ಮೇಲ್ಸೇತುವೆ ಕಾಮಗಾರಿ: ಮುಗಿದಷ್ಟು ಬೇಗ ಅಭಿವೃದ್ಧಿಗೆ ವೇಗ


Team Udayavani, Mar 11, 2018, 6:00 AM IST

1003kde1B.jpg

ಅಭಿವೃದ್ಧಿ ಶಕೆಯಲ್ಲಿರುವ ಕುಂದಾಪುರಕ್ಕೆ ಬೇಕಾದ್ದು ಸುಸಜ್ಜಿತ ರಸ್ತೆ ಸೌಕರ್ಯ. ಹೆದ್ದಾರಿಯಲ್ಲಿರುವ ಈ ಪೇಟೆಗೆ ಸುಸಜ್ಜಿತ ಫ್ಲೈಓವರ್‌ ಬೇಕು. ಅದರ ಕಾಮಗಾರಿ ಆರಂಭವಾಗಿದ್ದರೂ ಕುಂಟುತ್ತಾ ಸಾಗಿರುವುದರಿಂದ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬಂತಾಗಿದೆ. ಶೀಘ್ರ ಕಾಮಗಾರಿ ಮುಕ್ತಾಯಗೊಳಿಸಿ, ಸರ್ವಿಸ್‌ ರಸ್ತೆ ನಿರ್ಮಾಣಗೊಂಡರೆ, ಪ್ರಗತಿಗೆ ವೇಗ ಕಲ್ಪಿಸಿದಂತೆ.

ಕುಂದಾಪುರ: ವೇಗವಾಗಿ ಪ್ರಗತಿ ಹೊಂದುತ್ತಿರುವ ಕುಂದಾಪುರ ನಗರದಲ್ಲಿ ಸಂಚಾರ ದಟ್ಟನೆಯೂ ಹೆಚ್ಚುತ್ತಿದ್ದು, ಸುಸಜ್ಜಿತ ರಸ್ತೆ ಸೌಕರ್ಯ ಶೀಘ್ರವಾಗಿ ಆಗಬೇಕಿದೆ. ಈಗ ಪ್ರಗತಿಯಲ್ಲಿರುವ ಮೇಲ್ಸೇತುವೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಂಡರೆ ಬಹಳಷ್ಟು ಅನುಕೂಲವಾಗಲಿದೆ. 
 
ತ್ವರಿತ ಕಾಮಗಾರಿ ಬೇಡಿಕೆ 
ಶಾಸ್ತ್ರಿ ಸರ್ಕಲ್‌ನಲ್ಲಿ ಮೇಲ್ಸೇತುವೆ ಕಾಮಗಾರಿ ಯೋಜನೆ 2013ರಲ್ಲಿ ಮಂಜೂರಾಗಿದ್ದು, ಕಾಮಗಾರಿ ಆರಂಭವಾಗಿ 5 ವರ್ಷಗಳಾಗಿವೆ. ಕುಂದಾಪುರ- ಸುರತ್ಕಲ್‌ ಚತುಷ್ಪಥ ಹೆದ್ದಾರಿಯೂ ಸೇರಿ ಒಟ್ಟು 671 ಕೋ.ರೂ. ಯೋಜನೆ ಇದಾಗಿದೆ. ಈಗ ಒಂದು ಕಡೆಯಿಂದ ಸರ್ವಿಸ್‌ ರಸ್ತೆ ಕಾಮಗಾರಿಯೂ ನಡೆಯುತ್ತಿದೆ. ಟೆಂಡರ್‌ ಕರಾರು ಪ್ರಕಾರ ಅದು ಮುಂದಿನ ಮೇ ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಮೇಲ್ಸೆತುವೆಗೆ ಇನ್ನೂ 4 ಬೀಮ್‌ ನಿರ್ಮಾಣವಾಗಬೇಕಿದೆ. ಪ್ರೊಟೆಕ್ಟ್ ವಾಲ್‌ ನಿರ್ಮಾಣ ಬಾಕಿಯಿದೆ. ಮೇಲ್ನೋಟಕ್ಕೆ ಈ ಕಾಮಗಾರಿ ಮುಕ್ತಾಯಕ್ಕೆ 2 ವರ್ಷ ಬೇಕು. ಆದರೆ ಅಧಿಕಾರಿಗಳು ಈ ವರ್ಷವೇ ಪೂರ್ಣಗೊಳ್ಳಲಿದೆ ಎಂದು ಹೇಳುತ್ತಿದ್ದಾರೆ.  ಈ ಮೇಲ್ಸೇತುವೆ ಬಗ್ಗೆ ಸಮಗ್ರ ಚಿತ್ರಣವೂ ಇಲ್ಲದಿರುವುದರಿಂದ ತೀರ ಗೊಂದಲವಿದೆ.  ಲಭ್ಯ ಮಾಹಿತಿ ಪ್ರಕಾರ ಬೈಂದೂರು ಕಡೆಯಿಂದ ಕುಂದಾಪುರದ ಸರಕಾರಿ ಬಸ್‌ ನಿಲ್ದಾಣದಿಂದ ಫ್ಲೈ ಓವರ್‌ ಆರಂಭವಾಗಿ, ಉಡುಪಿ ಕಡೆಯಿಂದ ಬೊಬ್ಬರ್ಯನ ಕಟ್ಟೆಯ ಬಳಿ ಕೊನೆಗೊಳ್ಳುತ್ತದೆ. 

