ಉಪ್ಪಿನಕುದ್ರು ಸರಕಾರಿ ಮಾದರಿ ಹಿ. ಪ್ರಾ. ಶಾಲೆಗೆ 101 ವರ್ಷ

ಕೊಗ್ಗ ಕಾಮತ್‌ರಂತಹ ಮಹನೀಯರು ಕಲಿತ ಜ್ಞಾನ ದೇಗುಲ

Team Udayavani, Nov 29, 2019, 5:44 AM IST

Namma-Sh

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ತಲ್ಲೂರು: ಉಪ್ಪಿನಕುದ್ರು ಎನ್ನುವ ಪುಟ್ಟ ಊರಿಗೆ ಯಕ್ಷಗಾನ ಬೊಂಬೆಯಾಟದ ಮೂಲಕ ರಾಷ್ಟ್ರಮಟ್ಟದ ಮನ್ನಣೆ ತಂದುಕೊಟ್ಟ ಕೊಗ್ಗ ಕಾಮತ್‌ ಅವರಂತಹ ಹತ್ತಾರು ಮಂದಿ ಮಹನೀಯರು ಕಲಿತ ಉಪ್ಪಿನಕುದ್ರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಈಗ 101 ವರ್ಷ.

1918ರಲ್ಲಿ ಉಪ್ಪಿನಕುದ್ರುವಿನಲ್ಲಿ ಆರಂಭವಾದ ಈ ಶಾಲೆ ನೂರು ವಸಂತಗಳನ್ನು ಪೂರೈಸಿ, 101ನೇ ವರ್ಷಕ್ಕೆ ಕಾಲಿಟ್ಟಿದೆ. ಆದರೆ ಇನ್ನೂ ಈ ಶಾಲೆಯ ಶತಮಾನೋತ್ಸವ ಆಚರಣೆ ನಡೆದಿಲ್ಲ. ತಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಉಪ್ಪಿನಕುದ್ರು ಒಂದು ದ್ವೀಪ. ಆಗಲೂ – ಈಗಲೂ ಈ ಊರಿಗೆ ಇರುವುದು ಇದೊಂದೇ ಹಿ.ಪ್ರಾ. ಶಾಲೆ. ಸಮೀಪದಲ್ಲೇ ಪ್ರೌಢಶಾಲೆಯಿದೆ. ಆದರೆ ಇತರ ಯಾವುದೇ ಖಾಸಗಿ ಅಥವಾ ಅನುದಾನಿತ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳು ಇಲ್ಲಿಲ್ಲ. ಉಪ್ಪಿನಕುದ್ರು, ಬೇಡರಕೊಟ್ಟಿಗೆ, ನಾಗಿಮನೆ, ಕೆಳಬೆಟ್ಟು, ಬಾಳೆಬೆಟ್ಟುವಿನ ಗ್ರಾಮಸ್ಥರಿಗೆ ಇರುವುದು ಇದೊಂದೇ ಶಾಲೆ.

124 ವಿದ್ಯಾರ್ಥಿಗಳು
ಹಿಂದೆ ಸಾವಿರಾರು ಮಂದಿ ವಿದ್ಯಾರ್ಜನೆಗೈದ ಈ ಶಾಲೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1 ರಿಂದ 7ನೇ ತರಗತಿಯವರೆಗೆ 125 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸದ್ಯ ನಾಲ್ವರು ಶಿಕ್ಷಕರಿದ್ದಾರೆ. ಮುಖ್ಯ ಶಿಕ್ಷಕರಾಗಿದ್ದ ಗೋಪಾಲಕೃಷ್ಣ ಅವರು ಕೆಲವು ತಿಂಗಳ ಹಿಂದೆ ನಿವೃತ್ತಿಯಾಗಿದ್ದು, ಆ ಹುದ್ದೆ ಖಾಲಿಯಿದೆ. ಹಿರಿಯ ಶಿಕ್ಷಕಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಗಣ್ಯಾತಿ ಗಣ್ಯರ ಶಾಲೆ
ಈ ಶಾಲೆಯಲ್ಲಿ ಕಲಿತ ಅನೇಕ ಮಂದಿ ಇಂದು ಸಮಾಜದ ಉನ್ನತ ರಂಗಗಳಲ್ಲಿ ತೊಡಗಿಸಿಕೊಂಡಿರುವುದು ವಿಶೇಷ. ಬೊಂಬೆಯಾಟದ ಕೊಗ್ಗ ಕಾಮತ್‌, ಭಾಸ್ಕರ್‌ ಕಾಮತ್‌, ಪ್ರತಿಷ್ಠಿತ ಹೊಟೇಲ್‌ ಉದ್ಯಮಿಗಳಾದ ಸುರೇಶ್‌ ಕಾಂಚನ್‌ ಮುಂಬಯಿ, ರಮೇಶ್‌ ಯು., ಚಿತ್ರದುರ್ಗದಲ್ಲಿ ಡಿವೈಎಸ್‌ಪಿ ಯಾಗಿರುವ ನಾಗೇಶ್‌ ನಾಯಕ್‌, ಪ.ಪೂ. ಶಿಕ್ಷಣ ಇಲಾಖೆಯ ಸಹ ನಿರ್ದೇಶಕರಾಗಿದ್ದ ರಾಘವೇಂದ್ರ ಐತಾಳ್‌, ಕುಂದಾಪುರ ಬೋರ್ಡ್‌ ಹೈಸ್ಕೂಲಿನಲ್ಲಿ ಪ್ರಾಂಶುಪಾಲರಾಗಿದ್ದ ದಿ| ನಾಗಪ್ಪಯ್ಯ ಐತಾಳ್‌, ದಿ| ರಾಮಕೃಷ್ಣ ಐತಾಳ್‌, ಧಾರ್ಮಿಕ, ಬ್ಯಾಂಕಿಂಗ್‌, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡ ರಮೇಶ್‌ ಕಾರಂತ್‌, ರಾಜೇಶ್‌ ಕಾರಂತ್‌, ಸುರೇಶ್‌ ಉಡುಪ, ರಾಜಾರಾಂ ಹೊಳ್ಳ, ಸದಾನಂದ ಉಪ್ಪಿನಕುದ್ರು, ಆನಂದ ಬಿಲ್ಲವ ಸೇರಿದಂತೆ ಅನೇಕರು ಇಲ್ಲಿನ ಹಳೆ ವಿದ್ಯಾರ್ಥಿಗಳು.

