ಸಿಕ್ಕಿದ ಅವಕಾಶ ಸೇವೆಗೆ ಬಳಸಿಕೊಳ್ಳಿ ಡಾ| ಶಾಂತಾರಾಮ್‌ ಕರೆ


Team Udayavani, Aug 14, 2017, 8:00 AM IST

sikkida-avakasha.jpg

ಉಡುಪಿ: ಪ್ರತಿಯೊಬ್ಬರಿಗೂ ಅವಕಾಶಗಳು ಲಭಿಸುತ್ತವೆ. ಇವುಗಳನ್ನು ಸೇವೆಯಾಗಿ ಬಳಸಿಕೊಳ್ಳಬೇಕು ಸಮಾಜಕೊಟ್ಟ ಅವಕಾಶವನ್ನು ಸೇವೆಯಾಗಿ ಬಳಸಿಕೊಳ್ಳುವ ಮನೋಭೂಮಿಕೆಯನ್ನು ಬೆಳೆಸಿಕೊಂಡರೆ ಮುಪ್ಪು ಬರುವುದಿಲ್ಲ. ಹಲವು ಕಾಲ ಬಾಳಬಹುದು…

ಇದು ಮಣಿಪಾಲ ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಆಡಳಿತಾಧಿಕಾರಿ, ಕಾರ್ಯದರ್ಶಿ ಡಾ| ಎಚ್‌. ಶಾಂತಾರಾಮ್‌ ಸಂದೇಶ. ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ 90ರ ಹುಟ್ಟು ಹಬ್ಬದ ನಿಮಿತ್ತ ರವಿವಾರ ತನ್ನನ್ನು ಅಭಿನಂದಿಸಿದ ಸಂದರ್ಭ ಮಾತನಾಡಿದ ಡಾ| ಶಾಂತಾರಾಮ್‌ ಅವರು, ಎಂಜಿಎಂ ಕಾಲೇಜಿನ ಪ್ರಥಮ ಪ್ರಾಂಶುಪಾಲರ ಅವಧಿಯಲ್ಲಿ ಹಂಗಾಮಿಯಾಗಿ ಕೆಲವು ತಿಂಗಳು ಪಾಠ ಮಾಡಿರುವ ದಿನಗಳನ್ನು ನೆನಪಿಸಿಕೊಂಡರು. ಕೊನೆ ಕ್ಷಣದವರೆಗೂ ವಿದ್ಯಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಹಂಬಲವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಅಧ್ಯಕ್ಷ ಡಾ| ಎಚ್‌.ಎಸ್‌. ಬಲ್ಲಾಳ್‌ ಅವರು ಮಾತನಾಡಿ, ಡಾ| ಶಾಂತಾರಾಮ್‌ ಅವರು ಜ್ಞಾನಪಿಪಾಸು. ವಿಜ್ಞಾನದ ಜತೆ ಸಾಹಿತ್ಯ, ಕಲೆಗಳನ್ನೂ ಅರಿತ ಅಪರೂಪದ ವ್ಯಕ್ತಿ ಎಂದು ಬಣ್ಣಿಸಿದರು. ಹಣ,
ಬಂಧುಗಳು ಕೊನೆಯವರೆಗೆ ಬರುವುದಿಲ್ಲ. ನಾವು ಮಾಡಿದ ಉತ್ತಮ ಕೆಲಸಗಳೇ ಕೊನೆಯವರೆಗೂ ಬರುತ್ತವೆ ಎಂಬ ವಿವೇಕಾನಂದರ ಮಾತನ್ನು ಪಾಲಿಸಬೇಕಾಗಿದೆ ಎಂದರು.

ಅಕಾಡೆಮಿ ಉಪಾಧ್ಯಕ್ಷ ಟಿ. ಸತೀಶ್‌ ಯು. ಪೈ, “ತರಂಗ’ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಉಪಸ್ಥಿತರಿದ್ದರು. ಪ್ರಾಂಶುಪಾಲೆ ಕುಸುಮಾ ಕಾಮತ್‌, ಪ.ಪೂ. ಕಾಲೇಜು ಪ್ರಾಂಶುಪಾಲೆ ಮಾಲತಿದೇವಿ, ಪ್ರಾಧ್ಯಾ
ಪಕರಾದ ಡಾ| ಸುರೇಶರಮಣ ಮಯ್ಯ, ವಿಶ್ವನಾಥ ಪೈ ಶುಭ ಕೋರಿದರು. 

ವಿಜಯಲಕ್ಷ್ಮೀ ಶಾಂತಾರಾಮ್‌ ಕೃತಜ್ಞತೆ ಸಲ್ಲಿಸಿದರು. ವಿಭಾಗ ಮುಖ್ಯಸ್ಥರಾದ ಡಾ| ಸಂಧ್ಯಾ ಆರ್‌. ನಂಬಿಯಾರ್‌ ಸ್ವಾಗತಿಸಿ ಡಾ| ಎಂ.ಜಿ. ವಿಜಯ ವಂದಿಸಿದರು. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳಾದ ವಿಶ್ವತಾ, ಆಶ್ರಯ, ಮೇಘನಾ ಮಂಕು ತಿಮ್ಮನ ಕಗ್ಗಗಳನ್ನು ಹಾಡಿದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.