ಉಪ್ಪುಂದ: ಐದೇ ನಿಮಿಷದಲ್ಲಿ ಮುಗಿದ ಮದುವೆ!
Team Udayavani, Mar 31, 2020, 1:32 PM IST
ಉಪ್ಪುಂದ: ದೇಶಾದ್ಯಂತ ಲಾಕ್ಡೌನ್ ಇರುವುದರಿಂದ ಮೊದಲೇ
ನಿಗದಿಯಾಗಿದ್ದ ಮದುವೆ ಸಮಾರಂಭವೊಂದನ್ನು ಕೇವಲ ಐದೇ ನಿಮಿಷದಲ್ಲಿ ಮುಗಿಸಲಾಯಿತು. ಕಿರಿಮಂಜೇಶ್ವರ ಗ್ರಾಮದ ನಾಗೂರು ನಿವಾಸಿ ನಾಗಲಕ್ಷ್ಮೀ
ಮತ್ತು ಬಿಜೂರು ಬೆಸ್ಕೂರು ಮನೆ ನಿವಾಸಿ ದಿನೇಶ ಅವರ ವಿವಾಹ ಮಾ. 30ರಂದು ಇಲ್ಲಿನ ಶಾಲೆ ಬಾಗಿಲಿನ ಸಭಾಭವನವೊಂದರಲ್ಲಿ ನಡೆಯಬೇಕಿತ್ತು. ಆದರೆ ಲಾಕ್ಡೌನ್ ಕಾರಣ ಗೌಜಿಯಿಂದ ಮದುವೆ ಅಸಾಧ್ಯವಾಗಿತ್ತು.
ಆದ್ದರಿಂದ ಹಿರಿಯರ ಅಪೇಕ್ಷೆಯಂತೆ ಅದೇ ಮುಹೂರ್ತದಲ್ಲಿ ಬಿಜೂರು ಶ್ರೀ ಅರೆಕಲ್ಲು ಮಹಾಲಿಂಗೇಶ್ವರ ದೇಗುಲದಲ್ಲಿ ವಧೂವರರ ಹೆತ್ತವರ ಸಮ್ಮುಖದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಯಾವುದೇ ಆಡಂಬರವಿಲ್ಲದೆ, ಮಂತ್ರ, ಮಂಗಳವಾದ್ಯಗಳೂ ಇಲ್ಲದೆ ಅತ್ಯಂತ ಸರಳವಾಗಿ ತಾಳಿ ಕಟ್ಟುವ ಮೂಲಕ 5 ನಿಮಿಷದಲ್ಲಿ ಮದುವೆ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