ಎಕ್ಸ್‌ಪ್ರೆಸ್‌ ಹೈವೇ ಅಗತ್ಯ 
ಕರಾವಳಿಯ ಜೀವನಾಡಿಯಾಗಿರುವ ಹೆದ್ದಾರಿ ಈಗಾಗಲೇ ಚತುಷ್ಪಥವಾಗಿ ಮಾರ್ಪಟ್ಟಿದ್ದು, ಇದನ್ನು ಎಕ್ಸ್‌ಪ್ರೆಸ್‌ ಹೈವೇಯನ್ನಾಗಿ ಮಾಡುವ ಅಗತ್ಯ ಹಿಂದೆಂದಿಗಿಂತ ಹೆಚ್ಚಾಗಿದೆ. ಇದರಿಂದ ಕುಂದಾಪುರ-ಮಂಗಳೂರು ಸುಲಭ, ಕಡಿಮೆ ಅವಧಿಯ ಸಂಚಾರ ಸಾಧ್ಯವಾಗಲಿದೆ. ಇದರೊಂದಿಗೆ ಕುಂದಾಪುರ, ಉಡುಪಿ ಭಾಗದಲ್ಲಿ ಬೆಳವಣಿಗೆಗೆ ವ್ಯಾಪಕ ಪ್ರಯೋಜನ ಸಿಗಲಿದೆ. ಈಗಿರುವ ಚತುಷ್ಪಥವನ್ನೇ ಅಭಿವೃದ್ಧಿ ಪಡಿಸುವುದರೊಂದಿಗೆ ಸೂಕ್ತ ಸರ್ವಿಸ್‌ ರಸ್ತೆಗಳ ನಿರ್ಮಾಣವಾದರೆ, ಈ ಭಾಗಕ್ಕೆ ಹೆಚ್ಚಿನ ಪ್ರಯೋಜನ ಸಿಗಲಿದೆ. 

ಬಸ್ರೂರು-ಮೂರುಕೈ:
ಫ್ಲೈ ಓವರ್‌ ಪ್ರಸ್ತಾವನೆ

ಕುಂದಾಪುರ – ಶಿವಮೊಗ್ಗ ರಾಜ್ಯ ಹೆದ್ದಾರಿ ಸಂಪರ್ಕಿಸುವ ಬಸ್ರೂರು – ಮೂರುಕೈ ಜಂಕ್ಷನ್‌ ಸಂಚಾರಕ್ಕೆ ತೀರ ಗೊಂದಲ ಮೂಡಿಸಿದೆ. ಇಲ್ಲಿ ಫ್ಲೈ ಓವರ್‌ ಅಥವಾ ಅಂಡರ್‌ ಪಾಸ್‌ ನಿರ್ಮಾಣವಾಗಬೇಕೆಂಬ ಬೇಡಿಕೆ ಇದೆ. ಈಗ ಹೆದ್ದಾರಿ ಪ್ರಾಧಿಕಾರಕ್ಕೆ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಿಂದ ಸುರತ್ಕಲ್‌ -ಕುಂದಾಪುರ ಹೆದ್ದಾರಿ ಕಾಮಗಾರಿಗೆ ಹೊಡೆತ ಬಿದ್ದಿದ್ದು, ಫ್ಲೈಓವರ್‌ ನಿರ್ಮಾಣಕ್ಕೆ ಪ್ರಸ್ತಾವನೆ ಹೋಗಿರುವುದರಿಂದ ಸರ್ವಿಸ್‌ ರಸ್ತೆ ನಿರ್ಮಾಣಕ್ಕೆ ಬ್ರೇಕ್‌ ಬಿದ್ದಿದೆ.

