ಉಪ್ಪಿನಕುದ್ರು: ಮಳೆಗಾಲದಲ್ಲೇ ಕರಟಿ ಹೋದ ನೇಜಿ

ಮಳೆ ಕೊರತೆಯಿಂದ ಉಪ್ಪು ನೀರಿನ ಸಮಸ್ಯೆ ; ಗದ್ದೆ ಬದಿಯ ದಂಡೆ ಏರಿಸಲು ರೈತರ ಮನವಿ

Team Udayavani, Jul 22, 2019, 5:18 AM IST

2107KDPP1

ಉಪ್ಪಿನಕುದ್ರುವಿನ ನಾಗಿಮನೆ ಸಮೀಪ ಕರಟಿ ಹೋದ ನೇಜಿ.

ವಿಶೇಷ ವರದಿ –ಕುಂದಾಪುರ: ಮುಂಗಾರು ಈಗಷ್ಟೇ ಬಿರುಸು ಪಡೆದುಕೊಂಡಿದ್ದರೂ, ಸರಿಯಾದ ಸಮಯದಲ್ಲಿ ಉತ್ತಮ ಮಳೆ ಬಾರದ ಕಾರಣ ರೈತರು ಈಗಷ್ಟೇ ನೆಟ್ಟ ನೇಜಿ ಉಪ್ಪು ನೀರಿನ ಹಾವಳಿಯಿಂದಾಗಿ ಮಳೆಗಾಲದಲ್ಲಿಯೇ ಕರಟಿ ಹೋದ ಘಟನೆ ಉಪ್ಪಿನಕುದ್ರು ಭಾಗದಲ್ಲಿ ನಡೆದಿದೆ.

ಹಿಂಗಾರು ಅಥವಾ ವೈಶಾಖದಲ್ಲಿ ನೀರಿನ ಸಮಸ್ಯೆಯಿಂದಾಗಿ ಅಥವಾ ಉಪ್ಪು ನೀರಿನ ಪ್ರಭಾವದಿಂದಾಗಿ ನೆಟ್ಟ ನೇಜಿ ಕರಟಿ ಹೋಗುವುದು ಸಾಮಾನ್ಯ. ಆದರೆ ಈ ಬಾರಿ ತಲ್ಲೂರು ಗ್ರಾಮದ ಉಪ್ಪಿನಕುದ್ರು ಭಾಗದ ಗದ್ದೆಗಳಲ್ಲಿ ಮುಂಗಾರಿನಲ್ಲೇ ನೇಜಿ ಕರಟಿ ಹೋಗಿದೆ.

ಕಾರಣವೇನು?
ಮಳೆಗಾಲ ತಡವಾಗಿ ಆರಂಭ ವಾಗಿದ್ದು, ಈಗ ತಾನೇ ಮುಂಗಾರು ಸ್ವಲ್ಪ ಮಟ್ಟಿಗೆ ಬಿರುಸು ಪಡೆದಿದೆ. ಆದರೆ ಇದಕ್ಕೂ ಮೊದಲೇ ಈ ಭಾಗದಲ್ಲಿ ನೇಜಿ ನೇಡುವ ಕಾರ್ಯ ಮಾಡಿರುವುದರಿಂದ, ಅದಕ್ಕೆ ಉಪ್ಪು ನೀರು ಪ್ರವೇಶಿಸಿ ನೇಜಿ ಕರಟಿದೆ. ಇದಕ್ಕೆ ಪರಿಹಾರವೆಂದರೆ ಗದ್ದೆ ಬದಿಯ ದಂಡೆಯನ್ನು ಏರಿಸಿದರೆ ಅಮಾವಾಸ್ಯೆ – ಹುಣ್ಣಿಮೆ ಸಮಯದಲ್ಲಿ ಉಬ್ಬರವಿಳಿತ ಉಂಟಾ ದಾಗ ಗದ್ದೆಗಳಿಗೆ ಉಪ್ಪು ನೀರು ನುಗ್ಗುವುದು ಕಡಿಮೆಯಾಗಬಹುದು.

ಉಪ್ಪಿನಕುದ್ರು ಸಮೀಪದ ನಾಗಿಮನೆ ಸಮೀಪದ ಸುಮಾರು 20 ರೈತ ಕುಟುಂಬದ ಹತ್ತಾರು ಎಕರೆ ಗದ್ದೆಗಳಲ್ಲಿ ಬೆಳೆದ ನೇಜಿ, ಬೇಡರಕೊಟ್ಟಿಗೆ ಸಮೀಪದ ಗದ್ದೆಗಳಿಗೂ ಉಪ್ಪು ನೀರಿನ ಹಾವಳಿಯಿಂದ ಹಾನಿಯಾಗಿದೆ.

ಹಿಂಗಾರಿನಲ್ಲೂ ನಷ್ಟ
ಕಳೆದ ಬಾರಿ ಹಿಂಗಾರು ಹಂಗಾಮಿನಲ್ಲೂ ಉಪ್ಪಿನಕುದ್ರು ಭಾಗದ ರೈತರು ಉಪ್ಪು ನೀರಿನ ಸಮಸ್ಯೆಯಿಂದಾಗಿ ಕಟಾವಿನ ವೇಳೆಯಲ್ಲಿ ಕರಟಿ ಹೋಗಿದ್ದರಿಂದ ಏನೂ ಫಸಲು ಸಿಗದೇ ನಷ್ಟ ಅನುಭವಿಸಿದ್ದರು.

