ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

ಜನರ ಬೇಡಿಕೆಗೆ ಅನುಗುಣವಾಗಿ ಸ್ಪಂದನೆ ;  ಸಮಯ ಪಾಲನೆಯಲ್ಲಿಯೂ ಉತ್ತಮ ಸಾಧನೆ

Team Udayavani, Oct 25, 2021, 5:53 AM IST

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

ಉಡುಪಿ: ಜಿಲ್ಲೆಯ ಸುಮಾರು 150 ಕೇಂದ್ರಗಳಲ್ಲಿ ನಡೆಯು ತ್ತಿರುವ ಕೋವಿಡ್‌ ವ್ಯಾಕ್ಸಿನೇಶನ್‌ ವಿತರಣೆಯಲ್ಲಿ ಮಣಿಪಾಲದ ನಗರ ಆರೋಗ್ಯ ಕೇಂದ್ರ ಪ್ರಥಮ ಸ್ಥಾನದಲ್ಲಿದೆ.

ವರ್ಷಾರಂಭ ಜ. 16ರಂದು ಲಸಿಕೆ ವಿತರಿಸಲು ಆರಂಭವಾಯಿತು. ಮಣಿಪಾಲ ಕೇಂದ್ರದಲ್ಲಿ ಜ. 21ರಂದು ಆರಂಭಗೊಂಡಿತು. ಮೊದಲ ಕೆಲವು ದಿನ ಮಣಿಪಾಲ ವೇಣುಗೋಪಾಲಸ್ವಾಮಿ ದೇವಸ್ಥಾನದ ಬಳಿಯ ನಗರ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಆಗ ಸ್ಥಳಾಭಾವ ಉಂಟಾಯಿತು. ಬಳಿಕ ಪಕ್ಕದಲ್ಲಿರುವ ಮಾಹೆ ಅತಿಥಿಗೃಹದಲ್ಲಿ ಫೆಬ್ರವರಿ- ಮಾರ್ಚ್‌ ವೇಳೆ ಲಸಿಕೆಯನ್ನು ವಿತರಿಸಲಾಯಿತು. ಜನರು ಇನ್ನಷ್ಟು ಹೆಚ್ಚಿಗೆ ಬಂದ ಕಾರಣ ಮಣಿಪಾಲ ಮಾಧವಕೃಪಾ ಶಾಲೆಗೆ ಶಿಬಿರವನ್ನು ಸ್ಥಳಾಂತರಿಸಲಾಯಿತು. ಮಾಧವಕೃಪಾ ಶಾಲೆಯಲ್ಲದೆ ಸುಮಾರು 10 ಕಡೆಗಳಲ್ಲಿ ವಿವಿಧ ದಿನಗಳಲ್ಲಿ ಬೇಡಿಕೆಗೆ ಅನುಸಾರ ಶಿಬಿರಗಳನ್ನು ನಡೆಸಲಾಗಿತ್ತು. ಇನ್ನು 2-3 ದಿನಗಳಲ್ಲಿ ಮತ್ತೆ ಶಿಬಿರವನ್ನು ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ.

ಸುಮಾರು 75ಸಾವಿರ ಡೋಸ್‌ ಲಸಿಕೆ
ಮಣಿಪಾಲ ಕೇಂದ್ರದ ವ್ಯಾಪ್ತಿಯಲ್ಲಿ ಮಣಿಪಾಲ, ಕಡಿಯಾಳಿ, ಕಕ್ಕುಂಜೆ, ಕುಂಜಿಬೆಟ್ಟು, ಕರಂಬಳ್ಳಿ, ಸಗ್ರಿ, ಪೆರಂಪಳ್ಳಿ, ದೊಡ್ಡಣಗುಡ್ಡೆ, ಇಂದ್ರಾಳಿ ಹೀಗೆ 9 ವಾರ್ಡ್‌ಗಳಿವೆ. ಇಲ್ಲಿನ 18 ವರ್ಷ ಮೀರಿದ ಜನಸಂಖ್ಯೆ 40,990. ಜಿಲ್ಲೆಯಲ್ಲಿ ಇದುವರೆಗೆ ನಡೆದ ಒಟ್ಟು 13.89 ಲಕ್ಷ ಡೋಸ್‌ ಲಸಿಕೆ ವಿತರಣೆಯಲ್ಲಿ ಮಣಿಪಾಲ ಕೇಂದ್ರದಲ್ಲಿ ಪ್ರಥಮ ಮತ್ತು ದ್ವಿತೀಯ ಡೋಸ್‌ ಸೇರಿ ಒಟ್ಟು ಸುಮಾರು 75,000 ಡೋಸ್‌ ಲಸಿಕೆಯನ್ನು ನೀಡಲಾಗಿದೆ. ಒಂದು ದಿನದಲ್ಲಿ ಗರಿಷ್ಠ 1,400 ಡೋಸ್‌ ಲಸಿಕೆ ನೀಡಿದ್ದೂ ಇದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಲಸಿಕೆ ನೀಡಿದ ಕೇಂದ್ರ ಇದೆನಿಸಿದೆ. 700-800 ಜನರು ಕುಳಿತುಕೊಳ್ಳುವಂತೆ ಸ್ಥಳಾವಕಾಶ, ಜನಸಾಂದ್ರತೆ, ಒಬ್ಬರು ವೈದ್ಯಾಧಿಕಾರಿ, ಸ್ಟಾಫ್ ನರ್ಸ್‌ ಇಬ್ಬರು, ಎಎನ್‌ಎಂ ಏಳು, ಆಶಾ ಕಾರ್ಯಕರ್ತರು 20 ಮಂದಿ ಇದ್ದು ಇವರೆಲ್ಲರ ಪರಿಶ್ರಮ ಈ ಸಾಧನೆಗೆ ಕಾರಣವಾಗಿದೆ.

