“ದೇಗುಲ ಹಣ ಪಾವತಿಗೆ ಇ-ಗವರ್ನೆನ್ಸ್‌ ಬಳಕೆ’

ಸ್ವರ್ಣೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಾಗಿನ ಅರ್ಪಣೆ

Team Udayavani, Aug 30, 2019, 5:47 AM IST

END

ಉಡುಪಿ: ಮುಜರಾಯಿ ದೇವಸ್ಥಾನಗಳ ಹಣ ದುರ್ಬಳಕೆ ತಡೆಯುವ ಉದ್ದೇಶದಿಂದ ರಾಜ್ಯದಲ್ಲಿರುವ 27 ಸಾವಿರ ದೇವಸ್ಥಾನಗಳಿಗೆ ನೀಡಲಾಗುವ ತಲಾ 48 ಸಾವಿರ ರೂ. ವಾರ್ಷಿಕ ತಸ್ತೀಕ್‌ ಅನ್ನು ದೇವಸ್ಥಾನಗಳ ಖಾತೆಗೆ ನೇರ ಜಮೆ ಮಾಡಲು ಸೂಚನೆ ನೀಡಿದ್ದೇನೆ. ತಸ್ತೀಕ್‌ ಹಣ ತಡೆಹಿಡಿಯುತ್ತಾರೆ, ಬೇರೆ ಉದ್ದೇಶಕ್ಕೆ ಬಳಸುತ್ತಾರೆ ಎಂಬ ಆರೋಪವಿದ್ದು, ಇದಕ್ಕಾಗಿ ಇ ಗವರ್ನೆನ್ಸ್‌ ಮೂಲಕ ಹಣ ಪಾವತಿಗೆ ನಿರ್ಧರಿಸಲಾಗಿದೆ ಎಂದು ಮುಜರಾಯಿ ಮತ್ತು ಬಂದರು, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿಯ ಜೀವನದಿ ಸ್ವರ್ಣೆಗೆ ಗುರುವಾರ ಬೆಳಗ್ಗೆ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನದ ಕೃಷ್ಣಾಂಗಾರಕ ಸ್ನಾನಘಟ್ಟದಲ್ಲಿ ಹಾಲು ಅಭಿಷೇಕ ಸಹಿತ ಬಾಗಿನ ಸಲ್ಲಿಸಿ, ಮಂಗಳಾರತಿ ಬೆಳಗಿ, ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಡಾ. ವಿ.ಎಸ್‌. ಆಚಾರ್ಯ ಅವರು ಸ್ವರ್ಣಾ ನದಿಗೆ ಬಾಗಿನ ಅರ್ಪಿಸುವ ಸಂಪ್ರದಾಯವನ್ನು ಪ್ರಾರಂಭಿಸಿದ್ದರು. ನಾವು ಅದನ್ನು ಮುಂದುವರಿಸುತ್ತಿದ್ದೇವೆ. ಧಾರ್ಮಿಕ ದತ್ತಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಗಳ ಮೂಲಕ ಸ್ನಾನಘಟ್ಟ, ದೇವಸ್ಥಾನವನ್ನು ಅಭಿವೃದ್ಧಿಪಡಿಸುವ ಚಿಂತನೆ ಇದೆ ಎಂದರು.

ಮರಳುಗಾರಿಕೆ ಶೀಘ್ರ ಪ್ರಾರಂಭ
ಜಿಲ್ಲೆಯಲ್ಲಿ ಮರಳುಗಾರಿಕೆ ಪ್ರಾರಂಭಿಸಲು ಜಿಲ್ಲಾಡಳಿತದ ಮಟ್ಟದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಆಡಳಿತಾತ್ಮಕ ಸಮಸ್ಯೆ ನಿವಾರಣೆ ಮಾಡಿ ಶೀಘ್ರದಲ್ಲಿ ಮರಳು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕರಾವಳಿ ತೀರ ಸಂರಕ್ಷಣೆ
ಮೀನುಗಾರಿಕೆ ಇಲಾಖೆ ಮತ್ತು ಬಂದರು ಇಲಾಖೆ ಒಟ್ಟಾಗಿ ಇರಬೇಕು ಎಂಬ ಬೇಡಿಕೆ ಈಡೇರಿದೆ. ಕಡಲ ತೀರ ಸಂರಕ್ಷಣೆಗೆ ಆದ್ಯತೆ ನೀಡಲಾಗುವುದು. ಅಸಂಘಟಿತ ವಲಯ ಕಾರ್ಮಿಕರಲ್ಲಿ ಮೀನುಗಾರರನ್ನು ಸೇರಿಸಲು ಸಭೆ ನಡೆಸಲಾಗಿದೆ ಎಂದರು.

