ಉಪ್ಪುಂದ: ಮಣಿಪುರ ವಿದ್ಯಾರ್ಥಿ ಬಿದ್ಯಾಸುನ್‌ ಸಿಂಗ್‌ ಸಾಧನೆ


Team Udayavani, Jun 5, 2018, 6:00 AM IST

bindysun-singh.jpg

ಉಪ್ಪುಂದ: ದೂರದ ರಾಜ್ಯ ಮಣಿಪುರದ ಯುವಕನೊಬ್ಬ ಕನ್ನಡಲ್ಲಿ ಅದೂ ಗ್ರಾಮೀಣ ಭಾಗ ಶಾಲೆಯೊಂದರಲ್ಲಿ ಕಲಿತು ಎಸೆಸೆಲ್ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದುವ ಮೂಲಕ ಈತ ಎಲ್ಲರ ಗಮನ ಸೆಳೆದಿದ್ದಾನೆ.

ಕನ್ನಡ ಬಾರದ ಹುಡುಗ ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತು ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.83.04 ಅಂಕ ಪಡೆದಿರುವುದಲ್ಲದೇ ಕನ್ನಡದಲ್ಲಿ 108 ಅಂಕ ಪಡೆದು ಕನ್ನಡಿಗರನ್ನೇ ಹುಬ್ಬೇರಿಸುವಂತೆ ಮಾಡಿದ್ದಾನೆ.ಮಣಿಪುರ ರಾಜ್ಯದ ಹೈರೋಕ್‌ ಎಂಬ ಪುಟ್ಟ ಹಳ್ಳಿಯಲ್ಲಿ ಬಡ ಕೃಷಿ ಕೂಲಿ ಕಾರ್ಮಿಕರ ಮನೆಯಲ್ಲಿ ಹುಟ್ಟಿದ ಕುಂದ್ರಕºಮ್‌ ಬಿದ್ಯಾಸುನ್‌ ಸಿಂಗ್‌ ಈ ಸಾಧನೆ ಮಾಡಿದ ಬಾಲಕ.

ಆಶ್ರಯ ನೀಡಿದ ಆರ್‌ಎಸ್‌ಎಸ್‌
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಈಶಾನ್ಯ  ರಾಜ್ಯಗಳಲ್ಲಿ ಹಲವಾರು ಕಾರಣಗಳಿಂದ ಶಿಕ್ಷಣ ವಂಚಿತ ಸಾವಿರಾರು ವಿದ್ಯಾರ್ಥಿಗಳನ್ನು ಕರ್ನಾಟಕ, ಆಂಧ್ರಪ್ರದೇಶ, ಕೇರಳ ಮುಂತಾದ ರಾಜ್ಯಗಳಿಗೆ ಕರೆ ತಂದು ಅವರಿಗೆ ಸೂಕ್ತ ಶಿಕ್ಷಣ ನೀಡುವ ಮೂಲಕ ಯುವಜನತೆಗೆ ಪ್ರೇರಣೆಯಾಗಿ ಗುರುತಿಸಿಕೊಂಡಿದೆ.

ಆರ್‌ಎಸ್‌ಎಸ್‌ ಮೂಲಕ 5ನೇ ವರ್ಷಕ್ಕೆ ಕರ್ನಾಟಕಕ್ಕೆ ಬಂದ ಬಿದ್ಯಾಸುನ್‌ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 1ನೇ ತರಗತಿಗೆ ಸೇರಿದ. ಸಂಘದ ಸ್ಥಳೀಯ ಕಾರ್ಯಕರ್ತ ಗುರುರಾಜ್‌ ಗಂಟಿಹೊಳೆ ಅವರ ಮನೆಯಲ್ಲಿ ತನ್ನಂತೆಯೇ ಬಂದಿದ್ದ 17 ಮಂದಿ ಮಣಿಪುರಿ ವಿದ್ಯಾರ್ಥಿಗಳೊಂದಿಗೆಆಶ್ರಯ ಪಡೆದು ಶಿಕ್ಷಣ ಮುಂದುವರಿಸಿದ್ದಾನೆ.

