ಮೇಲ್ದರ್ಜೆಗೇರದ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ
Team Udayavani, Mar 11, 2019, 1:00 AM IST
ಕೊಲ್ಲೂರು: ಮೇಲ್ದರ್ಜೆಗೇರುವ ನಿರೀಕ್ಷೆಯಲ್ಲಿದ್ದ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 24×7 ಸೇವೆಯೂ ಸಿಗದಂತಾಗಿದೆ.
ತುರ್ತು ಚಿಕಿತ್ಸೆಗೆ ಕುಂದಾಪುರವರೆಗೆ ಹೋಗಬೇಕಾಗಿದ್ದು, ಪರ್ಯಾಯ ವ್ಯವಸ್ಥೆ ಒದಗಿಸುವ ಭರವಸೆಯೂ ಹುಸಿಯಾಗಿದೆ.
ಕೊಲ್ಲೂರು, ಗೋಳಿಹೊಳೆ, ಜಡ್ಕಲ್, ಮುದೂರು ಹಾಗೂ ಎಳಜಿತ ಗ್ರಾಮಗಳ ರೋಗಿಗಳಿಗೆ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಚಿಕಿತ್ಸೆಗಾಗಿ ಅವಲಂಬಿಸಬೇಕಾಗಿದೆ. 3 ಗ್ರಾಮಗಳಲ್ಲಿ ಸುಮಾರು 20 ಸಾವಿರಕ್ಕೂ ಮಿಕ್ಕಿ ಜನರು ವಾಸವಾಗಿದ್ದಾರೆ.
ರಾತ್ರಿ ಹೊತ್ತಿನಲ್ಲಿ ತುರ್ತು ಚಿಕಿತ್ಸೆಗೆ ಕೊಲ್ಲೂರಿಗೆ ಆಗಮಿಸಿದರೆ ಇಲ್ಲಿ ಸೇವೆಯೇ ಲಭ್ಯವಿಲ್ಲ!
ಸಿಬಂದಿ ಕೊರತೆ
ಕಿರಿಯ ಪುರುಷ ಆರೋಗ್ಯ ಸಹಾಯಕ ಸಹಿತ ಜೂನಿಯರ್ ಹೆಲ್ತ್ ಅಸಿಸ್ಟೆಂಟ್, ಫಾರ್ಮಸಿಸ್ಟ್ ಕೊರತೆ ಇಲ್ಲಿದೆ. ದಾದಿಯರು ಮತ್ತು ಕಾವಲುಗಾರರನ್ನು ನೇಮಿಸಲಾಗಿದ್ದು, ಕೊಲ್ಲೂರು ದೇಗುಲ ಖರ್ಚು ನಿಭಾಯಿಸುತ್ತಿದೆ.
ಕೊಲ್ಲೂರು, ಗೋಳಿ ಹೊಳೆಯಲ್ಲೂ ಸಿಬಂದಿ ಇಲ್ಲ
ಕೊಲ್ಲೂರು ಬಿ ಹಾಗೂ ಗೋಳಿಹೊಳೆ ಸಬ್ ಸೆಂಟರ್ಗಳಲ್ಲೂ ಸಿಬಂದಿ ಇಲ್ಲದೆ ರೋಗಿಗಳು ಪರದಾಡಬೇಕಾಗಿದೆ. ಇಲ್ಲಿನ ಸಮಸ್ಯೆಬಗ್ಗೆ ಗ್ರಾ.ಪಂ. ಹಾಗೂ ಗ್ರಾಮಸ್ಥರು ಇಲಾಖೆಯ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಮಾಜ ಸೇವಕ ರಮೇಶ್ ಗಾಣಿಗ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