ಉಪ್ಪುಂದ: ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ


Team Udayavani, Mar 4, 2023, 5:35 AM IST

crಉಪ್ಪುಂದ: ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ

ಉಪ್ಪುಂದ: ಸಾಲಬಾಧೆ ಹಾಗೂ ಪತ್ನಿ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನಲ್ಲಿ ನಡೆದಿದೆ.

ಬೈಂದೂರು ತಾಲೂಕು ವಿದ್ಯಾನಗರ ಡಿಗ್ರಿ ಕಾಲೇಜು ಸಮೀಪದ ನಿವಾಸಿ ಗೋಪಾಲ (48) ಆತ್ಮಹತ್ಯೆ ಮಾಡಿಕೊಂಡವರು.

ಅವರು ಹೊಸ ಮನೆಯನ್ನು ನಿರ್ಮಿಸಲು ಪ್ರಾರಂಭಿಸಿದ್ದು, ಹಣದ ಅಡಚಣೆಯಿಂದ ಮನೆ ಕೆಲಸ ನಿಧಾನಕ್ಕೆ ನಡೆದಿದ್ದು, ಮನೆ ನಿರ್ಮಾಣದ ಸಲುವಾಗಿ ಬ್ಯಾಂಕ್‌ ಹಾಗೂ ಸಂಘಗಳಲ್ಲಿ ಸುಮಾರು 7-8 ಲಕ್ಷ ರೂ. ಸಾಲ ಮಾಡಿ, ಮನೆ ನಿರ್ಮಾಣ ಮಾಡುತ್ತಿದ್ದು, ಇನ್ನು ಹೆಚ್ಚಿನ ಹಣ ಬೇಕಾಗಿರುವ ಬಗ್ಗೆ ಪತ್ನಿ ಸುಶೀಲಾ ಅವರಲ್ಲಿ ಪದೇ ಪದೇ ಹೇಳುತ್ತಿದ್ದರು. ಸುಶೀಲಾ ಮೊಗವೀರ ಅವರಿಗೂ ಆರೋಗ್ಯ ಹದಗೆಟ್ಟು, ಹಾಸಿಗೆ ಹಿಡಿದ ಕಾರಣ ಮಾನಸಿಕ ಖನ್ನತೆಗೆ ಒಳಗಾಗಿ ಮದ್ಯಪಾನ ಸಹ ಮಾಡುತ್ತಿದ್ದರು. ಮಾ.2ರಂದು ಬೆಳಗ್ಗೆ ಎದ್ದು ಹೊಸ ಮನೆ ಕೆಲಸದ ಬಗ್ಗೆ ಹೋಗಿದ್ದು ಚಹಾ ಕುಡಿಯಲು ಬೆಳಗ್ಗೆ 8:30 ಗಂಟೆಗೆ ಕರೆಯಲು ಹೋದಾಗ ಹೊಸ ಮನೆಯ ಒಳಗಡೆ ಇರುವ ಟಾಯ್ಲೆಟ್‌ನ ಕಬ್ಬಿಣದ ಜಂತಿಗೆ ಟವೆಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಆತ್ಮಹತ್ಯೆ
ಕಾರ್ಕಳ: ನಿಟ್ಟೆಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್‌ ಕಲಿಯುತ್ತಿದ್ದ ಸೀಮಾ (22) ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 2ರಂದು ನಡೆದಿದೆ.

ಕುಂದಾಪುರದ ಶಿರೂರು ಮೂಲದ ಅವರು ಅಂತಿಮ ವರ್ಷದ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ನರ, ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಹಲವು ಕಡೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು 4-5 ತಿಂಗಳ ಹಿಂದೆಯೂ ಒಮ್ಮೆ ನಿದ್ರೆ ಮಾತ್ರೆ ಹಾಗೂ ಆರೋಗ್ಯದ ಸಮಸ್ಯೆಯ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೇ ಕಾರಣವನ್ನೇ ಮುಂದಿಟ್ಟುಕೊಂಡು ಮಾ. 2ರಂದು ಅಪರಾಹ್ನ ಹಾಸ್ಟೆಲ್‌ನ ಕೊಠಡಿಯಲ್ಲಿನ ಫ್ಯಾನ್‌ಗೆ ಚೂಡಿದಾರ್‌ ಶಾಲ್‌ನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗಳ ನಡುವೆ ಪರಸ್ಪರ ಢಿಕ್ಕಿ:ಗಾಯ
ಕಾರ್ಕಳ: ಬೋಳ ಗ್ರಾಮದ ಬೋಳ ಪದವು ಎಂಬಲ್ಲಿ ಬೈಕ್‌ಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಎರಡು ಬೈಕ್‌ಗಳ ಸವಾರರು, ಸಹಸವಾರಿ ಗಾಯಗೊಂಡ ಘಟನೆ ನಡೆದಿದೆ.

ಕಿನ್ನಿಗೋಳಿ ನೆಲ್ಲಿಗುಡ್ಡೆ ನಿವಾಸಿ ಗಣೇಶ್‌ ಪ್ರಸಾದ್‌ ಸಂಕಲಕರಿಯ ಕಡೆಯಿಂದ ಮಂಜರಪಲ್ಕೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಎದುರಿನಿಂದ ಮಂಜರಪಲ್ಕೆ ಕಡೆಯಿಂದ ವಿನೋದ ಅವರು ಚಲಾಯಿಸಿಕೊಂಡು ಬಂದ ಬೈಕ್‌ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಎರಡು ಬೈಕ್‌ಗಳ ಸವಾರರು ಹಾಗೂ ಸಹಸವಾರ ಬೈಕ್‌ ಸಹಿತ ರಸ್ತೆಗೆ ಬಿದ್ದು ಗಣೇಶ್‌ ಪ್ರಸಾದ್‌ ಮೂಳೆ ಮುರಿತಕ್ಕೆ ಒಳಗಾದರೆ, ವಿನೋದ, ಸಹಸವಾರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ. ಕಾರ್ಕಳ ಪೊಲೀಸ್‌ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಚಾರು: ಪಾದಚಾರಿಗೆ ಬೈಕ್‌ ಢಿಕ್ಕಿ; ಗಂಭೀರ
ಸಿದ್ದಾಪುರ: ಅಂಪಾರು ಗ್ರಾಮದ ಕಂಚಾರು ಜಂಕ್ಷನ್‌ ಬಳಿ ನಡೆದುಕೊಂಡು ಹೋಗುತ್ತಿದ್ದ ಕಾವ್ರಾಡಿ ಗ್ರಾಮದ ಹನ್ನಾಡು ಗುಡ್ಡಿಮನೆ ಸುರೇಶ ದೇವಾಡಿಗ (59) ಅವರಿಗೆ ಬೈಕ್‌ ಢಿಕ್ಕಿ ಹೊಡೆದಿದೆ. ಢಿಕ್ಕಿ ಪರಿಣಾಮ ಸುರೇಶ ಅವರು ಗಂಭೀರವಾಗಿ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.