ಕಡಲ ತೀರದ ಅದರಲ್ಲೂ ಕುಂದಾಪುರ ತಾಲೂಕಿನ ಉಪ್ಪಿನಕುದ್ರು, ಹೆಮ್ಮಾಡಿ, ಕಟ್ಟು, ಹೊಸಾಡು ಭಾಗದಲ್ಲಿ ಉಪ್ಪು ನೀರಿನ ಪ್ರಮಾಣ ಹೆಚ್ಚಿರುವ ಕಾರಣ ಭತ್ತದ ಇಳುವರಿ ಹಾಗೂ ಉತ್ಪಾದನೆ ಕುಂಠಿತಗೊಳ್ಳುತ್ತಿದೆ. ಈ ಪ್ರದೇಶಗಳಲ್ಲಿ ಉಪ್ಪು ನೀರಿನ ಸಮಸ್ಯೆ ಎನ್ನುವುದು ಭತ್ತದ ಕೃಷಿಗೆ ಅಂಟಿದ ಶಾಪವಾಗಿದೆ. ಇದರಿಂದ ಭತ್ತದ ಬೆಳೆಯನ್ನೇ ನಂಬಿಕೊಂಡಿರುವ ಸಾವಿರಾರು ರೈತ ಕುಟುಂಬಗಳು ಕಂಗಾಲಾಗಿವೆ.

ಹೊಸ ತಳಿಯ ಸಂಶೋಧನೆ
ಕರಾವಳಿ ಭಾಗದ ಗದ್ದೆಗಳಲ್ಲಿ ಉಪ್ಪು ನೀರಿನಲ್ಲಿ ಬೆಳೆಯಬಹುದಾದ ಭತ್ತದ ಹೊಸ ತಳಿಯ ಕುರಿತಂತೆ ಕೃಷಿ ಇಲಾಖೆ ಹಾಗೂ ಚೆನ್ನೈಯ ಎಂ.ಎಸ್‌. ಸ್ವಾಮಿನಾಥನ್‌ ಸಂಶೋಧನಾ ಪ್ರತಿಷ್ಠಾನದ ಸಹಯೋಗದಲ್ಲಿ ಸಂಶೋಧನೆ ಮಾಡಲಾಗುತ್ತಿದೆ. ಸುಧಾರಿತ ಭತ್ತದ ತಳಿ ಅಭಿವೃದ್ಧಿಗೆ 3 ವರ್ಷದ ಯೋಜನೆ ರೂಪಿಸಲಾಗಿದೆ. ಅದು ಆದಷ್ಟು ಶೀಘ್ರದಲ್ಲಿ ಅನುಷ್ಠಾನಕ್ಕೆ ಬಂದಲ್ಲಿ ಕರಾವಳಿ ಜಿಲ್ಲೆಗಳಲ್ಲಿರು ಉಪ್ಪು ನೀರು ಬಾಧಿತ ಗದ್ದೆಗಳಲ್ಲಿ ಬೇಸಾಯ ಮಾಡುವ ರೈತರಿಗೆ ಪ್ರಯೋಜನವಾಗಲಿದೆ.

ಪರ್ಯಾಯ ತಳಿಗೆ ಪ್ರಯತ್ನ
ಉಪ್ಪು ನೀರಿನಲ್ಲಿಯೂ ಕೂಡ ಬೆಳೆಯುವಂತಹ ಭತ್ತದ ತಳಿಯನ್ನು ಈಗ ಪ್ರಾಯೋಗಿಕವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಭಾಗದಲ್ಲಿ ಬೆಳೆಸಲಾಗಿದೆ. ಅಲ್ಲಿ ಯಶಸ್ವಿಯಾದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿಯೂ ಕೂಡ ಬೆಳೆಯಲಾಗುವುದು. ಹೊಳೆ ದಂಡೆ ಏರಿಸುವ ಕುರಿತಂತೆ ರೈತರು ಇಲಾಖೆಗೆ ಮನವಿ ಸಲ್ಲಿಸಿದಲ್ಲಿ ಅದನ್ನು ಸಂಬಂಧಪಟ್ಟವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು.
-ಚಂದ್ರಶೇಖರ್‌,ಉಪ ನಿರ್ದೇಶಕರು,ಕೃಷಿ ಇಲಾಖೆ ಉಡುಪಿ

ಹೊಳೆ ದಂಡೆ ಏರಿಸಲಿ
ಪ್ರತಿ ವರ್ಷ ನಾವು ಈ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಎಷ್ಟು ಹೇಳಿದರೂ ನಮ್ಮ ಮನವಿಗೆ ಸ್ಪಂದಿಸಲೇ ಇಲ್ಲ. ಗದ್ದೆ ಬದಿಯ ಹೊಳೆ ದಂಡೆಗಳನ್ನು ಏರಿಸಿದರೆ ಮಾತ್ರ ಪ್ರಯೋಜನವಾಗಲಿದೆ.
-ಗುಲಾಬಿ ನಾಗಿಮನೆ,ಉಪ್ಪಿನಕುದ್ರು,ರೈತರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.