ಮಣಿಪಾಲದಲ್ಲಿ ಇನ್ನೊಂದೆಡೆ ಕಸ್ತೂರ್ಬಾ ಆಸ್ಪತ್ರೆಯಲ್ಲಿಯೂ 80,000 ಲಸಿಕೆ ವಿತರಣೆಯಾಗಿದೆ. ಇದರಲ್ಲಿ ಮಾಹೆ ವಿ.ವಿ.ಯಿಂದ ಸಿಬಂದಿ, ಸಿಬಂದಿಗಳ ಮನೆಯವರು ಮತ್ತು ವಿದ್ಯಾರ್ಥಿಗಳಿಗೆ ಉಚಿತವಾಗಿ ಸುಮಾರು 30,000 ಲಸಿಕೆ ನೀಡಲಾಗಿತ್ತು.

ಇದನ್ನೂ ಓದಿ:ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು

ಮಾದರಿ ಕೇಂದ್ರ
ಮಣಿಪಾಲ ಮಾಧವಕೃಪಾ ಶಾಲೆಯ ವಿಶಾಲ ಸಭಾಂಗಣದಲ್ಲಿ ಅತಿ ಹೆಚ್ಚು ಜನರಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಲಸಿಕೆ ನೀಡಲು ಸಾಧ್ಯವಾದುದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಗಮನಕ್ಕೆ ಬಂದಿದೆ. ಇದೊಂದು ಮಾದರಿ ಶಿಬಿರ ಎಂದು ಕೇಂದ್ರ, ರಾಜ್ಯ ಮಟ್ಟದಲ್ಲಿ ಗುರುತಿಸಿ ಇತರ ಭಾಗಗಳಲ್ಲಿಯೂ ವಿಶಾಲ ಸ್ಥಳಗಳಲ್ಲಿ ಶಿಬಿರಗಳನ್ನು ನಡೆಸಲಾಗಿದೆ.

ಸಮೂಹ ಪ್ರಯತ್ನ- ಸ್ಪಂದನೆ
ಮಣಿಪಾಲ ಆರೋಗ್ಯ ಕೇಂದ್ರದಿಂದ ಉತ್ತಮ ಸಮೂಹ ಪ್ರಯತ್ನ ನಡೆದಿದೆ. ಯೋಜನಾಬದ್ಧ ಸೆಶನ್‌ ನಡೆಸಲಾಗಿದೆ. ಸಮಯ ಪಾಲನೆಯಲ್ಲಿಯೂ ಉತ್ತಮ ಸಾಧನೆ ನಡೆದಿದೆ. ಜನರ ಬೇಡಿಕೆಗೆ ಅನುಗುಣವಾಗಿ ಸ್ಪಂದಿಸಿದ್ದಾರೆ.
-ಡಾ| ನಾಗಭೂಷಣ ಉಡುಪ, ಜಿಲ್ಲಾ ಆರೋಗ್ಯಾಧಿಕಾರಿ, ಉಡುಪಿ.

ಎಲ್ಲರ ಸಹಕಾರದಿಂದ ಸಾಧನೆ
ಮಣಿಪಾಲ ನಗರ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಉತ್ತಮ ಪ್ರಮಾಣದಲ್ಲಿ ಲಸಿಕಾಕರಣ ನಡೆಯಲು ಕೇಂದ್ರದ ಎಲ್ಲ ಸಿಬಂದಿ, ಆಶಾ ಕಾರ್ಯಕರ್ತರು, ಸ್ವಯಂಸೇವಕರು, ಜನಪ್ರತಿನಿಧಿಗಳು, ಮಾಧವಕೃಪಾ ಶಾಲೆ, ಮಾಹೆ ಆಡಳಿತ ಮಂಡಳಿ, ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾಡಳಿತದ ನಿರಂತರ ಸಹಕಾರ, ಪ್ರಯತ್ನವೇ ಕಾರಣವಾಗಿದೆ.
-ಡಾ| ಶಾಮಿನಿ ಕುಮಾರ್‌, ವೈದ್ಯಾಧಿಕಾರಿ, ನಗರ ಆರೋಗ್ಯ ಕೇಂದ್ರ, ಮಣಿಪಾಲ.

 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.