಧ್ಯಾ ನಂಬಿಯಾರ್ ಉಪಸ್ಥಿತರಿದ್ದರು.ಉಪಾಧ್ಯಕ್ಷ ನಂದಕುಮಾರ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ಚಂದ್ರ ಕುತ್ಪಾಡಿ ಪ್ರಸ್ತಾವನೆಗೈದರು. ಮೇಟಿ ಮುದಿಯಪ್ಪ ಅವರು ಕೃತಿಕಾರರ ಪರಿಚಯ ಮಾಡಿದರು.
ವಿವೇಕಾನಂದ ಎಚ್. ವಿಶ್ವರಂಗಭೂಮಿ ಸಂದೇಶ ತಿಳಿಸಿದರು. ಪೂರ್ಣಿಮಾ ಸುರೇಶ್ ನಿರೂಪಿಸಿದರು.
ಅನುಭವ ಸಜೀವವಾಗಿರಲಿ
ಸಾಹಿತಿ ಡಾ| ರೇಖಾ ವಿ. ಬನ್ನಾಡಿ ಅವರು ಕೃತಿ ಪರಿಚಯಗೈದರು. ಸಾಮಾಜಿಕ ಜವಾಬ್ದಾರಿ, ಎಲ್ಲರೂ ಒಂದಾಗಿ ಬಾಳಬೇಕು ಎನ್ನುವ ಆಶಯ ಕೃತಿಕಾರ ಚಾಂದ್ ಬಾಷಾ ಅವರಿಗಿದೆ. ಕವಿಗಳಿಗೆ ಅನುಭವವು ಸಜೀವವಾಗಿರಬೇಕು. ಅದು ಕವಿತೆಗೆ ಶಕ್ತಿ ತುಂಬುತ್ತದೆ. ಸಮಾಜವನ್ನು ಪ್ರೀತಿಸುವ ಆಶಯವೂ ಕವಿಗಿರಬೇಕು ಎಂದು ಹೇಳಿದ ಅವರು, ಕವಿತೆ ಬರೆ ಯುವವರು ಹೆಚ್ಚಾಗುತ್ತಿದ್ದರೂ, ಕವಿತೆ ಓದುವವರು ಇಂದು ಕಡಿಮೆ ಯಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