ಕನ್ನಡ ಬಾರದವ ಕನ್ನಡ ಕಲಿಸಿದ
ಕಲಿಕೆಯಲ್ಲಿ ಆಸಕ್ತಿ ಹೊಂದಿದ್ದ ಬಿದ್ಯಾಸುನ್‌ ಮೊದ ಮೊದಲು ಕನ್ನಡ ಭಾಷೇ ಬಾರದೇ ಸಾಕಷ್ಟು ಕಷ್ಟಪಟ್ಟಿದ್ದ ಆದರೆ ಬಹುಬೇಗ ಕನ್ನಡ ಕಲಿತ. ತನ್ನ ಸಹಪಾಠಿಯ ಮಣಿಪುರಿ ವಿದ್ಯಾರ್ಥಿಗಳಿಗೂ ಹಿಂದಿ ಕಲಿಸಿಕೊಟ್ಟ. ಈತನ ಚುರುಕತನ ಗಮನಿಸಿದ ಶಾಲಾ ಶಿಕ್ಷಕರು ಮಣಿಪುರಿ ವಿದ್ಯಾರ್ಥಿಗಳೊಂದಿಗೆ ಕನ್ನಡದಲ್ಲಿ ಮಾತನಾಡಲು ತಿಳಿಸಿದರು.  ಇತರ ಮಣಿಪುರ ವಿದ್ಯಾರ್ಥಿಗಳಿಗೂ ಕನ್ನಡ ಕಲಿಸುವ ಮಟ್ಟಿಗೆ ಕನ್ನಡ ಜ್ಞಾನ ಪಡೆದ.

ಈತ ಕೇವಲ ಶಿಕ್ಷಣಕ್ಕೆ ಮಾತ್ರವಲ್ಲ ಇಲ್ಲಿನ ಆಹಾರ, ಜೀವನ ಪದ್ಧತಿ, ಸಂಸ್ಕೃತಿಗಳಿಗೆ ಹೊಂದಿಕೊಂಡ. ಹೆತ್ತವರಿಂದ ದೂರವಿರುವ ನೋವು ಇದ್ದರು ಬಿದ್ಯಾಸುನ್‌ ಊರಿನ ನಾಟಕ, ಯಕ್ಷಗಾನ, ಹಬ್ಬ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ತನ್ನನ್ನು ತೊಡಗಿಸಿಕೊಂಡ. ಶಬರಿಮಲೆಗೂ ಹೋಗಿ ಬಂದ ಬಿದ್ಯಾಸುನ್‌ 10ವರ್ಷ ಕರ್ನಾಟಕದಲ್ಲೇ ಕಳೆದ್ದಾನೆ.

ಸೌಲಭ್ಯವಿಲ್ಲ
ನಮ್ಮ ಊರು ಗುಡ್ಡಗಾಡು ಪ್ರದೇಶ, ಕೃಷಿ ಅಲ್ಲಿನ ಜೀವನ. ಶಾಲೆಗಳಿಗಾಗಿ ದೂರದ ನಗರಗಳನ್ನು ಅವಲಂಬಿಸಬೇಕು. ಇಲ್ಲಿನ ಗುಣಮಟ್ಟದ ಶಿಕ್ಷಣ ಅಲ್ಲಿ ಸಿಗುವುದಿಲ್ಲ. ಆದರಿಂದ ಆರ್‌ಎಸ್‌ಎಸ್‌ ಮೂಲಕ ಇಲ್ಲಿಗೆ ಬಂದೆ. ಅನೇಕ ಯುವಕರು ಇಲ್ಲಿ ಒಳ್ಳೆಯ ಶಿಕ್ಷಣ ಪಡೆದು ಊರಿಗೆ ಹೋಗಿ ಉತ್ತಮ ಉದ್ಯೋಗ ಪಡೆದುಕೊಂಡಿದ್ದಾರೆ.
– ಬಿದ್ಯಾಸುನ್‌,ವಿದ್ಯಾರ್ಥಿ

ಶಿಕ್ಷಣ ವಂಚಿತರಾಬಾರದು 
ಈಶಾನ್ಯ ರಾಜ್ಯಗಳಲ್ಲಿ  ಮತಾಂತರ ಪಿಡುಗಿನ ಜತೆ ಪ್ರತ್ಯೇಕವಾದವೂ ಬೆಳೆಯುತ್ತಿರುವ ಕಾರಣ ಅಲ್ಲಿನ ಯುವ ಜನತೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಆರ್‌ಎಸ್‌ಎಸ್‌ ಯುವಕರನ್ನು ಕರೆದುಕೊಂಡು ಬಂದು ಶಿಕ್ಷಣ ನೀಡಿ ಒಳ್ಳಯ ಭವಿಷ್ಯ ರೂಪಿಸುವ ಕಾರ್ಯ ಮಾಡುತ್ತಿದೆ.
– ಗುರುರಾಜ್‌ ಗಂಟಿಹೊಳೆ 
ಆರ್‌ಎಸ್‌ಎಸ್‌ ಕಾರ್ಯಕರ್ತ

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.