ಸರ್ವಿಸ್‌ ರಸ್ತೆಗಳು ಪಾರ್ಕಿಂಗ್‌ ಸ್ಪಾಟ್‌ಗಳಾಗಿ ಬಳಕೆ!


Team Udayavani, Sep 14, 2021, 4:00 AM IST

ಸರ್ವಿಸ್‌ ರಸ್ತೆಗಳು ಪಾರ್ಕಿಂಗ್‌ ಸ್ಪಾಟ್‌ಗಳಾಗಿ ಬಳಕೆ!

ಕೋಟ:  ರಾಷ್ಟ್ರೀಯ ಹೆದ್ದಾರಿಯಲ್ಲಿ  ಬಸ್‌ ನಿಲುಗಡೆಯ ಸಂದರ್ಭ  ಸರ್ವಿಸ್‌ ರಸ್ತೆ ಅಥವಾ ಬಸ್‌ ವೇಗಳನ್ನು  ಕಡ್ಡಾಯವಾಗಿ ಪ್ರವೇಶಿಸಬೇಕು ಎನ್ನುವ ನಿಯಮವಿದೆ. ಆದರೆ ಬಹುತೇಕ  ಬಸ್‌ಗಳು ಈ ನಿಯಮವನ್ನು ಪಾಲಿಸುತ್ತಿಲ್ಲ ಹಾಗೂ ಅಪಾಯಕಾರಿ ರೀತಿಯಲ್ಲಿ ಮುಖ್ಯ ರಸ್ತೆಯಲ್ಲೇ ನಿಲುಗಡೆಗೊಳಿಸಿ  ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು, ಇಳಿಸುವುದು ಮಾಡಲಾಗುತ್ತದೆ. ಇದರಿಂದಾಗಿ ಪ್ರಯಾಣಿಕರಿಗೆ ಹಾಗೂ ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ.

ಪ್ರಮುಖವಾಗಿ  ಜಿಲ್ಲೆಯ ಕೋಟ, ಬ್ರಹ್ಮಾವರ, ಸಂತೆಕಟ್ಟೆ, ಉಡುಪಿ,  ಕೋಟೇಶ್ವರ, ಬೀಜಾಡಿ, ಅಂಕದ ಕಟ್ಟೆ, ಕುಂದಾಪುರ, ಕಾಪು, ಪಡುಬಿದ್ರಿ  ಮುಂತಾದ ಕಡೆಗಳಲ್ಲಿ ಸರ್ವಿಸ್‌ ರಸ್ತೆ ಇದ್ದು ಎಲ್ಲಿಯೂ ಕೂಡ ಇದನ್ನು  ಬಳಸಿಕೊಳ್ಳುತ್ತಿಲ್ಲ. ಈ ರೀತಿ ಮುಖ್ಯ ರಸ್ತೆಯಲ್ಲಿ ಬಸ್‌ಗಳನ್ನು ನಿಲ್ಲಿಸುವುದರಿಂದ  ಹೆದ್ದಾರಿಯಲ್ಲಿ ವೇಗವಾಗಿ ಸಾಗುವ ವಾಹನ ಸವಾರರು ಗೊಂದಲಕ್ಕೀಡಾಗಿ  ಅಪಘಾತವಾಗುವ ಸಂಭವವಿರುತ್ತದೆ  ಮತ್ತು ರಸ್ತೆ ದಾಟುವವರಿಗೂ ಎದುರಿನಿಂದ ಬರುವ ವಾಹನಗಳನ್ನು ಗುರುತಿಸುವುದು ಕಷ್ಟವಾಗುತ್ತದೆ.  ಬಸ್‌ನಿಂದ ಇಳಿದು ಸರ್ವಿಸ್‌ ರಸ್ತೆ ದಾಟಿ ತೆರಳಬೇಕಿರುವುದರಿಂದ ಮಕ್ಕಳು, ಮಹಿಳೆಯರು, ಹಿರಿಯನಾಗರಿಕರಿಗೆ ಸಮಸ್ಯೆಯಾಗುತ್ತಿದೆ ಹಾಗೂ  ಬಸ್‌ ನಿಲ್ದಾಣ ಬಿಟ್ಟು ಡಿವೈಡರ್‌ನ ಮೇಲೆ ನಿಂತು ಬಸ್‌ಗಾಗಿ  ಕಾಯಬೇಕಾದ ಸ್ಥಿತಿ ಇದೆ.

ಸರ್ವಿಸ್‌ ರಸ್ತೆ ಅನ್ಯ ಕಾರ್ಯಕ್ಕೆ ಬಳಕೆ:

ಸರ್ವಿಸ್‌ ರಸ್ತೆಯಲ್ಲಿ  ಕಾಯಂ ಆಗಿ ವಾಹನಗಳನ್ನು ಪಾರ್ಕಿಂಗ್‌ ಮಾಡುವುದರಿಂದ ಇತರ ವಾಹನಗಳ ಓಡಾಟ, ಜನಸಂಚಾರಕ್ಕೆ ಜಾಗ ಸಾಕಾಗುವುದಿಲ್ಲ. ಹೀಗಾಗಿ ಬಸ್‌ಗಳು ಸರ್ವಿಸ್‌ ರಸ್ತೆಗೆ ಬರಲು ಸಾಧ್ಯವಾಗುತ್ತಿಲ್ಲ ಎನ್ನುವ ಮಾತು ಕೂಡ ಇದೆ.