ರಾಷ್ಟ್ರಪ್ರಶಸ್ತಿ
ಈ ಶಾಲೆಯಲ್ಲಿ ಶಿಕ್ಷಕರಾಗಿದ್ದ ಅನಂತ ಮಯ್ಯ ಅವರಿಗೆ ಉತ್ತಮ ಶಿಕ್ಷಕ ಎನ್ನುವ ರಾಷ್ಟ್ರ ಪ್ರಶಸ್ತಿ ಅರಸಿಕೊಂಡು ಬಂದಿತ್ತು. ಇನ್ನು ಇಲ್ಲಿ ಕಲಿತು ಶಿಕ್ಷಣ ರಂಗದ ಗಣನೀಯ ಸಾಧನೆಗಾಗಿ ದಿ| ನಾಗಪ್ಪಯ್ಯ ಐತಾಳ್‌ ಅವರಿಗೆ ಕೂಡ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು.

ಸರಕಾರದ ಅನುದಾನದ ಜತೆಗೆ ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿ ಸಂಘ, ಊರಿನ ದಾನಿಗಳು, ಇಲ್ಲಿ ಕಲಿತ ಅನೇಕ ಮಂದಿ ವಿದ್ಯಾರ್ಥಿಗಳ ನೆರವಿನಿಂದ ಈ ಶಾಲೆ ಬಹಳಷ್ಟು ಅಭಿವೃದ್ಧಿ ಕಂಡಿದ್ದು, ಜತೆಗೆ ಗುಣಮಟ್ಟದ ಶಿಕ್ಷಣವನ್ನು ಕೂಡ ನೀಡುತ್ತಿದೆ. ಮಕ್ಕಳಿಗೆ ಆಟವಾಡಲು ಮೈದಾನವೊಂದರ ಅಗತ್ಯವಿದೆ.
-ಕೆ. ಶಕುಂತಳಾ,(ಪ್ರಭಾರ ) ಮುಖ್ಯ ಶಿಕ್ಷಕಿ

ನಾನು ಉಪ್ಪಿನಕುದ್ರು ಶಾಲೆಯ ವಿದ್ಯಾರ್ಥಿ ಎಂಬ ಹೆಮ್ಮೆಯಿದೆ. ಆಗ ಕಡು ಬಡತನದಲ್ಲಿ ಕಲಿತಿದ್ದು, ಶಾಲೆಗೆ ಹೋಗಲು ಸರಿಯಾದ ಬಟ್ಟೆಗಳಿರಲಿಲ್ಲ. ಬೇರೆಯವರು ಬಳಸಿದ ಬಟ್ಟೆ, ಪುಸ್ತಕಗಳನ್ನು ಉಪಯೋಗಿಸಿ ಕಲಿತಿದ್ದೆವು. ಆ ಕಷ್ಟದ ಅರಿವಿರುವುದರಿಂದ ಕಳೆದ 14 ವರ್ಷಗಳಿಂದ ಈ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಪ್ರತಿ ವರ್ಷ ಪುಸ್ತಕ, ವಿದ್ಯಾರ್ಥಿವೇತನ ನೀಡುತ್ತಿದ್ದೇನೆ. 7ನೇ ತರಗತಿಯಲ್ಲಿದ್ದಾಗ ನಾನು ಕೃಷಿ ಮಂತ್ರಿಯಾಗಿದ್ದೆ.
-ಸುರೇಶ್‌ ಆರ್‌. ಕಾಂಚನ್‌ ಮುಂಬಯಿ,
ಪ್ರತಿಷ್ಠಿತ ಹೊಟೇಲ್‌ ಉದ್ಯಮಿ

- ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.