ಪ್ರಯೋಜನವೇನು? 
ಕುಂದಾಪುರಕ್ಕೆ ಗ್ರಾಮೀಣ ಭಾಗಗಳಿಂದ ದಿನವೊಂದಕ್ಕೆ ಸುಮಾರು 10 ಸಾವಿರ ಮಂದಿ ಆಗಮಿಸುತ್ತಾರೆ. ಸರ್ವೆ ಪ್ರಕಾರ ಶೇ. 70ರಷ್ಟು ಉಡುಪಿ ಹಾಗೂ ಮಂಗಳೂರು ಭಾಗದ ವಾಹನಗಳು, ಕೇವಲ ಶೇ. 30 ರಷ್ಟು ಮಾತ್ರ ಹೊರ ಜಿಲ್ಲೆಗಳ ವಾಹನಗಳು ಸಂಚರಿಸುತ್ತವೆ. ಕುಂಠಿತಗೊಂಡಿರುವ ಮೇಲ್ಸೆತುವೆ ಕಾಮಗಾರಿಯಿಂದಾಗಿ ಸಾಕಷ್ಟು ಮಂದಿ ನಿತ್ಯ ಸಂಕಟ ಅನುಭವಿಸುತ್ತಿದ್ದಾರೆ. ಫ್ಲೈಓವರ್‌ ತೆರೆದುಕೊಂಡರೆ ವ್ಯಾಪಾರ, ವಹಿವಾಟು, ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಮಂದಗತಿಯ ಕಾಮಗಾರಿಯಿಂದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಆರಂಭಗೊಂಡು ವಿನಾಯಕ ಚಿತ್ರಮಂದಿರದ ವರೆಗಿನ ಮಳಿಗೆಗಳು, ಹೊಟೇಲ್‌ಗ‌ಳು, ಕಮರ್ಶಿಯಲ್‌ ಕಟ್ಟಡಗಳು, ಲಾಡ್ಜ್ಗಳ ವಹಿವಾಟಿಗೆ ಹೊಡೆತ ಬಿದ್ದಿದೆ. ಕಾಮಗಾರಿ ಶೀಘ್ರ ಪೂರ್ಣವಾದರೆ ಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಣೆಯಾಗಬಹುದು ಎನ್ನುವ ಅಭಿಪ್ರಾಯವಿದೆ. ಕುಂದಾಪುರ-ಕಾರವಾರ ಹೆದ್ದಾರಿ ಕಾಮಗಾರಿಗೂ ವೇಗ ಸಿಗಬೇಕಿದೆ.

ತುರ್ತಾಗಿ ಆಗಬೇಕಾದದ್ದೇನು?
·  ಶಾಸ್ತ್ರಿ ಸರ್ಕಲ್‌ ಬಳಿ ಕುಂದಾಪುರ ಫ್ಲೈಓವರ್‌ ಕಾಮಗಾರಿಗೆ ವೇಗ ನೀಡಿ, ಶೀಘ್ರ ಬಳಕೆಗೆ ಸಿಗುವಂತೆ ಮಾಡುವುದು 
·  ಕುಂದಾಪುರ – ಕಾರವಾರ, ಸುರತ್ಕಲ್‌ –  ಕುಂದಾಪುರ ಚತುಷ್ಪಥ ರಾ.ಹೆ.ಅಗಲೀಕರಣದಲ್ಲಿ ಪ್ರಗತಿ
·  ಬಸ್ರೂರು-ಮೂರುಕೈ ಜಂಕ್ಷನ್‌ನಲ್ಲಿ ಮೇಲ್ಸೆತುವೆ ನಿರ್ಮಾಣವಾದರೆ ಶಿವಮೊಗ್ಗ, ಸಿದ್ದಾಪುರ ಕಡೆಯಿಂದ ಬರುವ ಹಾಗೂ ತೆರಳುವ ವಾಹನಗಳಿಗೆ ಅನುಕೂಲವಾಗಲಿದೆ. ಅಪಘಾತಗಳ ಸಂಖ್ಯೆಯೂ ಕಡಿಮೆಯಾಗಲಿದೆ.
·  ತೆಕ್ಕಟ್ಟೆ, ಬೀಜಾಡಿ, ಬಸ್ರೂರು-ಮೂರುಕೈ, ಶಾಸ್ತ್ರಿ ಸರ್ಕಲ್‌, ತಲ್ಲೂರು, ಹೆಮ್ಮಾಡಿ ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣ 

ಪ್ರಗತಿಗೆ  ಸಲಹೆ ನೀಡಿ
“ಪ್ರಗತಿ ಪಥ’ ನಮ್ಮ ಊರಿನ ಪ್ರಗತಿಯ ಗತಿ ಗುರುತಿಸುತ್ತಿರುವ ಪ್ರಯತ್ನ. ಕುಂದಾಪುರ ತಾಲೂಕು ಪ್ರಗತಿ ಕುರಿತು ಸಲಹೆಗಳಿದ್ದರೆ ನಮ್ಮ ವಾಟ್ಸಾಪ್‌ ನಂಬರ್‌ 91485 94259ಗೆ ಕಳಿಸಿ. ಸೂಕ್ತವಾದುದನ್ನು ಪ್ರಕಟಿಸುತ್ತೇವೆ. ನಿಮ್ಮ ಹೆಸರು, ಊರು ಹಾಗೂ ಭಾವಚಿತ್ರವಿರಲಿ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.