ಯುಪಿಎಸ್‌ಸಿ ಸಾಧನೆ: ಚಾಲಕನ ಪುತ್ರ ಶೌಕತ್‌ ಅಝೀಂ ಉತ್ತೀರ್ಣ


Team Udayavani, Jun 1, 2022, 1:37 AM IST

ಯುಪಿಎಸ್‌ಸಿ ಸಾಧನೆ: ಚಾಲಕನ ಪುತ್ರ ಶೌಕತ್‌ ಅಝೀಂ ಉತ್ತೀರ್ಣ

ಕಾರ್ಕಳ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ಪರೀಕ್ಷೆಯಲ್ಲಿ ವಾಹನ ಚಾಲಕನ ಪುತ್ರ ಮೊಹಮ್ಮದ್‌ ಶೌಕತ್‌ ಅಝೀಂ 914 ಅಂಕ ಪಡೆದಿದ್ದು 545ನೇ ರ್‍ಯಾಂಕ್‌ ಗಳಿಸಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಕಾರ್ಕಳದ ಎಸ್‌ವಿಟಿ ಶಾಲೆಯಲ್ಲಿ ಪೂರೈಸಿ ಕೆಎಂಇಎಸ್‌ ಕಾಲೇಜಿನಲ್ಲಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಪಡೆದಿದ್ದು, ಅನಂತರ ಮೂಡುಬಿದಿರೆ ಸಮೀಪದ ಮಿಜಾರಿನ ಮೈಟ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಶನ್‌ ನಲ್ಲಿ ಎಂಜಿನಿಯರಿಂಗ್‌ ಪದವಿ ಪೂರೈಸಿದ್ದಾರೆ. ಬಳಿಕ ಕರ್ನಾಟಕ ಸರಕಾರ ವತಿಯಿಂದ ಯುಪಿಎಸ್‌ಸಿ ಪರಿಕ್ಷೆ ತರಬೇತಿಗೆ ಆಯ್ಕೆಯಾಗಿ ಪ್ರೋತ್ಸಾಹಧನ ದೊಂದಿಗೆ ತರಬೇತಿ ಪಡೆದರು.

2016ರಲ್ಲಿ ಮೊದಲ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಎದುರಿಸಿದ ಇವರು ಇದೀಗ ಸತತ 7ನೇ ಪ್ರಯತ್ನದಲ್ಲಿ ಉತ್ತಮ ರ್‍ಯಾಂಕ್‌ ನೊಂದಿಗೆ ಯಶಸ್ಸು ಗಳಿಸಿದ್ದಾರೆ. 2021ನೇ ಸಾಲಿನ ಪರೀಕ್ಷೆಯಲ್ಲಿ ದೇಶಾದ್ಯಂತ 685 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಶೌಕತ್‌ ಅಝೀಂ ಬಡಕುಟುಂಬದಲ್ಲಿ ಜನಿಸಿದ್ದು ಅವರ ತಂದೆ ಶೇಕ್‌ ಅಬ್ದುಲ್‌ ವೃತ್ತಿಯಲ್ಲಿ ವಾಹನ ಚಾಲಕರಾಗಿದ್ದಾರೆ. ತಾಯಿ ಮೈಮುನ ಮೊದಲು ಬೀಡಿಕಟ್ಟುತ್ತಿದ್ದರು.

ಕಷ್ಟದ ಸಂದರ್ಭದಲ್ಲಿಯು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ಹೆತ್ತವರೇ ನನಗೆ ಪ್ರೇರಣೆ. ಪ್ರತೀ ದಿನ 5 ಗಂಟೆ ಸತತ ಪರೀಕ್ಷಾ ಪೂರ್ವ ತಯಾರಿ ನಡೆಸುತ್ತಿದ್ದೆ. ಕೇವಲ ಓದು ಮಾತ್ರವಲ್ಲ, ಜತೆಗೆ ಸಾಮಾಜಿಕ ಜ್ಞಾನ ನನಗೆ ಮುಖ್ಯವಾಗಿತ್ತು. ಪ್ರಯತ್ನದ ಫಲದಿಂದ ಯಶಸ್ಸು ಸಿಕ್ಕಿದೆ.
– ಮೊಹಮ್ಮದ್‌ ಶೌಕತ್‌

ಕೊಡಗಿನ ರಾಜೇಶ್‌ಗೆ 222ನೇ ರ್‍ಯಾಂಕ್‌
ಮಡಿಕೇರಿ: ಯುಪಿಎಸ್‌ಸಿ 2021ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಕೊಡಗು ಮೂಲದ ಮುಂಡಂಡ ರಾಜೇಶ್‌ ಪೊನ್ನಪ್ಪ 222ನೇ ರ್‍ಯಾಂಕ್‌ ಗಳಿಸುವ ಮೂಲಕ ಉತ್ತಮ ಸಾಧನೆ ತೋರಿದ್ದಾರೆ.

ಮೂಲತಃ ಮಡಿಕೇರಿ ತಾಲೂಕು ನೆಲಜಿ ಗ್ರಾಮದ ಮುಂಡಂಡ ಜಯಾ ಪೂವಯ್ಯ ಹಾಗೂ ಸುಧಾ ಪೂವಯ್ಯ ದಂಪತಿಯ ಪುತ್ರ ರಾಜೇಶ್‌ ಅವರು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಹಾಗೂ ಕಾನೂನು ಪದವಿಯನ್ನು ಅತ್ಯುನ್ನತ ದರ್ಜೆಯಲ್ಲಿ ಪೂರೈಸಿದ್ದು, ಐಎಎಸ್‌ ಅಧಿಕಾರಿಯಾಗುವ ಗುರಿಯೊಂದಿಗೆ 3 ವರ್ಷಗಳಿಂದ ಅಧ್ಯಯನದಲ್ಲಿ ತೊಡಗಿದ್ದರು. 3ನೇ ಪ್ರಯತ್ನದಲ್ಲಿ ಉತ್ತಮ ರ್‍ಯಾಂಕ್‌ನಲ್ಲಿ ಗುರಿ ಸಾಧಿಸುವ ಮೂಲಕ ಕೊಡಗು ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಅವರು ಪರೀಕ್ಷೆಗೆ ತಯಾರಿ ಜತೆಗೆ ಹಲವು ಪರೀûಾರ್ಥಿಗಳಿಗೂ ಮಾರ್ಗದರ್ಶನ ನೀಡುತ್ತಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.