ಉಡುಪಿ : ಮನೆಗೆ ನುಗ್ಗಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ
Team Udayavani, Jul 3, 2022, 11:04 PM IST
ಉಡುಪಿ : ಈ ವರ್ಷಾರಂಭದಲ್ಲಿ ಅಂಬಾಗಿಲು ಕಕ್ಕುಂಜೆ ನಿವಾಸಿ ಪ್ರಮೀಳಾ ಬಂಗೇರಾ ಅವರ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 2,18,169 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಕೊಂಡಿದ್ದಾರೆ. ಕಕ್ಕುಂಜೆ ಗರೋಡಿ ಬಳಿಯ ನಿವಾಸಿ ಸಂತೋಷ್ ಪೂಜಾರಿ (36) ಹಾಗೂ ಕಟಪಾಡಿ ಮಟ್ಟು ನಿವಾಸಿ ರಾಕೇಶ್ ಪಾಲನ್ (37) ಬಂಧಿತ ಆರೋಪಿಗಳು.
ಇವರು ಕಕ್ಕುಂಜೆಯ ಪ್ರಮೀಳಾ ಅವರ ಮನೆಗೆ ನುಗ್ಗಿ ಎರಡು ಬಂಗಾರದ ಸರ, ಎರಡು ಬಳೆ, ಮೂರು ಉಂಗುರ, ಒಂದು ಜತೆ ಕಿವಿಯೋಲೆ, ಒಂದು ಬ್ರೇಸ್ಲೆಟ್ ಸಹಿತ ಒಟ್ಟು 3.15 ಲ.ರೂ. ಮೌಲ್ಯದ 9 ಪವನ್ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಈ ಬಗ್ಗೆ ಪ್ರಮೀಳಾ ಅವರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮನೆಗೆ ಬರುತ್ತಿದ್ದ ಸಂತೋಷ್ನ ಮೇಲೆ ಸಂಶಯ ಇರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು ಆರೋಪಿ ಸಂತೋಷ್ ಪೂಜಾರಿಯನ್ನು ಕೃಷ್ಣ ಮಠದ ಗೀತಾ ಮಂದಿರದ ಬಳಿ ಹಾಗೂ ರಾಕೇಶ್ ಪಾಲನ್ನನ್ನು ಉಡುಪಿಯ ಉಜ್ವಲ್ ಬಾರ್ ಬಳಿ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