ಕಡಿವಾಣ ಅಗತ್ಯ:

ಸರ್ವಿಸ್‌ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುವುದರ ವಿರುದ್ಧ  ಸ್ಥಳೀಯಾಡಳಿತ ಹಾಗೂ ಪೊಲೀಸ್‌ ಇಲಾಖೆ ಒಟ್ಟಾಗಿ ಕ್ರಮಕೈಗೊಳ್ಳಬೇಕಿದೆ. ಬಸ್‌ಗಳು ಕಡ್ಡಾಯವಾಗಿ ಸರ್ವಿಸ್‌ ರಸ್ತೆಯನ್ನು ಬಳಸಿಕೊಳ್ಳುವಂತೆ ಆರ್‌.ಟಿ.ಒ. ಕಟ್ಟುನಿಟ್ಟಿನ ನಿರ್ದೇಶನ ನೀಡಿ ಕ್ರಮಕೈಗೊಳ್ಳಬೇಕಿದೆ.

ಸಮಯ ಪಾಲನೆ ಕಷ್ಟ :

ಸರ್ವಿಸ್‌ ರಸ್ತೆಯಲ್ಲಿ  ಕಾಯಂ ಆಗಿ ವಾಹನಗಳನ್ನು ಪಾರ್ಕಿಂಗ್‌ ಮಾಡಲಾಗುತ್ತಿದೆ. ಕೆಲವು ವಾಣಿಜ್ಯ ಸಂಕೀರ್ಣಗಳಿಗೆ ಸರ್ವಿಸ್‌ ರಸ್ತೆಯೇ  ಪಾರ್ಕಿಂಗ್‌ ಸ್ಪಾಟ್‌ಗಳಾಗಿದೆ.  ಇದರಿಂದಾಗಿ ನಡೆದಾಡುವವರಿಗೆ ಹಾಗೂ ಇತರ  ವಾಹನ ಸಂಚಾರಕ್ಕೆ  ಸಾಕಷ್ಟು  ಸಮಸ್ಯೆಯಾಗುತ್ತಿದೆ. ಹೀಗಾಗಿ ಬಸ್‌ಗಳನ್ನು ಸರ್ವಿಸ್‌ ರಸ್ತೆಗೆ ತರುವುದು ಕಷ್ಟ ಮತ್ತು  ಸಮಯ ಪಾಲನೆ ಸಾಧ್ಯವಾಗುವುದಿಲ್ಲ  ಎನ್ನುವುದು  ಬಸ್‌ ಚಾಲಕರು, ನಿರ್ವಾಹಕರ ಅಭಿಪ್ರಾಯವಾಗಿದೆ.

ಹೆಚ್ಚಿನ ಕಡೆಗಳಲ್ಲಿ  ಸರ್ವಿಸ್‌ ರಸ್ತೆಗಳು ಪಾರ್ಕಿಂಗ್‌ ಸ್ಟಾಟ್‌ಗಳಾಗಿ ಬದಲಾಗಿದೆ. ಮುಖ್ಯ ರಸ್ತೆಯಲ್ಲಿ ಬಸ್‌ನಿಂದ  ಇಳಿದು ಸರ್ವಿಸ್‌ ರಸ್ತೆ ದಾಟುವುದು ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಸಾಹಸವಾಗಿದೆ. ಆದ್ದರಿಂದ ಎಲ್ಲ ಬಸ್‌ಗಳು ಸರ್ವಿಸ್‌ ರಸ್ತೆ ಬಳಸುವಂತೆ ಕ್ರಮಕೈಗೊಳ್ಳಬೇಕು. ಸರ್ವಿಸ್‌ ರಸ್ತೆಯಲ್ಲಿ ವಾಹನ ಪಾರ್ಕಿಂಗ್‌ಗೆ ಕಡಿವಾಣ ಹಾಕಬೇಕು. – ಸುರೇಶ್‌ ಮಣೂರು,  ನಿತ್ಯ ಬಸ್‌ ಪ್ರಯಾಣಿಕ

ಸಮಸ್ಯೆ ಈಗಾಗಲೇ ಗಮನದಲ್ಲಿದೆ. ಜಿಲ್ಲೆಯಲ್ಲಿರುವ ಒಂದೊಂದೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದು. ಮುಂದೆ ಈ ಬಗ್ಗೆ ಕೂಡ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ.-ಜೆ.ಪಿ. ಗಂಗಾಧರ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ ಉಡುಪಿ

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.