ಪಕ್ಷ ಸೂಚನೆ ಕಾಂಗ್ರೆಸ್‌ಗೂ ಅನ್ವಯ!
ಯಡಿಯೂರಪ್ಪ ದಿಲ್ಲಿ ಸಿಎಂ ಎಂಬ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್‌ ಮತ್ತು ರಾಷ್ಟ್ರೀಯ ಅಧ್ಯಕ್ಷರು ಸರಕಾರ  ಪಕ್ಷಕ್ಕೆ ಕೆಲವು ಸಲಹೆ ಸೂಚನೆ ನೀಡುತ್ತಾರೆ. ಇದನ್ನು ಪಾಲಿಸಲಾಗುತ್ತದೆ. ಸಿದ್ದರಾಮಯ್ಯ ರಾಹುಲ್‌ ಗಾಂಧಿ ಮಾತು ಕೇಳಿಲ್ಲವೇ ಎಂದು ಪ್ರಶ್ನಿಸಿದರು.

ಉಸ್ತುವಾರಿ ಸಚಿವರ ನೇಮಕದಲ್ಲಿ ಗೊಂದಲಗಳಿಲ್ಲ. ಆಡಳಿತಾತ್ಮಕ ಅನುಕೂಲಕ್ಕಾಗಿ ಮೂರು ಡಿಸಿಎಂ ಹುದ್ದೆ ಸೃಷ್ಟಿಸಲಾಗಿದೆ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ದೂರ ಇಡುವುದಕ್ಕಾಗಿ ಸರಕಾರ ರಚಿಸಿದ್ದವು ಎಂದರು.

ಶಾಸಕ ರಘುಪತಿ ಭಟ್‌, ಸಚಿವರ ಪತ್ನಿ ಶಾಂತಾ, ಅರ್ಚಕ ನವೀನ್‌ ಶಿವತ್ತಾಯ, ಆಡಳಿತ ಮಂಡಳಿ ಸದಸ್ಯ ಕೃಷ್ಣಮೂರ್ತಿ ಶಿವತ್ತಾಯ, ಎಂಜಿನಿಯರ್‌ ರಮೇಶ್‌ ರಾವ್‌, ನಗರ ಸಭಾ ಸದಸ್ಯರಾದ ಸುಮಿತ್ರಾ ನಾಯಕ್‌, ಮಂಜುನಾಥ ಶೆಟ್ಟಿಗಾರ್‌, ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ್‌, ಜಯಂತಿ ಪೂಜಾರಿ, ಗಿರೀಶ್‌ ಅಂಚನ್‌, ಗಿರಿಧರ್‌ ಕರಂಬಳ್ಳಿ, ಮಾಜಿ ನಗರಸಭಾಧ್ಯಕ್ಷ ಹೆರ್ಗ ದಿನಕರ ಶೆಟ್ಟಿ, ಹರಿಕೃಷ್ಣ ಶಿವತ್ತಾಯ, ಸತೀಶ್‌ ಕುಮಾರ್‌, ಶ್ರೀನಿವಾಸ ಬಲ್ಲಾಳ್‌, ಗಿರಿಧರ ಆಚಾರ್ಯ, ವಾಸುದೇವ ಭಟ್‌, ಶಾಂತಾ, ದಾವೂದ್‌ ಅಬೂಬಕ್ಕರ್‌, ಮೆಲ್ವಿನ್‌ ಡಿ’ಸೋಜಾ ಉಪಸ್ಥಿತರಿದ್ದರು.

ಸುವರ್ಣ ತ್ರಿಭುಜ ಅವಘಡ: ಕೇಂದ್ರಕ್ಕೆ ಪತ್ರ
ಸುವರ್ಣ ತ್ರಿಭುಜ ಬೋಟ್‌ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಸಾಲ ಮರುಪಾವತಿಗೆ ವಿಮೆ ಮೊತ್ತ ಕಡಿತದ ಬಳಿಕವೂ ಸುಮಾರು 25 ಲಕ್ಷ ರೂ. ಅವಶ್ಯವಿದೆ. ಈ ಮೊತ್ತವನ್ನು ಸರಕಾರದಿಂದ ಪಾವತಿಸಲು ಸಿಎಂ ಆದೇಶ ನೀಡಿದ್ದಾರೆ. ನಾಪತ್ತೆಯಾದ ಮೀನುಗಾರರಿಗೆ ಕೇಂದ್ರ ಸರಕಾರದಿಂದ ಗರಿಷ್ಠ ಮೊತ್ತದ ಪರಿಹಾರ ನೀಡಲು ರಾಜ್ಯ ಸರಕಾರದಿಂದ ಪತ್ರ ಕಳುಹಿಸಲಾಗಿದೆ. ಮುಂದೆ ಇಂಥ ಘಟನೆ ಆಗದಂತೆ ಇಸ್ರೋ ನೆರವಿನಿಂದ ಸಂಪರ್ಕ ಸಾಧನ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.